<p><strong>ಯಾದಗಿರಿ:</strong> ನಕಲಿ ಅಂಕಪಟ್ಟಿ ನೀಡಿದ ಆರೋಪದಡಿ ತಾಲ್ಲೂಕಿನ ಬಾಚವಾರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ ಹುಸೇನ್ ಪಟೇಲ್ ಅವರ ವಿರುದ್ಧ ಯಾದಗಿರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ಹುಸೇನ್ ಅವರು ಆಶನಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕರಾಗಿದ್ದಾಗ ಹಣಮಂತರಾಯ ಅವರಿಗೆ 7ನೇ ತರಗತಿಯಲ್ಲಿ ಶೇ 85 ಅಂಕ ಪಡೆದ ಅಂಕಪಟ್ಟಿ ನೀಡಿದ್ದರು. ಇದರಿಂದಾಗಿ ಹಣಮಂತರಾಯ ಅವರು ಅಬಕಾರಿ ಇಲಾಖೆಯಲ್ಲಿ ತಾತ್ಕಾಲಿಕ ಪಟ್ಟಿಯಲ್ಲಿ ವಾಹನ ಚಾಲಕರಾಗಿ ಆಯ್ಕೆಯಾದರು. ಈ ಬಗ್ಗೆ ಮತ್ತೊಬ್ಬ ಆಕಾಂಕ್ಷಿ ಆಕ್ಷೇಪ ಸಲ್ಲಿಸಿದ್ದರು. ಅಧಿಕಾರಿಗಳು ಅಂಕಪಟ್ಟಿ ಪರಿಶೀಲಿಸಿದಾಗ ಅವರದ್ದು ನಕಲಿ ಅಂಕಪಟ್ಟಿ ಎಂಬುದು ಗೊತ್ತಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ನಕಲಿ ಅಂಕಪಟ್ಟಿ ಬಗ್ಗೆ ಹಣಮಂತರಾಯ ಜಿಲ್ಲಾಧಿಕಾರಿಗೆ ದೂರು ಸಲ್ಲಿಸಿದರು. ಅಧಿಕಾರಿಗಳ ತಂಡ ಪರಿಶೀಲಿಸಿದಾಗ ಶಾಲೆಯ ದಾಖಲೆಗಳಲ್ಲಿ ಹಣಮಂತರಾಯ ಅವರ ಕ್ರೋಡೀಕೃತ ಅಂಕಪಟ್ಟಿ ಹರಿದಿತ್ತು. ಇದು ಹುಸೇನ್ ಪಟೇಲ್ ಅವರ ಅವಧಿಯಲ್ಲಿ ನಡೆದಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಾದಗಿರಿ:</strong> ನಕಲಿ ಅಂಕಪಟ್ಟಿ ನೀಡಿದ ಆರೋಪದಡಿ ತಾಲ್ಲೂಕಿನ ಬಾಚವಾರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ ಹುಸೇನ್ ಪಟೇಲ್ ಅವರ ವಿರುದ್ಧ ಯಾದಗಿರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ಹುಸೇನ್ ಅವರು ಆಶನಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕರಾಗಿದ್ದಾಗ ಹಣಮಂತರಾಯ ಅವರಿಗೆ 7ನೇ ತರಗತಿಯಲ್ಲಿ ಶೇ 85 ಅಂಕ ಪಡೆದ ಅಂಕಪಟ್ಟಿ ನೀಡಿದ್ದರು. ಇದರಿಂದಾಗಿ ಹಣಮಂತರಾಯ ಅವರು ಅಬಕಾರಿ ಇಲಾಖೆಯಲ್ಲಿ ತಾತ್ಕಾಲಿಕ ಪಟ್ಟಿಯಲ್ಲಿ ವಾಹನ ಚಾಲಕರಾಗಿ ಆಯ್ಕೆಯಾದರು. ಈ ಬಗ್ಗೆ ಮತ್ತೊಬ್ಬ ಆಕಾಂಕ್ಷಿ ಆಕ್ಷೇಪ ಸಲ್ಲಿಸಿದ್ದರು. ಅಧಿಕಾರಿಗಳು ಅಂಕಪಟ್ಟಿ ಪರಿಶೀಲಿಸಿದಾಗ ಅವರದ್ದು ನಕಲಿ ಅಂಕಪಟ್ಟಿ ಎಂಬುದು ಗೊತ್ತಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ನಕಲಿ ಅಂಕಪಟ್ಟಿ ಬಗ್ಗೆ ಹಣಮಂತರಾಯ ಜಿಲ್ಲಾಧಿಕಾರಿಗೆ ದೂರು ಸಲ್ಲಿಸಿದರು. ಅಧಿಕಾರಿಗಳ ತಂಡ ಪರಿಶೀಲಿಸಿದಾಗ ಶಾಲೆಯ ದಾಖಲೆಗಳಲ್ಲಿ ಹಣಮಂತರಾಯ ಅವರ ಕ್ರೋಡೀಕೃತ ಅಂಕಪಟ್ಟಿ ಹರಿದಿತ್ತು. ಇದು ಹುಸೇನ್ ಪಟೇಲ್ ಅವರ ಅವಧಿಯಲ್ಲಿ ನಡೆದಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>