ಯಾದಗಿರಿ: ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ 72ನೇಗಣರಾಜ್ಯೋತ್ಸವದ ಅಂಗವಾಗಿ ಜಿಲ್ಲಾಧಿಕಾರಿ ಡಾ. ರಾಗಪ್ರಿಯಾ ಆರ್. ಅವರು ಮಂಗಳವಾರ ಧ್ವಜಾರೋಹಣ ನೆರವೇರಿಸಿದರು.
ನಂತರ ಮಾತನಾಡಿದ ಅವರು,‘ಜ.26, 1950ರಂದು ಭಾರತ ದೇಶ ಗಣರಾಜ್ಯವಾಯಿತು. ಅದರ ಸವಿನೆನಪಿಗಾಗಿ ನಾವು ಗಣರಾಜ್ಯೋತ್ಸವ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಿತ್ತ ಬಂದಿದ್ದೇವೆ’ ಎಂದರು.
‘ಸಾರ್ವಜನಿಕರ ಕಷ್ಟಗಳಿಗೆ ನಾವು (ಅಧಿಕಾರಿಗಳು) ಪ್ರಾಮಾಣಿಕವಾಗಿ ಸ್ಪಂದಿಸದರೆ ಮಾತ್ರ ನಮ್ಮ ಮೇಲೆ ಜನರಿಗೂ ಗೌರವ ಬರುತ್ತದೆ’ ಎಂದು ಅಧಿಕಾರಿಗಳಿಗೆ ಸಲಹೆ ನೀಡಿದರು.
ಡಾ.ಬಿ.ಆರ್.ಅಂಬೇಡ್ಕರ್ ಅವರ ನೇತೃತ್ವದಲ್ಲಿ ಭಾರತ ದೇಶದ ಲಿಖಿತ ಸಂವಿಧಾನವನ್ನು ರಚಿಸಿ 1949ರ ನ.26ರಂದು ಅಂಗೀಕರಿಸಲಾಗಿದೆ ಎಂದು ತಿಳಿಸಿದರು.
ಇದೇವೇಳೆಕಳೆದ ತಿಂಗಳು ಜರುಗಿದ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ ಕಂದಾಯ ಇಲಾಖೆ, ಚುನಾವಣಾ ಆಯೋಗ ಸೇರಿದಂತೆ ಇತರ ಅಧಿಕಾರಿಗಳಿಗೆ ಅಭಿನಂದನೆ ಸಲ್ಲಿಸಿದರು.
ಈ ವೇಳೆ ಜಿಲ್ಲಾ ಪಂಚಾಯಿತಿಸಿಇಒ ಶಿಲ್ಪಾ ಶರ್ಮಾ,ಹೆಚ್ಚುವರಿಜಿಲ್ಲಾಧಿಕಾರಿ ಪ್ರಕಾಶ ಜಿ.ರಜಪೂತ, ಉಪವಿಭಾಗಾಧಿಕಾರಿಶಂಕರಗೌಡ ಸೋಮನಾಳ, ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಮುಕ್ಕಣ್ಣ ಕರಿಗಾರ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿ ಹಾಗೂ ಸಿಬ್ಬಂದಿಇದ್ದರು.