<p><strong>ಯಾದಗಿರಿ: </strong>ನಗರ ಸೇರಿದಂತೆ ಜಿಲ್ಲೆಯಲ್ಲಿ ಗುರುವಾರ ಎಸ್ಸೆಸ್ಸೆಲ್ಸಿ ಪರೀಕ್ಷೆ ಸುಗಮವಾಗಿ ನಡೆಯಿತು. ಶೇ 99ರಷ್ಟು ವಿದ್ಯಾರ್ಥಿಗಳು ಹಾಜರಾಗಿದ್ದರು. ಎಲ್ಲರ ಚಿತ್ತ ಇದೀಗ ಫಲಿತಾಂಶದತ್ತ ತಿರುಗಿದೆ.</p>.<p>ಕೋವಿಡ್ ಮಧ್ಯೆಯೂ ಪರೀಕ್ಷೆಗಳನ್ನು ಸುಗಮವಾಗಿ ನಡೆಸಿದ ಶಿಕ್ಷಣ ಇಲಾಖೆ ಅಧಿಕಾರಿಗಳು, ಪೋಷಕರು ನಿಟ್ಟುಸಿರು ಬಿಟ್ಟರು. ಕೋವಿಡ್ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಪರೀಕ್ಷೆ ಎದುರಿಸಿದರು.</p>.<p>ಎರಡು ಪರೀಕ್ಷೆ (ತಲಾ ಮೂರು ವಿಷಯಗಳು) ಮುಗಿದಿದ್ದು, ಇನ್ನೇನ್ನಿದ್ದರೂ ಫಲಿತಾಂಶಕ್ಕಾಗಿ ಎದುರು ನೋಡುತ್ತಿದ್ದಾರೆ. ಈ ಬಾರಿ ಒಎಂಆರ್ ಶೀಟ್ನಲ್ಲಿ ಸರಿ ಉತ್ತರ ಗುರುತಿಸುವುದು ಬಹುತೇಕ ಎಲ್ಲರಿಗೂ ಸುಲಭವಾಗಿತ್ತು.</p>.<p class="Subhead">ಎಲ್ಲರೂ ಪಾಸ್: ಪರೀಕ್ಷೆ ನಡೆಸಿದರೂ ಯಾರನ್ನೂ ಅನುತ್ತೀರ್ಣ ಮಾಡುವಂತಿಲ್ಲ. ಇದರಿಂದ ಪರೀಕ್ಷೆ ಬರೆದವರು ಎಲ್ಲರೂ ಪಾಸ್ ಆಗುತ್ತಾರೆ. ಇದು ಖಾಸಗಿ ಮತ್ತು ಪುನರಾವರ್ತಿತ ಅಭ್ಯರ್ಥಿಗಳಿಗೆ ವರದಾನವಾಗಿದೆ.</p>.<p class="Subhead">ಹಾಜರಾತಿ, ಗೈರಾದವರ ವಿವರ: ಕನ್ನಡ ಪರೀಕ್ಷೆಗೆ ಹೆಸರು ನೋಂದಾಯಿಸಿದ ವಿದ್ಯಾರ್ಥಿಗಳ ಸಂಖ್ಯೆ 15,645 ಇದ್ದರೆ 15,472 ಹಾಜರು, 173 ಗೈರಾಗಿದ್ದಾರೆ. ಇಂಗ್ಲಿಷ್ ಪರೀಕ್ಷೆಗೆ 16,081 ಹೆಸರು ನೋಂದಾಯಿಸಿದ್ದರೆ, 15,898 ಹಾಜರಾಗಿದ್ದು, 183 ವಿದ್ಯಾರ್ಥಿಗಳು ಗೈರಾಗಿದ್ದಾರೆ.</p>.<p>ಹಿಂದಿ ಪರೀಕ್ಷೆಗೆ ನೋಂದಾಯಿಸಿದ ವಿದ್ಯಾರ್ಥಿಗಳ ಸಂಖ್ಯೆ 15,594, ಹಾಜರಾದವರ ಸಂಖ್ಯೆ 15,424, 170 ವಿದ್ಯಾರ್ಥಿಗಳು ಪರೀಕ್ಷೆಗೆ ಗೈರಾಗಿದ್ದಾರೆ.</p>.<p>ಸರ್ಕಾರಿ, ಖಾಸಗಿ ವಸತಿ ನಿಲಯಗಳಲ್ಲಿದ್ದು, 13 ಕನ್ನಡ, 11 ಇಂಗ್ಲಿಷ್ ಹಾಗೂ 5 ಹಿಂದಿ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಜಿಲ್ಲೆಯ 92 ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ.</p>.<p>371 ವಲಸೆ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರ ಬದಲಾವಣೆ ಮಾಡಿಕೊಂಡು ಪರೀಕ್ಷೆ ಬರೆದಿದ್ದಾರೆ. ಗುರುವಾರ ಬೆಳಿಗ್ಗೆ ಜಿಲ್ಲೆಯಲ್ಲಿ ಜಿಟಿ ಜಿಟಿ ಮಳೆ ಸುರಿಯುತ್ತಿದ್ದು, ಪರೀಕ್ಷೆಗೆ ತೆರಳುವ ವಿದ್ಯಾರ್ಥಿಗಳಿಗೆ ಆತಂಕ ಉಂಟಾಗಿತ್ತು. ಆದರೆ, ಪರೀಕ್ಷೆ ಸಮಯಕ್ಕೆ ಮಳೆ ನಿಂತಿದ್ದರಿಂದ ವಿದ್ಯಾರ್ಥಿಗಳಿಗೆ ಹೆಚ್ಚಿನ ಸಮಸ್ಯೆ ಉಂಟಾಗಲಿಲ್ಲ.</p>.<p class="Subhead">ಜಿಲ್ಲಾಧಿಕಾರಿ, ಸಿಇಒ ಭೇಟಿ: ನಗರದ ಡಾನ್ ಬೋಸ್ಕೋ ಶಿಕ್ಷಣ ಸಂಸ್ಥೆಯ ಪರೀಕ್ಷಾ ಕೇಂದ್ರಕ್ಕೆ ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್., ಅವರು ಭೇಟಿ ನೀಡಿ ಪರಿಶೀಲಿಸಿದರು.</p>.<p>ಎಸ್ಸೆಸ್ಸೆಲ್ಸಿ ನೋಡಲ್ ಅಧಿಕಾರಿ ಡಾ. ಮಲ್ಲಪ್ಪ ಯರಗೋಳ, ಯಾದಗಿರಿ ತಹಶೀಲ್ದಾರ್ ಚನ್ನಮಲ್ಲಪ್ಪ ಘಂಟಿ ಇದ್ದರು.</p>.<p>ಜಿಲ್ಲಾ ಪಂಚಾಯಿತಿ ಸಿಇಒ ಶಿಲ್ಪಾ ಶರ್ಮಾ ಅವರು ಜಿಲ್ಲೆಯ ಶಹಾಪುರ ಹಾಗೂ ಸುರಪುರ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಮೇಲ್ವಿಚಾರಣೆ ನಡೆಸಿದರು.</p>.<p>‘ಪರೀಕ್ಷೆಗೆ ಸಂಬಂಧಿಸಿದ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತೆ ವಹಿಸಿ ಜಿಲ್ಲೆಯಲ್ಲಿ ಪರೀಕ್ಷೆ ಯಶಸ್ವಿಗೊಳಿಸಲಾಗಿದೆ’ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಶಾಂತಗೌಡ ಪಾಟೀಲ ತಿಳಿಸಿದರು.</p>.<p class="Subhead">ಹಾಜರಾತಿವಿವರ: ಜುಲೈ19 ಮತ್ತು 22 ರಂದು ತಲಾ ಮೂರು ವಿಷಯ 120 ಅಂಕಗಳಿಗೆ ಪರೀಕ್ಷೆ ನಡೆದಿದ್ದು, ಶೇ 98 ಮತ್ತು 99 ಹಾಜರಾತಿ ಇದೆ.</p>.<p>ಜುಲೈ19ರ ಮೊದಲ ಪರೀಕ್ಷೆಯಲ್ಲಿಗಣಿತ,ವಿಜ್ಞಾನ, ಸಮಾಜ ವಿಜ್ಞಾನವಿಷಯಗಳಿಗೆ ಶೇ 98ರಷ್ಟು ಹಾಜರಾತಿ, ಜುಲೈ 22ರಂದು ನಡೆದ ಪ್ರಥಮ ಭಾಷೆ,ದ್ವಿತೀಯ ಭಾಷೆ,ತೃತೀಯ ಭಾಷೆ ವಿಷಯಗಳ ಪರೀಕ್ಷೆಗೆ ಶೇ 99ರಷ್ಟು ಪ್ರತಿಶತ ಹಾಜರಾತಿ ದಾಖಲಾಗಿದೆ.</p>.<p>ಆಗಸ್ಟ್ 10ರ ಒಳಗಾಗಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಬರುವ ಸಾಧ್ಯತೆ ಇದೆ ಎಂದು ಶಿಕ್ಷಣ ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿದರು.</p>.<p class="Briefhead"><strong>ಶಹಾಪುರ ವರದಿ:</strong></p>.<p>ತಾಲ್ಲೂಕಿನ 29 ಕೇಂದ್ರದಲ್ಲಿ ಗುರುವಾರ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 46 ವಿದ್ಯಾರ್ಥಿಗಳು ಗೈರಾಗಿದ್ದಾರೆ. ಅದರಂತೆ 4,936 ವಿದ್ಯಾರ್ಥಿಗಳು ನೋಂದಣಿ ಮಾಡಿಸಿಕೊಂಡಿದ್ದರು. 4,890 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ರುದ್ರಗೌಡ ಪಾಟೀಲ ತಿಳಿಸಿದ್ದಾರೆ.</p>.<p>ಗುರುವಾರ ಕನ್ನಡ, ಇಂಗ್ಲಿಷ್ ಮತ್ತು ಹಿಂದಿ ಪತ್ರಿಕೆ ಬರಿದಿದ್ದೇನೆ. ಎಲ್ಲವೂ ಸರಳವಾಗಿದ್ದವು. ಪೂರ್ಣ ಪ್ರಮಾಣದ ಪರೀಕ್ಷೆ ಬರೆದರೆ ಮಾತ್ರ ನಿಜವಾದ ಸಾಮರ್ಥ್ಯ ಗೊತ್ತಾಗುತ್ತದೆ.<br /><em><strong>-ಬಸವರಾಜ ಮಹಾದೇವಪ್ಪ, ವಿದ್ಯಾರ್ಥಿ</strong></em></p>.<p>***<br />ಮಕ್ಕಳ ಹಿತದೃಷ್ಟಿಯಿಂದ ಪರೀಕ್ಷೆ ನಡೆಸಿದ್ದು, ವಿದ್ಯಾರ್ಥಿಗಳಿಗೆ ಅನುಕೂಲವಾಗಿದೆ. ಪೂರ್ಣ ಪ್ರಮಾಣದಲ್ಲಿ ತರಗತಿಗಳು ನಡೆಯದೇ ಇರುವುದರಿಂದ ಸಮಸ್ಯೆ ಆಗಿದೆ.</p>.<p><em><strong>- ಎಜಾಜ್ ಪಟೇಲ್, ಪೋಷಕ</strong></em></p>.<p>***</p>.<p>ವಿದ್ಯಾರ್ಥಿಗಳು ಅತ್ಯಂತ ಹುಮ್ಮಸ್ಸಿನಲ್ಲಿ ಪರೀಕ್ಷೆಯನ್ನು ಎದುರಿಸಿದರು. ನಿಗದಿ ಪಡಿಸಿದ ಸಮಯಕ್ಕಿಂತಲೂ ಮುಂಚಿತವಾಗಿ ತಮ್ಮ ಉತ್ತರಗಳನ್ನು ಪೂರ್ಣಗೊಳಿಸಿದ್ದಾರೆ.<br /><em><strong>-ನಾಗನಗೌಡ ಪಾಟೀಲ, ಶಿಕ್ಷಕ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಾದಗಿರಿ: </strong>ನಗರ ಸೇರಿದಂತೆ ಜಿಲ್ಲೆಯಲ್ಲಿ ಗುರುವಾರ ಎಸ್ಸೆಸ್ಸೆಲ್ಸಿ ಪರೀಕ್ಷೆ ಸುಗಮವಾಗಿ ನಡೆಯಿತು. ಶೇ 99ರಷ್ಟು ವಿದ್ಯಾರ್ಥಿಗಳು ಹಾಜರಾಗಿದ್ದರು. ಎಲ್ಲರ ಚಿತ್ತ ಇದೀಗ ಫಲಿತಾಂಶದತ್ತ ತಿರುಗಿದೆ.</p>.<p>ಕೋವಿಡ್ ಮಧ್ಯೆಯೂ ಪರೀಕ್ಷೆಗಳನ್ನು ಸುಗಮವಾಗಿ ನಡೆಸಿದ ಶಿಕ್ಷಣ ಇಲಾಖೆ ಅಧಿಕಾರಿಗಳು, ಪೋಷಕರು ನಿಟ್ಟುಸಿರು ಬಿಟ್ಟರು. ಕೋವಿಡ್ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಪರೀಕ್ಷೆ ಎದುರಿಸಿದರು.</p>.<p>ಎರಡು ಪರೀಕ್ಷೆ (ತಲಾ ಮೂರು ವಿಷಯಗಳು) ಮುಗಿದಿದ್ದು, ಇನ್ನೇನ್ನಿದ್ದರೂ ಫಲಿತಾಂಶಕ್ಕಾಗಿ ಎದುರು ನೋಡುತ್ತಿದ್ದಾರೆ. ಈ ಬಾರಿ ಒಎಂಆರ್ ಶೀಟ್ನಲ್ಲಿ ಸರಿ ಉತ್ತರ ಗುರುತಿಸುವುದು ಬಹುತೇಕ ಎಲ್ಲರಿಗೂ ಸುಲಭವಾಗಿತ್ತು.</p>.<p class="Subhead">ಎಲ್ಲರೂ ಪಾಸ್: ಪರೀಕ್ಷೆ ನಡೆಸಿದರೂ ಯಾರನ್ನೂ ಅನುತ್ತೀರ್ಣ ಮಾಡುವಂತಿಲ್ಲ. ಇದರಿಂದ ಪರೀಕ್ಷೆ ಬರೆದವರು ಎಲ್ಲರೂ ಪಾಸ್ ಆಗುತ್ತಾರೆ. ಇದು ಖಾಸಗಿ ಮತ್ತು ಪುನರಾವರ್ತಿತ ಅಭ್ಯರ್ಥಿಗಳಿಗೆ ವರದಾನವಾಗಿದೆ.</p>.<p class="Subhead">ಹಾಜರಾತಿ, ಗೈರಾದವರ ವಿವರ: ಕನ್ನಡ ಪರೀಕ್ಷೆಗೆ ಹೆಸರು ನೋಂದಾಯಿಸಿದ ವಿದ್ಯಾರ್ಥಿಗಳ ಸಂಖ್ಯೆ 15,645 ಇದ್ದರೆ 15,472 ಹಾಜರು, 173 ಗೈರಾಗಿದ್ದಾರೆ. ಇಂಗ್ಲಿಷ್ ಪರೀಕ್ಷೆಗೆ 16,081 ಹೆಸರು ನೋಂದಾಯಿಸಿದ್ದರೆ, 15,898 ಹಾಜರಾಗಿದ್ದು, 183 ವಿದ್ಯಾರ್ಥಿಗಳು ಗೈರಾಗಿದ್ದಾರೆ.</p>.<p>ಹಿಂದಿ ಪರೀಕ್ಷೆಗೆ ನೋಂದಾಯಿಸಿದ ವಿದ್ಯಾರ್ಥಿಗಳ ಸಂಖ್ಯೆ 15,594, ಹಾಜರಾದವರ ಸಂಖ್ಯೆ 15,424, 170 ವಿದ್ಯಾರ್ಥಿಗಳು ಪರೀಕ್ಷೆಗೆ ಗೈರಾಗಿದ್ದಾರೆ.</p>.<p>ಸರ್ಕಾರಿ, ಖಾಸಗಿ ವಸತಿ ನಿಲಯಗಳಲ್ಲಿದ್ದು, 13 ಕನ್ನಡ, 11 ಇಂಗ್ಲಿಷ್ ಹಾಗೂ 5 ಹಿಂದಿ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಜಿಲ್ಲೆಯ 92 ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ.</p>.<p>371 ವಲಸೆ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರ ಬದಲಾವಣೆ ಮಾಡಿಕೊಂಡು ಪರೀಕ್ಷೆ ಬರೆದಿದ್ದಾರೆ. ಗುರುವಾರ ಬೆಳಿಗ್ಗೆ ಜಿಲ್ಲೆಯಲ್ಲಿ ಜಿಟಿ ಜಿಟಿ ಮಳೆ ಸುರಿಯುತ್ತಿದ್ದು, ಪರೀಕ್ಷೆಗೆ ತೆರಳುವ ವಿದ್ಯಾರ್ಥಿಗಳಿಗೆ ಆತಂಕ ಉಂಟಾಗಿತ್ತು. ಆದರೆ, ಪರೀಕ್ಷೆ ಸಮಯಕ್ಕೆ ಮಳೆ ನಿಂತಿದ್ದರಿಂದ ವಿದ್ಯಾರ್ಥಿಗಳಿಗೆ ಹೆಚ್ಚಿನ ಸಮಸ್ಯೆ ಉಂಟಾಗಲಿಲ್ಲ.</p>.<p class="Subhead">ಜಿಲ್ಲಾಧಿಕಾರಿ, ಸಿಇಒ ಭೇಟಿ: ನಗರದ ಡಾನ್ ಬೋಸ್ಕೋ ಶಿಕ್ಷಣ ಸಂಸ್ಥೆಯ ಪರೀಕ್ಷಾ ಕೇಂದ್ರಕ್ಕೆ ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್., ಅವರು ಭೇಟಿ ನೀಡಿ ಪರಿಶೀಲಿಸಿದರು.</p>.<p>ಎಸ್ಸೆಸ್ಸೆಲ್ಸಿ ನೋಡಲ್ ಅಧಿಕಾರಿ ಡಾ. ಮಲ್ಲಪ್ಪ ಯರಗೋಳ, ಯಾದಗಿರಿ ತಹಶೀಲ್ದಾರ್ ಚನ್ನಮಲ್ಲಪ್ಪ ಘಂಟಿ ಇದ್ದರು.</p>.<p>ಜಿಲ್ಲಾ ಪಂಚಾಯಿತಿ ಸಿಇಒ ಶಿಲ್ಪಾ ಶರ್ಮಾ ಅವರು ಜಿಲ್ಲೆಯ ಶಹಾಪುರ ಹಾಗೂ ಸುರಪುರ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಮೇಲ್ವಿಚಾರಣೆ ನಡೆಸಿದರು.</p>.<p>‘ಪರೀಕ್ಷೆಗೆ ಸಂಬಂಧಿಸಿದ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತೆ ವಹಿಸಿ ಜಿಲ್ಲೆಯಲ್ಲಿ ಪರೀಕ್ಷೆ ಯಶಸ್ವಿಗೊಳಿಸಲಾಗಿದೆ’ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಶಾಂತಗೌಡ ಪಾಟೀಲ ತಿಳಿಸಿದರು.</p>.<p class="Subhead">ಹಾಜರಾತಿವಿವರ: ಜುಲೈ19 ಮತ್ತು 22 ರಂದು ತಲಾ ಮೂರು ವಿಷಯ 120 ಅಂಕಗಳಿಗೆ ಪರೀಕ್ಷೆ ನಡೆದಿದ್ದು, ಶೇ 98 ಮತ್ತು 99 ಹಾಜರಾತಿ ಇದೆ.</p>.<p>ಜುಲೈ19ರ ಮೊದಲ ಪರೀಕ್ಷೆಯಲ್ಲಿಗಣಿತ,ವಿಜ್ಞಾನ, ಸಮಾಜ ವಿಜ್ಞಾನವಿಷಯಗಳಿಗೆ ಶೇ 98ರಷ್ಟು ಹಾಜರಾತಿ, ಜುಲೈ 22ರಂದು ನಡೆದ ಪ್ರಥಮ ಭಾಷೆ,ದ್ವಿತೀಯ ಭಾಷೆ,ತೃತೀಯ ಭಾಷೆ ವಿಷಯಗಳ ಪರೀಕ್ಷೆಗೆ ಶೇ 99ರಷ್ಟು ಪ್ರತಿಶತ ಹಾಜರಾತಿ ದಾಖಲಾಗಿದೆ.</p>.<p>ಆಗಸ್ಟ್ 10ರ ಒಳಗಾಗಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಬರುವ ಸಾಧ್ಯತೆ ಇದೆ ಎಂದು ಶಿಕ್ಷಣ ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿದರು.</p>.<p class="Briefhead"><strong>ಶಹಾಪುರ ವರದಿ:</strong></p>.<p>ತಾಲ್ಲೂಕಿನ 29 ಕೇಂದ್ರದಲ್ಲಿ ಗುರುವಾರ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 46 ವಿದ್ಯಾರ್ಥಿಗಳು ಗೈರಾಗಿದ್ದಾರೆ. ಅದರಂತೆ 4,936 ವಿದ್ಯಾರ್ಥಿಗಳು ನೋಂದಣಿ ಮಾಡಿಸಿಕೊಂಡಿದ್ದರು. 4,890 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ರುದ್ರಗೌಡ ಪಾಟೀಲ ತಿಳಿಸಿದ್ದಾರೆ.</p>.<p>ಗುರುವಾರ ಕನ್ನಡ, ಇಂಗ್ಲಿಷ್ ಮತ್ತು ಹಿಂದಿ ಪತ್ರಿಕೆ ಬರಿದಿದ್ದೇನೆ. ಎಲ್ಲವೂ ಸರಳವಾಗಿದ್ದವು. ಪೂರ್ಣ ಪ್ರಮಾಣದ ಪರೀಕ್ಷೆ ಬರೆದರೆ ಮಾತ್ರ ನಿಜವಾದ ಸಾಮರ್ಥ್ಯ ಗೊತ್ತಾಗುತ್ತದೆ.<br /><em><strong>-ಬಸವರಾಜ ಮಹಾದೇವಪ್ಪ, ವಿದ್ಯಾರ್ಥಿ</strong></em></p>.<p>***<br />ಮಕ್ಕಳ ಹಿತದೃಷ್ಟಿಯಿಂದ ಪರೀಕ್ಷೆ ನಡೆಸಿದ್ದು, ವಿದ್ಯಾರ್ಥಿಗಳಿಗೆ ಅನುಕೂಲವಾಗಿದೆ. ಪೂರ್ಣ ಪ್ರಮಾಣದಲ್ಲಿ ತರಗತಿಗಳು ನಡೆಯದೇ ಇರುವುದರಿಂದ ಸಮಸ್ಯೆ ಆಗಿದೆ.</p>.<p><em><strong>- ಎಜಾಜ್ ಪಟೇಲ್, ಪೋಷಕ</strong></em></p>.<p>***</p>.<p>ವಿದ್ಯಾರ್ಥಿಗಳು ಅತ್ಯಂತ ಹುಮ್ಮಸ್ಸಿನಲ್ಲಿ ಪರೀಕ್ಷೆಯನ್ನು ಎದುರಿಸಿದರು. ನಿಗದಿ ಪಡಿಸಿದ ಸಮಯಕ್ಕಿಂತಲೂ ಮುಂಚಿತವಾಗಿ ತಮ್ಮ ಉತ್ತರಗಳನ್ನು ಪೂರ್ಣಗೊಳಿಸಿದ್ದಾರೆ.<br /><em><strong>-ನಾಗನಗೌಡ ಪಾಟೀಲ, ಶಿಕ್ಷಕ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>