‘ಯಾದಗಿರಿಯ ಇಬ್ಬರು, ಸುರಪುರದ ಇಬ್ಬರು, ಶಹಾಪುರದ ಒಬ್ಬರು ದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿ ಜಿಲ್ಲೆಗೆ ಹಿಂತಿರುಗಿ ಬಂದಿದ್ದಾರೆ. ಅವರನ್ನು ಗುರುಮಠಕಲ್ ತಾಲ್ಲೂಕಿನ ಅರಕೇರಾ (ಕೆ) ಗ್ರಾಮದಲ್ಲಿ ತೆಗೆದಿರುವ ಕ್ವಾರಂಟೈನ್ನಲ್ಲಿ ನಿಗಾ ಇರಿಸಿ ಎರಡು ಬಾರಿ ವೈದ್ಯಕೀಯ ಪರೀಕ್ಷೆ ಮಾಡಲಾಗುತ್ತಿದೆ. ಸೋಂಕಿನ ಯಾವುದೇ ಲಕ್ಷಣಗಳು ಕಂಡು ಬಂದಿಲ್ಲ’ ಎಂದು ತಿಳಿಸಿದರು.