<p><strong>ವಡಗೇರಾ:</strong> ರಾಜ್ಯ ಸರ್ಕಾರ ಇತ್ತೀಚೆಗೆ ಜಾರಿಗೆ ತಂದಿರುವ ಎಫ್ಐಡಿ ವ್ಯವಸ್ಥೆಯಿಂದ ರೈತರಿಗೆ ರಸಗೊಬ್ಬರ ಖರೀದಿಯಲ್ಲಿ ಅನೇಕ ತೊಂದರೆಯಾಗುತ್ತಿದ್ದು, ಸರ್ಕಾರ ಈ ಕ್ರಮ ಕೈಬಿಡಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ತಹಶೀಲ್ದಾರ್ ಮಂಗಳಾ.ಎಂ ಅವರಿಗೆ ಮನವಿ ಸಲ್ಲಿಸಿದರು.</p>.<p>ಸಂಘದ ಜಿಲ್ಲಾಧ್ಯಕ್ಷ ಮಲ್ಲನಗೌಡ ಎಸ್. ಹಗರಟಗಿ ಮಾತನಾಡಿ, ‘ರೈತರು ತಮ್ಮ ಬೆಳೆಗಳ ಅವಶ್ಯಕತೆಗೆ ಅನುಗುಣವಾಗಿ ಯೂರಿಯಾ ಹಾಗೂ ಇತರ ರಸಗೊಬ್ಬರಗಳನ್ನು ಖರೀದಿಸಲು ಅವಕಾಶ ಕಲ್ಪಿಸಬೇಕು’ ಎಂದು ಒತ್ತಾಯಿಸಿದರು.</p>.<p>‘ಎಫ್ಐಡಿ ವ್ಯವಸ್ಥೆಯಿಂದ ರಸಗೊಬ್ಬರ ವಿತರಣೆ ಗೊಂದಲಕ್ಕೆ ಕಾರಣವಾಗುತ್ತಿದ್ದು, ಹಲವಾರು ರೈತರಿಗೆ ಅಗತ್ಯ ಪ್ರಮಾಣದ ಗೊಬ್ಬರ ದೊರೆಯುತ್ತಿಲ್ಲ. ಇದರಿಂದ ಬೆಳೆಗಳ ಇಳುವರಿ ಕುಸಿಯುವ ಸಾಧ್ಯತೆ ಹೆಚ್ಚಿದ್ದು, ಕೆಲ ಬೆಳೆಗಳಿಗೆ ಹಾನಿಯಾಗುವ ಆತಂಕವೂ ಇದೆ’ ಎಂದರು.</p>.<p>ಮಾರುಕಟ್ಟೆಯಲ್ಲಿ ಯೂರಿಯಾ ಸೇರಿದಂತೆ ಅಗತ್ಯ ರಸಗೊಬ್ಬರಗಳು ಸಮರ್ಪಕವಾಗಿ ಲಭ್ಯವಾಗುವಂತೆ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ರೈತರಿಗೆ ಯೂರಿಯಾ ಗೊಬ್ಬರದಲ್ಲಿ ಯಾವುದೇ ತೊಂದರೆ ಆಗದಂತೆ ಸರಬರಾಜು ಕ್ರಮಗಳನ್ನು ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು.</p>.<p>ರೈತ ಸಂಘದ ಪದಾಧಿಕಾರಿ ಶರಣು ಜಡಿ, ವಿದ್ಯಾಧರ ಜಾಕಾ, ತಿರುಮಲ, ಶಿವಶರಣಪ್ಪ ಸಾಹುಕಾರ, ಬಸ್ಸಯ್ಯ ಸ್ವಾಮಿ ಸೇರಿದಂತೆ ಅನೇಕರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260604-30-1533281418</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಡಗೇರಾ:</strong> ರಾಜ್ಯ ಸರ್ಕಾರ ಇತ್ತೀಚೆಗೆ ಜಾರಿಗೆ ತಂದಿರುವ ಎಫ್ಐಡಿ ವ್ಯವಸ್ಥೆಯಿಂದ ರೈತರಿಗೆ ರಸಗೊಬ್ಬರ ಖರೀದಿಯಲ್ಲಿ ಅನೇಕ ತೊಂದರೆಯಾಗುತ್ತಿದ್ದು, ಸರ್ಕಾರ ಈ ಕ್ರಮ ಕೈಬಿಡಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ತಹಶೀಲ್ದಾರ್ ಮಂಗಳಾ.ಎಂ ಅವರಿಗೆ ಮನವಿ ಸಲ್ಲಿಸಿದರು.</p>.<p>ಸಂಘದ ಜಿಲ್ಲಾಧ್ಯಕ್ಷ ಮಲ್ಲನಗೌಡ ಎಸ್. ಹಗರಟಗಿ ಮಾತನಾಡಿ, ‘ರೈತರು ತಮ್ಮ ಬೆಳೆಗಳ ಅವಶ್ಯಕತೆಗೆ ಅನುಗುಣವಾಗಿ ಯೂರಿಯಾ ಹಾಗೂ ಇತರ ರಸಗೊಬ್ಬರಗಳನ್ನು ಖರೀದಿಸಲು ಅವಕಾಶ ಕಲ್ಪಿಸಬೇಕು’ ಎಂದು ಒತ್ತಾಯಿಸಿದರು.</p>.<p>‘ಎಫ್ಐಡಿ ವ್ಯವಸ್ಥೆಯಿಂದ ರಸಗೊಬ್ಬರ ವಿತರಣೆ ಗೊಂದಲಕ್ಕೆ ಕಾರಣವಾಗುತ್ತಿದ್ದು, ಹಲವಾರು ರೈತರಿಗೆ ಅಗತ್ಯ ಪ್ರಮಾಣದ ಗೊಬ್ಬರ ದೊರೆಯುತ್ತಿಲ್ಲ. ಇದರಿಂದ ಬೆಳೆಗಳ ಇಳುವರಿ ಕುಸಿಯುವ ಸಾಧ್ಯತೆ ಹೆಚ್ಚಿದ್ದು, ಕೆಲ ಬೆಳೆಗಳಿಗೆ ಹಾನಿಯಾಗುವ ಆತಂಕವೂ ಇದೆ’ ಎಂದರು.</p>.<p>ಮಾರುಕಟ್ಟೆಯಲ್ಲಿ ಯೂರಿಯಾ ಸೇರಿದಂತೆ ಅಗತ್ಯ ರಸಗೊಬ್ಬರಗಳು ಸಮರ್ಪಕವಾಗಿ ಲಭ್ಯವಾಗುವಂತೆ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ರೈತರಿಗೆ ಯೂರಿಯಾ ಗೊಬ್ಬರದಲ್ಲಿ ಯಾವುದೇ ತೊಂದರೆ ಆಗದಂತೆ ಸರಬರಾಜು ಕ್ರಮಗಳನ್ನು ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು.</p>.<p>ರೈತ ಸಂಘದ ಪದಾಧಿಕಾರಿ ಶರಣು ಜಡಿ, ವಿದ್ಯಾಧರ ಜಾಕಾ, ತಿರುಮಲ, ಶಿವಶರಣಪ್ಪ ಸಾಹುಕಾರ, ಬಸ್ಸಯ್ಯ ಸ್ವಾಮಿ ಸೇರಿದಂತೆ ಅನೇಕರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260604-30-1533281418</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>