<p><strong>ಯಾದಗಿರಿ: </strong>ಜಿಲ್ಲೆಯಲ್ಲಿ ಸೋಮವಾರ ವಿಜ್ಞಾನ ಪರೀಕ್ಷೆ ಸುಗಮವಾಗಿ ನಡೆದಿದೆ. ಡಿಬಾರ್ ಆಗಿಲ್ಲ.ಎಸ್ಸೆಸ್ಸೆಲ್ಸಿಯ ಮೂರನೇ ವಿಷಯದ ಪರೀಕ್ಷೆ ಯಾವುದೇ ಅಹಿತಕರ ಘಟನೆ ಇಲ್ಲದೆ ಸರಾಗವಾಗಿ ಜರುಗಿದೆ.</p>.<p>15,471 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು. 14,205 ವಿದ್ಯಾರ್ಥಿಗಳು ಹಾಜರಾದರೆ 1,266 ಗೈರಾಗಿದ್ದರು. ಕಂಟೇನ್ಮೇಂಟ್ ಜೋನ್ನಿಂದ 426 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. 426 ವಲಸೆ ವಿದ್ಯಾರ್ಥಿಗಳಲ್ಲಿ 7 ಜನ ಗೈರಾಗಿದ್ದಾರೆ.</p>.<p>ಅನಾರೋಗ್ಯ ಕಾರಣದಿಂದ ವಿಶೇಷ ಕೊಠಡಿಯಲ್ಲಿ 7 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಪರೀಕ್ಷಾ ಕೇಂದ್ರಕ್ಕೆ ವಿದ್ಯಾರ್ಥಿಗಳನ್ನು ತಲುಪಿಸಲು ಸರ್ಕಾರಿ ಬಸ್ 50, 20 ಶಾಲಾ ವಾಹನ ಬಳಕೆ ಮಾಡಿಕೊಳ್ಳಲಾಗುತ್ತಿದೆ.</p>.<p>‘ಸೋಮವಾರ ಜಿಲ್ಲೆಯ ಬಳಿಚಕ್ರ, ಮಾಧ್ವಾರ, ಸೈದಾಪುರ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿದ್ದೇನೆ. ಜುಲೈ 1ರಂದು ಸಮಾಜ ವಿಜ್ಞಾನ, 2ರಂದು ದ್ವಿತೀಯ ಭಾಷೆ, 3ರಂದು ತೃತೀಯ ಭಾಷೆ ಪರೀಕ್ಷೆ ನಡೆಯಲಿದೆ’ ಎಂದು ಡಿಡಿಪಿಐ ಶ್ರೀನಿವಾಸರೆಡ್ಡಿ<br />ತಿಳಿಸಿದ್ದಾರೆ.</p>.<p class="Briefhead"><strong>17 ವಿದ್ಯಾರ್ಥಿಗಳು ಗೈರು</strong></p>.<p>ಯರಗೋಳ: ಗ್ರಾಮದ ಪರೀಕ್ಷಾ ಕೇಂದ್ರದಲ್ಲಿ ಸೋಮವಾರ ವಿಜ್ಞಾನ ಪರೀಕ್ಷೆ ಸುಗಮವಾಗಿ ನಡೆಯಿತು. ಕಂಚಾಗಾರಹಳ್ಳಿ, ಅಲ್ಲಿಪುರ, ಅರಕೇರಾ.ಬಿ, ಬಸವಂತಪುರ, ಕ್ಯಾಸಪನಳ್ಳಿ, ಖಾನಳ್ಳಿ, ವಡ್ನಳ್ಳಿ ಗ್ರಾಮದಿಂದ ಬಸ್, ಬೈಕ್, ಆಟೋಗಳಲ್ಲಿ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಆಗಮಿಸಿದ್ದರು.</p>.<p>ವಿದ್ಯಾರ್ಥಿಗಳಿಗೆ ಥರ್ಮಲ್ ಸ್ಕ್ರೀನಿಂಗ್ ನಡೆಸಲಾಯಿತು. 277ವಿದ್ಯಾರ್ಥಿಗಳು ಪರೀಕ್ಷೆ ಬರೆಯಬೇಕಿತ್ತು, 17 ವಿದ್ಯಾರ್ಥಿಗಳು ಗೈರಾಗಿದ್ದು, 260 ಜನ ಪರೀಕ್ಷೆ ಬರೆದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಾದಗಿರಿ: </strong>ಜಿಲ್ಲೆಯಲ್ಲಿ ಸೋಮವಾರ ವಿಜ್ಞಾನ ಪರೀಕ್ಷೆ ಸುಗಮವಾಗಿ ನಡೆದಿದೆ. ಡಿಬಾರ್ ಆಗಿಲ್ಲ.ಎಸ್ಸೆಸ್ಸೆಲ್ಸಿಯ ಮೂರನೇ ವಿಷಯದ ಪರೀಕ್ಷೆ ಯಾವುದೇ ಅಹಿತಕರ ಘಟನೆ ಇಲ್ಲದೆ ಸರಾಗವಾಗಿ ಜರುಗಿದೆ.</p>.<p>15,471 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು. 14,205 ವಿದ್ಯಾರ್ಥಿಗಳು ಹಾಜರಾದರೆ 1,266 ಗೈರಾಗಿದ್ದರು. ಕಂಟೇನ್ಮೇಂಟ್ ಜೋನ್ನಿಂದ 426 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. 426 ವಲಸೆ ವಿದ್ಯಾರ್ಥಿಗಳಲ್ಲಿ 7 ಜನ ಗೈರಾಗಿದ್ದಾರೆ.</p>.<p>ಅನಾರೋಗ್ಯ ಕಾರಣದಿಂದ ವಿಶೇಷ ಕೊಠಡಿಯಲ್ಲಿ 7 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಪರೀಕ್ಷಾ ಕೇಂದ್ರಕ್ಕೆ ವಿದ್ಯಾರ್ಥಿಗಳನ್ನು ತಲುಪಿಸಲು ಸರ್ಕಾರಿ ಬಸ್ 50, 20 ಶಾಲಾ ವಾಹನ ಬಳಕೆ ಮಾಡಿಕೊಳ್ಳಲಾಗುತ್ತಿದೆ.</p>.<p>‘ಸೋಮವಾರ ಜಿಲ್ಲೆಯ ಬಳಿಚಕ್ರ, ಮಾಧ್ವಾರ, ಸೈದಾಪುರ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿದ್ದೇನೆ. ಜುಲೈ 1ರಂದು ಸಮಾಜ ವಿಜ್ಞಾನ, 2ರಂದು ದ್ವಿತೀಯ ಭಾಷೆ, 3ರಂದು ತೃತೀಯ ಭಾಷೆ ಪರೀಕ್ಷೆ ನಡೆಯಲಿದೆ’ ಎಂದು ಡಿಡಿಪಿಐ ಶ್ರೀನಿವಾಸರೆಡ್ಡಿ<br />ತಿಳಿಸಿದ್ದಾರೆ.</p>.<p class="Briefhead"><strong>17 ವಿದ್ಯಾರ್ಥಿಗಳು ಗೈರು</strong></p>.<p>ಯರಗೋಳ: ಗ್ರಾಮದ ಪರೀಕ್ಷಾ ಕೇಂದ್ರದಲ್ಲಿ ಸೋಮವಾರ ವಿಜ್ಞಾನ ಪರೀಕ್ಷೆ ಸುಗಮವಾಗಿ ನಡೆಯಿತು. ಕಂಚಾಗಾರಹಳ್ಳಿ, ಅಲ್ಲಿಪುರ, ಅರಕೇರಾ.ಬಿ, ಬಸವಂತಪುರ, ಕ್ಯಾಸಪನಳ್ಳಿ, ಖಾನಳ್ಳಿ, ವಡ್ನಳ್ಳಿ ಗ್ರಾಮದಿಂದ ಬಸ್, ಬೈಕ್, ಆಟೋಗಳಲ್ಲಿ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಆಗಮಿಸಿದ್ದರು.</p>.<p>ವಿದ್ಯಾರ್ಥಿಗಳಿಗೆ ಥರ್ಮಲ್ ಸ್ಕ್ರೀನಿಂಗ್ ನಡೆಸಲಾಯಿತು. 277ವಿದ್ಯಾರ್ಥಿಗಳು ಪರೀಕ್ಷೆ ಬರೆಯಬೇಕಿತ್ತು, 17 ವಿದ್ಯಾರ್ಥಿಗಳು ಗೈರಾಗಿದ್ದು, 260 ಜನ ಪರೀಕ್ಷೆ ಬರೆದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>