‘ದಾವಣಗೆರೆ ಎಸ್ಪಿಯವರಿಗೆ ಮಾತನಾಡಿ ತುರ್ತು ಕ್ರಮ ಕೈಗೊಳ್ಳುವಂತೆ ತಿಳಿಸಿದ್ದೇನೆ. ಮೃತ ದೇಹಗಳನ್ನು ಆಂಬುಲೆನ್ಸ್ ಮೂಲಕ ಕಳುಹಿಸಿಕೊಡಲು ಸೂಚಿಸಿದ್ದೇನೆ. ಶುಕ್ರವಾರ ತಡ ರಾತ್ರಿ ವೇಳೆಗೆ ಕಳೆಬರಗಳು ತಾಲ್ಲೂಕಿಗೆ ತಲುಪಲಿವೆ’ ಎಂದು ತಿಳಿಸಿದರು. ‘ಮೂವರು ಯುವಕರು ನಮ್ಮ ತಾಲ್ಲೂಕಿನವರಾಗಿದ್ದು, ಒಂದು ಮೃತದೇಹದ ಗುರುತು ಸಿಕ್ಕಿಲ್ಲ. ವಿಜಯನಗರ ಜಿಲ್ಲೆ ಕೂಡಲಗಿ ಎನ್ನಲಾಗುತ್ತಿದ್ದು, ಈ ಬಗ್ಗೆ ಖಚಿತವಾಗಿಲ್ಲ. ಮೃತ ಯುವಕರ ಆತ್ಮಕ್ಕೆ ಶಾಂತಿ ನೀಡಲಿ. ಅವರ ಕುಟುಂಬದವರಿಗೆ ದುಃಖ ಸಹಿಸಿಕೊಳ್ಳುವ ಶಕ್ತಿ ದೇವರು ನೀಡಲಿ’ ಎಂದು ಪ್ರಾರ್ಥಿಸುವುದಾಗಿ ಹೇಳಿದರು.