<p><strong>ಯಾದಗಿರಿ:</strong> ಜಿಲ್ಲೆಯ ಕೃಷ್ಣಾ ಮತ್ತು ಭೀಮಾ ಎರಡು ನದಿಗಳಿಗೆ ಒಳಹರಿವು ಹೆಚ್ಚಿದೆ. ಎರಡು ನದಿಗಳ ಜಲಾನಯನ ಪ್ರದೇಶದಲ್ಲಿ ಮಳೆಯಾಗುತ್ತಿದ್ದು, ಇದರಿಂದ ಒಳಹರಿವು ಹೆಚ್ಚಿದೆ.</p>.<p>ಕೃಷ್ಣಾ ನದಿಗೆ ನೀರಾವರಿಗಾಗಿ ಆಲಮಟ್ಟಿ ಅಣೆಕಟ್ಟಿನಿಂದ 18ಸಾವಿರ ಕ್ಯೂಸೆಕ್, 1,503 ಕ್ಯೂಸೆಕ್ ಜಲಾನಯನ ಮಳೆಯಿಂದ ಹುಣಸಗಿ ತಾಲ್ಲೂಕಿನ ನಾರಾಯಣಪುರ ಬಸವಸಾಗರ ಜಲಾಶಯಕ್ಕೆ ಬರುತ್ತಿದೆ. ಇದರಿಂದ 9,503 ಕ್ಯೂಸೆಕ್ ಕಾಲುವೆಗಳಿಗೆ ನೀರು ಹರಿಸಲಾಗುತ್ತಿದೆ. <br>490.91 ಮೀಟರ್ ನೀರು ಸಂಗ್ರಹ ಇಟ್ಟುಕೊಂಡು ನೀರನ್ನು ಕಾಲುವೆಗಳಿಗೆ ಹರಿಸಲಾಗುತ್ತಿದೆ.</p>.<p>ಜಲಾನಯನ ಪ್ರದೇಶದಲ್ಲಿ ಕಳೆದ ಎರಡು ದಿನಗಳಿಂದ ವ್ಯಾಪಕ ಮಳೆಯಿಂದಾಗಿ ಭೀಮಾ ನದಿ ಮೈದುಂಬಿ ಹರಿಯುತ್ತಿದೆ. ಯಾದಗಿರಿ–ಗುರುಸಣಿಗಿ ಬಳಿಯ ಭೀಮಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಬ್ರಿಜ್ ಕಂ ಬ್ಯಾರೇಜ್ ಸಂಪೂರ್ಣ ಭರ್ತಿಯಾಗಿದೆ.</p>.<p>ಇನ್ನೂ ಭೀಮಾ ನದಿ ವ್ಯಾಪ್ತಿಯಲ್ಲಿ ಮೂರು ಬ್ರಿಜ್ ಕಂ ಬ್ಯಾರೇಜ್ಗಳಿದ್ದು, ಸನ್ನತಿ ಬ್ಯಾರೇಜ್ನಿಂದ ಭೀಮಾ ನದಿಗೆ 15,000 ಕ್ಯೂಸೆಕ್ ನೀರು ಹರಿಸಲಾಗುತ್ತಿದ್ದು, ಯಾದಗಿರಿ–ಗುರುಸಣಗಿ, ಜೋಳದಡಗಿ–ಗೌಡೂರು ಬ್ಯಾರೇಜ್ನಿಂದ 12,000 ಕ್ಯೂಸೆಕ್ ನೀರು ಹೊರ ಹರಿಸಲಾಗುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಾದಗಿರಿ:</strong> ಜಿಲ್ಲೆಯ ಕೃಷ್ಣಾ ಮತ್ತು ಭೀಮಾ ಎರಡು ನದಿಗಳಿಗೆ ಒಳಹರಿವು ಹೆಚ್ಚಿದೆ. ಎರಡು ನದಿಗಳ ಜಲಾನಯನ ಪ್ರದೇಶದಲ್ಲಿ ಮಳೆಯಾಗುತ್ತಿದ್ದು, ಇದರಿಂದ ಒಳಹರಿವು ಹೆಚ್ಚಿದೆ.</p>.<p>ಕೃಷ್ಣಾ ನದಿಗೆ ನೀರಾವರಿಗಾಗಿ ಆಲಮಟ್ಟಿ ಅಣೆಕಟ್ಟಿನಿಂದ 18ಸಾವಿರ ಕ್ಯೂಸೆಕ್, 1,503 ಕ್ಯೂಸೆಕ್ ಜಲಾನಯನ ಮಳೆಯಿಂದ ಹುಣಸಗಿ ತಾಲ್ಲೂಕಿನ ನಾರಾಯಣಪುರ ಬಸವಸಾಗರ ಜಲಾಶಯಕ್ಕೆ ಬರುತ್ತಿದೆ. ಇದರಿಂದ 9,503 ಕ್ಯೂಸೆಕ್ ಕಾಲುವೆಗಳಿಗೆ ನೀರು ಹರಿಸಲಾಗುತ್ತಿದೆ. <br>490.91 ಮೀಟರ್ ನೀರು ಸಂಗ್ರಹ ಇಟ್ಟುಕೊಂಡು ನೀರನ್ನು ಕಾಲುವೆಗಳಿಗೆ ಹರಿಸಲಾಗುತ್ತಿದೆ.</p>.<p>ಜಲಾನಯನ ಪ್ರದೇಶದಲ್ಲಿ ಕಳೆದ ಎರಡು ದಿನಗಳಿಂದ ವ್ಯಾಪಕ ಮಳೆಯಿಂದಾಗಿ ಭೀಮಾ ನದಿ ಮೈದುಂಬಿ ಹರಿಯುತ್ತಿದೆ. ಯಾದಗಿರಿ–ಗುರುಸಣಿಗಿ ಬಳಿಯ ಭೀಮಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಬ್ರಿಜ್ ಕಂ ಬ್ಯಾರೇಜ್ ಸಂಪೂರ್ಣ ಭರ್ತಿಯಾಗಿದೆ.</p>.<p>ಇನ್ನೂ ಭೀಮಾ ನದಿ ವ್ಯಾಪ್ತಿಯಲ್ಲಿ ಮೂರು ಬ್ರಿಜ್ ಕಂ ಬ್ಯಾರೇಜ್ಗಳಿದ್ದು, ಸನ್ನತಿ ಬ್ಯಾರೇಜ್ನಿಂದ ಭೀಮಾ ನದಿಗೆ 15,000 ಕ್ಯೂಸೆಕ್ ನೀರು ಹರಿಸಲಾಗುತ್ತಿದ್ದು, ಯಾದಗಿರಿ–ಗುರುಸಣಗಿ, ಜೋಳದಡಗಿ–ಗೌಡೂರು ಬ್ಯಾರೇಜ್ನಿಂದ 12,000 ಕ್ಯೂಸೆಕ್ ನೀರು ಹೊರ ಹರಿಸಲಾಗುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>