<p><strong>ಯಾದಗಿರಿ:</strong> ವಡಗೇರಾ ತಾಲ್ಲೂಕಿನ ಕೊಂಗಂಡಿ ಗ್ರಾಮದಲ್ಲಿರುವ ಪರಿಶಿಷ್ಟರಿಗೆ ಸೇರಿದ ಕುಡಿಯವ ನೀರಿನ ಬಾವಿ ಮುಚ್ಚಲಾಗಿದೆ ಎಂದು ಆರೋಪಿಸಿದ ರಾಜ್ಯ ದಲಿತ ಸಂಘರ್ಷ ಸಮಿತಿಯ (ಕ್ರಾಂತಿಕಾರಿ) ಜಿಲ್ಲಾ ಮುಖಂಡರು, ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಕಚೇರಿ ಅಧಿಕಾರಿಯೊಬ್ಬರಿಗೆ ಮಂಗಳವಾರ ಮನವಿ ಸಲ್ಲಿಸಿದರು.</p>.<p>ಗ್ರಾಮದ ಸರ್ವೆ ನಂಬರ್ 12/6ರ 3 ಗುಂಟೆ ಜಮೀನಿನಲ್ಲಿ ಪರಿಶಿಷ್ಟರಿಗೆ ಕುಡಿಯುವ ನೀರಿನ ಬಳಕೆಯ ಬಾವಿ ಇತ್ತು. ಕುಡಿಯುವ ನೀರಿನ ಸಮಸ್ಯೆ ಆಗುತ್ತದೆ ಬಾವಿ ಮುಚ್ಚದಂತೆ ಮನವಿ ಮಾಡಿದರೂ ಕೆಲವು ಖಾಸಗಿ ವ್ಯಕ್ತಿಗಳು ಕಿವಿಗೊಡಲಿಲ್ಲ ಎಂದು ಆರೋಪಿಸಿದ್ದಾರೆ.</p>.<p>ಬಾವಿಯನ್ನು ನೆಲಸಮ ಮಾಡಿ, ಮುಚ್ಚಿ ಹಾಕಿದ್ದವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು. ಸರ್ಕಾರಿ ಜಮೀನನ್ನು ಮಾರಾಟ ಮಾಡಿದವರು, ಖರೀದಿದಾರ ಹಾಗೂ ಸಂಬಂಧಪಟ್ಟ ಅಧಿಕಾರಿಯ ವಿರುದ್ಧವೂ ಕ್ರಮಜರುಗಿಸಬೇಕು. ಇಲ್ಲವಾದರೆ ವಡಗೇರಾ ಪೊಲೀಸ್ ಠಾಣೆ ಎದುರು ಉಪವಾಸ ಸತ್ಯಾಗ್ರಹ ಮಾಡುತ್ತೇವೆ ಎಂದಿದ್ದಾರೆ.</p>.<p>ಈ ವೇಳೆ ಸಮಿತಿಯ ಮುಖಂಡರಾದ ಮಲ್ಲಿಕಾರ್ಜುನ ಕ್ರಾಂತಿ, ಅಜಿಜ್ ಸಾಬ್ ಐಕೂರು, ವೀರಭದ್ರಪ್ಪ ತಳವಾರಗೇರಾ, ಮಹಾದೇವಪ್ಪ ಬಿಜಾಸಪುರ, ಮಲ್ಲಿಕಾರ್ಜುನ ತಳ್ಳಳ್ಳಿ, ಮಲ್ಲಿಕಾರ್ಜುನ ಶಾಖಾನವರ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಾದಗಿರಿ:</strong> ವಡಗೇರಾ ತಾಲ್ಲೂಕಿನ ಕೊಂಗಂಡಿ ಗ್ರಾಮದಲ್ಲಿರುವ ಪರಿಶಿಷ್ಟರಿಗೆ ಸೇರಿದ ಕುಡಿಯವ ನೀರಿನ ಬಾವಿ ಮುಚ್ಚಲಾಗಿದೆ ಎಂದು ಆರೋಪಿಸಿದ ರಾಜ್ಯ ದಲಿತ ಸಂಘರ್ಷ ಸಮಿತಿಯ (ಕ್ರಾಂತಿಕಾರಿ) ಜಿಲ್ಲಾ ಮುಖಂಡರು, ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಕಚೇರಿ ಅಧಿಕಾರಿಯೊಬ್ಬರಿಗೆ ಮಂಗಳವಾರ ಮನವಿ ಸಲ್ಲಿಸಿದರು.</p>.<p>ಗ್ರಾಮದ ಸರ್ವೆ ನಂಬರ್ 12/6ರ 3 ಗುಂಟೆ ಜಮೀನಿನಲ್ಲಿ ಪರಿಶಿಷ್ಟರಿಗೆ ಕುಡಿಯುವ ನೀರಿನ ಬಳಕೆಯ ಬಾವಿ ಇತ್ತು. ಕುಡಿಯುವ ನೀರಿನ ಸಮಸ್ಯೆ ಆಗುತ್ತದೆ ಬಾವಿ ಮುಚ್ಚದಂತೆ ಮನವಿ ಮಾಡಿದರೂ ಕೆಲವು ಖಾಸಗಿ ವ್ಯಕ್ತಿಗಳು ಕಿವಿಗೊಡಲಿಲ್ಲ ಎಂದು ಆರೋಪಿಸಿದ್ದಾರೆ.</p>.<p>ಬಾವಿಯನ್ನು ನೆಲಸಮ ಮಾಡಿ, ಮುಚ್ಚಿ ಹಾಕಿದ್ದವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು. ಸರ್ಕಾರಿ ಜಮೀನನ್ನು ಮಾರಾಟ ಮಾಡಿದವರು, ಖರೀದಿದಾರ ಹಾಗೂ ಸಂಬಂಧಪಟ್ಟ ಅಧಿಕಾರಿಯ ವಿರುದ್ಧವೂ ಕ್ರಮಜರುಗಿಸಬೇಕು. ಇಲ್ಲವಾದರೆ ವಡಗೇರಾ ಪೊಲೀಸ್ ಠಾಣೆ ಎದುರು ಉಪವಾಸ ಸತ್ಯಾಗ್ರಹ ಮಾಡುತ್ತೇವೆ ಎಂದಿದ್ದಾರೆ.</p>.<p>ಈ ವೇಳೆ ಸಮಿತಿಯ ಮುಖಂಡರಾದ ಮಲ್ಲಿಕಾರ್ಜುನ ಕ್ರಾಂತಿ, ಅಜಿಜ್ ಸಾಬ್ ಐಕೂರು, ವೀರಭದ್ರಪ್ಪ ತಳವಾರಗೇರಾ, ಮಹಾದೇವಪ್ಪ ಬಿಜಾಸಪುರ, ಮಲ್ಲಿಕಾರ್ಜುನ ತಳ್ಳಳ್ಳಿ, ಮಲ್ಲಿಕಾರ್ಜುನ ಶಾಖಾನವರ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>