<p><strong>ಯಾದಗಿರಿ:</strong> ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಗುರುವಾರ ಪ್ರಕಟವಾಗಿದ್ದು, ಜಿಲ್ಲೆಯು ಈ ಬಾರಿ ಕಳೆದ ವರ್ಷಕ್ಕಿಂತ ಶೇ 29.81ರಷ್ಟು ಏರಿಕೆಯೊಂದಿಗೆ ಫಲಿತಾಂಶ ವೃದ್ಧಿಯಲ್ಲಿ ರಾಜ್ಯದಲ್ಲಿಯೇ ಅಗ್ರಸ್ಥಾನ ಸಂಪಾದಿಸಿದೆ.</p>.<p>2025ರಲ್ಲಿ ಶೇ 62.1 (ಮೂರು ಪರೀಕ್ಷೆ ಸೇರಿ) ಫಲಿತಾಂಶದೊಂದಿಗೆ ರಾಜ್ಯದಲ್ಲಿ 33ನೇ ಸ್ಥಾನ ಪಡೆದಿತ್ತು. ಈ ವರ್ಷ ಶೇ 91.89ರಷ್ಟು ಫಲಿತಾಂಶ ಗಳಿಸಿ ರಾಜ್ಯದಲ್ಲಿ 31ನೇ ಸ್ಥಾನ ಗಳಿಸಿದೆ. ಒಂದೇ ವರ್ಷದಲ್ಲಿ ಶೇ 29.81ರಷ್ಟು ಫಲಿತಾಂಶ ಹೆಚ್ಚಳವಾಗಿರುವುದು ಶಿಕ್ಷಕರ ಮತ್ತು ವಿದ್ಯಾರ್ಥಿಗಳ ಶ್ರಮಕ್ಕೆ ಹಿಡಿದ ಕೈಗನ್ನಡಿಯಾಗಿದೆ.</p>.<p>ವರ್ಷದೊಳಗೆ ಹಳೆಯ ಎಲ್ಲಾ ದಾಖಲೆಗಳನ್ನು ಹಿಂದಿಕ್ಕಿದ ಜಿಲ್ಲೆಯು ಶೇ 91ರ ಗಡಿ ದಾಟಿದೆ. ಶಾಲಾ ಶಿಕ್ಷಣ ಇಲಾಖೆಯ ಸಾಧನೆ ಹಾಗೂ ಶಿಕ್ಷಕರ ಶ್ರಮಕ್ಕೆ ಪೋಷಕರ ವಲಯದಲ್ಲಿ ಭಾರಿ ಮೆಚ್ಚಿಗೆ ವ್ಯಕ್ತವಾಗುತ್ತಿದೆ. ಶೇ 91.89ರಷ್ಟು ಫಲಿತಾಂಶವನ್ನು ಚಾಮರಾಜನಗರದೊಂದಿಗೆ ಯಾದಗಿರಿಯೂ ಪಡೆದಿದ್ದು, ಬೆಂಗಳೂರು ದಕ್ಷಿಣ, ಚಿಕ್ಕಬಳ್ಳಾಪುರ, ಮಧುಗಿರಿ ಹಾಗೂ ಕಲಬುರಗಿ ಜಿಲ್ಲೆಗಳಿಗಿಂತ ಮೇಲಿನ ಸ್ಥಾನ ಅಲಂಕರಿಸಿದ್ದು ಒಳ್ಳೆಯ ಬೆಳೆವಣಿಗೆಯಾಗಿದೆ.</p>.<p>ಮಾರ್ಚ್ 18ರಿಂದ ಏಪ್ರಿಲ್ 2ರವರೆಗೆ ನಡೆದ ಪರೀಕ್ಷೆಗೆ 18,277 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದರು. 14,411 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 13,242 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ.</p>.<p>ಪರೀಕ್ಷೆಗೆ ಕುಳಿತ 6,888 ಬಾಲಕರ ಪೈಕಿ 6,103 (ಶೇ 88.66ರಷ್ಟು) ಬಾಲಕರು ತೇರ್ಗಡೆಯಾಗಿದ್ದಾರೆ. 7,523 ಬಾಲಕಿಯರಲ್ಲಿ 7,139 ಬಾಲಕಿಯರು ಉತ್ತೀರ್ಣರಾಗಿದ್ದಾರೆ. ಶೇ 94.90ರಷ್ಟು ತೇರ್ಗಡೆಯೊಂದಿಗೆ ಎಂದಿನಂತೆ ಈ ಬಾರಿಯೂ ಬಾಲಕಿಯರು ಮೇಲುಗೈ ಸಾಧಿಸಿದ್ದಾರೆ.</p>.<p>ನಗರ ಪ್ರದೇಶದ 4,586 ವಿದ್ಯಾರ್ಥಿಗಳು ಪರೀಕ್ಷೆಗೆ ಕುಳಿತಿದ್ದು, ಅವರಲ್ಲಿ 4,157 (ಶೇ 90.65) ವಿದ್ಯಾರ್ಥಿಗಳು ಪಾಸಾಗಿದ್ದಾರೆ. ಗ್ರಾಮೀಣ ಭಾಗದ 9,825 ವಿದ್ಯಾರ್ಥಿಗಳಲ್ಲಿ 9,085 ವಿದ್ಯಾರ್ಥಿಗಳು ಪಾಸಾಗಿ ಶೇ 92.47ರಷ್ಟು ಫಲಿತಾಂಶ ದಾಖಲಿಸಿದ್ದಾರೆ.</p>.<p>169 ಸರ್ಕಾರಿ ಶಾಲೆಗಳು ಶೇ 92.27ರಷ್ಟು, 17 ಅನುದಾನಿತ ಶಾಲೆಗಳು ಶೇ 89.58ರಷ್ಟು ಹಾಗೂ 103 ಅನುದಾನ ರಹಿತ ಶಾಲೆಗಳು ಶೇ 91.57ರಷ್ಟು ಫಲಿತಾಂಶ ದಾಖಲಿಸಿವೆ</p>.<p>ಸಾಮೂಹಿಕ ಶ್ರಮಕ್ಕೆ ಸಿಕ್ಕ ಪ್ರತಿಫಲ: ಮಕ್ಕಳ ಶೈಕ್ಷಣಿಕ ಗುಣಮಟ್ಟ ವೃದ್ಧಿ ಮತ್ತು ಗುಣಾತ್ಮಕ ಶಿಕ್ಷಣ ಕೊಡಲು ಫೌಂಡೇಷನ್ ಲರ್ನಿಂಗ್ ಆ್ಯಂಡ್ ನ್ಯೂಮರಿಕ್ ಮತ್ತು ಸೇತುಬಂಧು, ಪರಿಹಾರ ಬೋಧನೆಯೊಂದಿಗೆ ಡಿಸೆಂಬರ್ ಅಂತ್ಯದೊಳಗೆ ಪಠ್ಯಕ್ರಮ ಪೂರ್ಣಗೊಳಿಸಲಾಗಿತ್ತು. ಶೈಕ್ಷಣಿಕ ಸುಧಾರಣೆಗೆ ಇಲಾಖೆಯ ಅಧಿಕಾರಿಗಳು ನಿರಂತರವಾಗಿ ನಿಗಾ ಇರಿಸಿ, ಪ್ರತಿಯೊಂದು ಚಟುವಟಿಕೆಗಳಿಗೆ ಶಿಕ್ಷಕರು ಮತ್ತು ಪೋಷಕರು ಕೈಜೋಡಿಸಿದ್ದರಿಂದ ಈ ಫಲಿತಾಂಶ ಸಾಧ್ಯವಾಗಿದೆ ಎಂಬುದು ಅಧಿಕಾರಿಗಳ ಹೇಳಿಕೆ.</p>.<p>ಶಿಕ್ಷಕರ ಕೊರತೆ ನಡುವೆ ಉತ್ತಮ ಫಲಿತಾಂಶ: ಪ್ರೌಢಶಾಲೆಗಳಿಗೆ ಮಂಜೂರಾದ 1,548 ಶಿಕ್ಷಕರ ಹುದ್ದೆಗಳ ಪೈಕಿ 899 ಶಿಕ್ಷಕರು ಕಾರ್ಯನಿರ್ವಹಿಸುತ್ತಿದ್ದಾರೆ. 649 (ಶೇ 41.92) ಶಿಕ್ಷಕರ ಹುದ್ದೆಗಳು ಖಾಲಿ ಇದ್ದು, ಅವುಗಳಲ್ಲಿ 545 ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಂಡು ಬೋಧನೆ ಮಾಡಲಾಗಿದೆ. ಶಿಕ್ಷಕರ ಕೊರತೆಯ ನಡುವೆಯೂ ಉತ್ತಮ ಫಲಿತಾಂಶ ದಾಖಲಾಗಿದೆ.</p>.<div><blockquote>ಜುಲೈ ತಿಂಗಳಿಂದಲೇ ವಿಶೇಷ ತರಗತಿಗಳನ್ನು ಆರಂಭಿಸಿದ್ದು, ಇಲಾಖೆ ವಹಿಸಿದ್ದ ಪ್ರತಿಯೊಂದು ಚಟುವಟಿಕೆಯನ್ನು ಶಿಕ್ಷಕರ ಮತ್ತು ಅತಿಥಿ ಶಿಕ್ಷಕರ ಬದ್ಧತೆ ಮತ್ತು ಪ್ರಾಮಾಣಿಕವಾಗಿ ಮಾಡಿದ್ದರಿಂದ ಫಲಿತಾಂಶದಲ್ಲಿ ಸುಧಾರಣೆ ಕಂಡಿದೆ. </blockquote><span class="attribution">-ಚನ್ನಬಸಪ್ಪ ಮುಧೋಳ, ಡಿಡಿಪಿಐ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಾದಗಿರಿ:</strong> ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಗುರುವಾರ ಪ್ರಕಟವಾಗಿದ್ದು, ಜಿಲ್ಲೆಯು ಈ ಬಾರಿ ಕಳೆದ ವರ್ಷಕ್ಕಿಂತ ಶೇ 29.81ರಷ್ಟು ಏರಿಕೆಯೊಂದಿಗೆ ಫಲಿತಾಂಶ ವೃದ್ಧಿಯಲ್ಲಿ ರಾಜ್ಯದಲ್ಲಿಯೇ ಅಗ್ರಸ್ಥಾನ ಸಂಪಾದಿಸಿದೆ.</p>.<p>2025ರಲ್ಲಿ ಶೇ 62.1 (ಮೂರು ಪರೀಕ್ಷೆ ಸೇರಿ) ಫಲಿತಾಂಶದೊಂದಿಗೆ ರಾಜ್ಯದಲ್ಲಿ 33ನೇ ಸ್ಥಾನ ಪಡೆದಿತ್ತು. ಈ ವರ್ಷ ಶೇ 91.89ರಷ್ಟು ಫಲಿತಾಂಶ ಗಳಿಸಿ ರಾಜ್ಯದಲ್ಲಿ 31ನೇ ಸ್ಥಾನ ಗಳಿಸಿದೆ. ಒಂದೇ ವರ್ಷದಲ್ಲಿ ಶೇ 29.81ರಷ್ಟು ಫಲಿತಾಂಶ ಹೆಚ್ಚಳವಾಗಿರುವುದು ಶಿಕ್ಷಕರ ಮತ್ತು ವಿದ್ಯಾರ್ಥಿಗಳ ಶ್ರಮಕ್ಕೆ ಹಿಡಿದ ಕೈಗನ್ನಡಿಯಾಗಿದೆ.</p>.<p>ವರ್ಷದೊಳಗೆ ಹಳೆಯ ಎಲ್ಲಾ ದಾಖಲೆಗಳನ್ನು ಹಿಂದಿಕ್ಕಿದ ಜಿಲ್ಲೆಯು ಶೇ 91ರ ಗಡಿ ದಾಟಿದೆ. ಶಾಲಾ ಶಿಕ್ಷಣ ಇಲಾಖೆಯ ಸಾಧನೆ ಹಾಗೂ ಶಿಕ್ಷಕರ ಶ್ರಮಕ್ಕೆ ಪೋಷಕರ ವಲಯದಲ್ಲಿ ಭಾರಿ ಮೆಚ್ಚಿಗೆ ವ್ಯಕ್ತವಾಗುತ್ತಿದೆ. ಶೇ 91.89ರಷ್ಟು ಫಲಿತಾಂಶವನ್ನು ಚಾಮರಾಜನಗರದೊಂದಿಗೆ ಯಾದಗಿರಿಯೂ ಪಡೆದಿದ್ದು, ಬೆಂಗಳೂರು ದಕ್ಷಿಣ, ಚಿಕ್ಕಬಳ್ಳಾಪುರ, ಮಧುಗಿರಿ ಹಾಗೂ ಕಲಬುರಗಿ ಜಿಲ್ಲೆಗಳಿಗಿಂತ ಮೇಲಿನ ಸ್ಥಾನ ಅಲಂಕರಿಸಿದ್ದು ಒಳ್ಳೆಯ ಬೆಳೆವಣಿಗೆಯಾಗಿದೆ.</p>.<p>ಮಾರ್ಚ್ 18ರಿಂದ ಏಪ್ರಿಲ್ 2ರವರೆಗೆ ನಡೆದ ಪರೀಕ್ಷೆಗೆ 18,277 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದರು. 14,411 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 13,242 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ.</p>.<p>ಪರೀಕ್ಷೆಗೆ ಕುಳಿತ 6,888 ಬಾಲಕರ ಪೈಕಿ 6,103 (ಶೇ 88.66ರಷ್ಟು) ಬಾಲಕರು ತೇರ್ಗಡೆಯಾಗಿದ್ದಾರೆ. 7,523 ಬಾಲಕಿಯರಲ್ಲಿ 7,139 ಬಾಲಕಿಯರು ಉತ್ತೀರ್ಣರಾಗಿದ್ದಾರೆ. ಶೇ 94.90ರಷ್ಟು ತೇರ್ಗಡೆಯೊಂದಿಗೆ ಎಂದಿನಂತೆ ಈ ಬಾರಿಯೂ ಬಾಲಕಿಯರು ಮೇಲುಗೈ ಸಾಧಿಸಿದ್ದಾರೆ.</p>.<p>ನಗರ ಪ್ರದೇಶದ 4,586 ವಿದ್ಯಾರ್ಥಿಗಳು ಪರೀಕ್ಷೆಗೆ ಕುಳಿತಿದ್ದು, ಅವರಲ್ಲಿ 4,157 (ಶೇ 90.65) ವಿದ್ಯಾರ್ಥಿಗಳು ಪಾಸಾಗಿದ್ದಾರೆ. ಗ್ರಾಮೀಣ ಭಾಗದ 9,825 ವಿದ್ಯಾರ್ಥಿಗಳಲ್ಲಿ 9,085 ವಿದ್ಯಾರ್ಥಿಗಳು ಪಾಸಾಗಿ ಶೇ 92.47ರಷ್ಟು ಫಲಿತಾಂಶ ದಾಖಲಿಸಿದ್ದಾರೆ.</p>.<p>169 ಸರ್ಕಾರಿ ಶಾಲೆಗಳು ಶೇ 92.27ರಷ್ಟು, 17 ಅನುದಾನಿತ ಶಾಲೆಗಳು ಶೇ 89.58ರಷ್ಟು ಹಾಗೂ 103 ಅನುದಾನ ರಹಿತ ಶಾಲೆಗಳು ಶೇ 91.57ರಷ್ಟು ಫಲಿತಾಂಶ ದಾಖಲಿಸಿವೆ</p>.<p>ಸಾಮೂಹಿಕ ಶ್ರಮಕ್ಕೆ ಸಿಕ್ಕ ಪ್ರತಿಫಲ: ಮಕ್ಕಳ ಶೈಕ್ಷಣಿಕ ಗುಣಮಟ್ಟ ವೃದ್ಧಿ ಮತ್ತು ಗುಣಾತ್ಮಕ ಶಿಕ್ಷಣ ಕೊಡಲು ಫೌಂಡೇಷನ್ ಲರ್ನಿಂಗ್ ಆ್ಯಂಡ್ ನ್ಯೂಮರಿಕ್ ಮತ್ತು ಸೇತುಬಂಧು, ಪರಿಹಾರ ಬೋಧನೆಯೊಂದಿಗೆ ಡಿಸೆಂಬರ್ ಅಂತ್ಯದೊಳಗೆ ಪಠ್ಯಕ್ರಮ ಪೂರ್ಣಗೊಳಿಸಲಾಗಿತ್ತು. ಶೈಕ್ಷಣಿಕ ಸುಧಾರಣೆಗೆ ಇಲಾಖೆಯ ಅಧಿಕಾರಿಗಳು ನಿರಂತರವಾಗಿ ನಿಗಾ ಇರಿಸಿ, ಪ್ರತಿಯೊಂದು ಚಟುವಟಿಕೆಗಳಿಗೆ ಶಿಕ್ಷಕರು ಮತ್ತು ಪೋಷಕರು ಕೈಜೋಡಿಸಿದ್ದರಿಂದ ಈ ಫಲಿತಾಂಶ ಸಾಧ್ಯವಾಗಿದೆ ಎಂಬುದು ಅಧಿಕಾರಿಗಳ ಹೇಳಿಕೆ.</p>.<p>ಶಿಕ್ಷಕರ ಕೊರತೆ ನಡುವೆ ಉತ್ತಮ ಫಲಿತಾಂಶ: ಪ್ರೌಢಶಾಲೆಗಳಿಗೆ ಮಂಜೂರಾದ 1,548 ಶಿಕ್ಷಕರ ಹುದ್ದೆಗಳ ಪೈಕಿ 899 ಶಿಕ್ಷಕರು ಕಾರ್ಯನಿರ್ವಹಿಸುತ್ತಿದ್ದಾರೆ. 649 (ಶೇ 41.92) ಶಿಕ್ಷಕರ ಹುದ್ದೆಗಳು ಖಾಲಿ ಇದ್ದು, ಅವುಗಳಲ್ಲಿ 545 ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಂಡು ಬೋಧನೆ ಮಾಡಲಾಗಿದೆ. ಶಿಕ್ಷಕರ ಕೊರತೆಯ ನಡುವೆಯೂ ಉತ್ತಮ ಫಲಿತಾಂಶ ದಾಖಲಾಗಿದೆ.</p>.<div><blockquote>ಜುಲೈ ತಿಂಗಳಿಂದಲೇ ವಿಶೇಷ ತರಗತಿಗಳನ್ನು ಆರಂಭಿಸಿದ್ದು, ಇಲಾಖೆ ವಹಿಸಿದ್ದ ಪ್ರತಿಯೊಂದು ಚಟುವಟಿಕೆಯನ್ನು ಶಿಕ್ಷಕರ ಮತ್ತು ಅತಿಥಿ ಶಿಕ್ಷಕರ ಬದ್ಧತೆ ಮತ್ತು ಪ್ರಾಮಾಣಿಕವಾಗಿ ಮಾಡಿದ್ದರಿಂದ ಫಲಿತಾಂಶದಲ್ಲಿ ಸುಧಾರಣೆ ಕಂಡಿದೆ. </blockquote><span class="attribution">-ಚನ್ನಬಸಪ್ಪ ಮುಧೋಳ, ಡಿಡಿಪಿಐ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>