<p><strong>ಯಾದಗಿರಿ:</strong> ‘ತಾಲ್ಲೂಕಿನ ಮುದ್ನಾಳ ಗ್ರಾಮ ಪಂಚಾಯಿತಿಯಲ್ಲಿ ನರೇಗಾ ಯೋಜನೆಯಡಿ ₹ 18.64 ಲಕ್ಷ ವೆಚ್ಚದಲ್ಲಿನ ಸಮುದಾಯ ಗೋದಾಮು ಕಾಮಗಾರಿಯಲ್ಲಿ ಅವ್ಯವಹಾರ ನಡೆದಿದೆ’ ಎಂದು ಅಖಿಲ ಭಾರತೀಯ ಕೋಲಿ ಸಮಾಜದ ರಾಜ್ಯ ಸಂಘಟನಾ ಕಾರ್ಯದರ್ಶಿ ಉಮೇಶ ಮುದ್ನಾಳ ಆರೋಪಿಸಿದರು.</p>.<p>‘ಗೋದಾಮು ಕಟ್ಟಡ ಕಾಮಗಾರಿಯನ್ನು ಪೂರ್ಣಗೊಳಿಸದೆ ಅನುದಾನನ್ನು ಕೆಲವು ಅಧಿಕಾರಿಗಳು ದುರ್ಬಳಕೆ ಮಾಡಿಕೊಂಡಿದ್ದಾರೆ. ಅವ್ಯವಹಾರ ಎಸಗಿದ ಬಗ್ಗೆ ದಾಖಲೆಗಳ ಸಮೇತ ತಾಲ್ಲೂಕು, ಜಿಲ್ಲಾ ಪಂಚಾಯಿತಿಗಳಿಗೆ ದೂರು ನೀಡಿದರೂ ಇದುವರೆಗೂ ತಪ್ಪಿತಸ್ಥರ ವಿರುದ್ಧ ಯಾವುದೇ ಕ್ರಮ ತೆಗೆದುಕೊಂಡಿಲ್ಲ’ ಎಂದು ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ದೂರಿದರು.</p>.<p>‘ಅವ್ಯವಹಾರದಲ್ಲಿ ಭಾಗಿಯಾಗಿ ಹಣ ಲಪಟಾಯಿಸಿದ ಅಧಿಕಾರಿಗಳಿಂದಲೇ ಹಣವನ್ನು ಹಿಂಪಡೆದು ಗೋದಾಮು ಕಾಮಗಾರಿಯನ್ನು ಪೂರ್ಣಗೊಳಿಸಬೇಕು. ಜೊತೆಗೆ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮವೂ ತೆಗೆದುಕೊಳ್ಳಬೇಕು. ಒಂದು ವಾರದೊಳಗೆ ಕ್ರಮ ತೆಗೆದುಕೊಳ್ಳದೆ ಇದ್ದರೆ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ಮಾಡಲಾಗುವುದು’ ಎಂದರು.</p>.<p>‘ಬಡ ರೈತರ ಉಪಯೋಗಕ್ಕೆ ನರೇಗಾ ಯೋಜನೆಯಡಿ ಗೋದಾಮು ಕಟ್ಟಲು ಲಕ್ಷಾಂತರ ರೂಪಾಯಿ ಅನುದಾನ ಬಿಡುಗಡೆ ಮಾಡಲಾಗಿತ್ತು. ಅಲ್ಪ ಕೆಲಸ ಮಾಡಿ ಒಂದೇ ದಿನದಲ್ಲಿ ನಾಲ್ಕು ಬಿಲ್ಗಳನ್ನು ಎತ್ತುವ ಮೂಲಕ ಪಿಡಿಒ ಸೇರಿ ಇತರೆ ಮೇಲಧಿಕಾರಿಗಳು ಅವ್ಯವಹಾರ ಎಸಗಿದ್ದಾರೆ. ಈ ಸಂಬಂಧ ದೂರು ಕೊಡಲಾಗಿದ್ದು, ಅಧಿಕಾರಿಗಳನ್ನು ರಕ್ಷಿಸಿ ಈ ಹಿಂದಿನ ಹಾಗೂ ಹಾಲಿ ಅಧ್ಯಕ್ಷರಿಗೆ ಪ್ರಾದೇಶಿಕ ಆಯುಕ್ತರು ನೋಟಿಸ್ ಕೊಟ್ಟಿದ್ದಾರೆ. ತಪ್ಪು ಎಸಗಿರುವ ಅಧಿಕಾರಿಗಳನ್ನು ರಕ್ಷಣೆ ಮಾಡಲಾಗಿದೆ’ ಎಂದು ಆಪಾದಿಸಿದರು.</p>.<p>ಪತ್ರಿಕಾಗೋಷ್ಠಿಯಲ್ಲಿ ಗ್ರಾಮಸ್ಥರಾದ ರವಿ, ಪ್ರಭು, ರಾಜಪ್ಪ, ಭೀಮಾಶಂಕರ, ನಾಗಪ್ಪ, ಮಲ್ಲೇಶಿ, ಶಿವು, ಪವನ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಾದಗಿರಿ:</strong> ‘ತಾಲ್ಲೂಕಿನ ಮುದ್ನಾಳ ಗ್ರಾಮ ಪಂಚಾಯಿತಿಯಲ್ಲಿ ನರೇಗಾ ಯೋಜನೆಯಡಿ ₹ 18.64 ಲಕ್ಷ ವೆಚ್ಚದಲ್ಲಿನ ಸಮುದಾಯ ಗೋದಾಮು ಕಾಮಗಾರಿಯಲ್ಲಿ ಅವ್ಯವಹಾರ ನಡೆದಿದೆ’ ಎಂದು ಅಖಿಲ ಭಾರತೀಯ ಕೋಲಿ ಸಮಾಜದ ರಾಜ್ಯ ಸಂಘಟನಾ ಕಾರ್ಯದರ್ಶಿ ಉಮೇಶ ಮುದ್ನಾಳ ಆರೋಪಿಸಿದರು.</p>.<p>‘ಗೋದಾಮು ಕಟ್ಟಡ ಕಾಮಗಾರಿಯನ್ನು ಪೂರ್ಣಗೊಳಿಸದೆ ಅನುದಾನನ್ನು ಕೆಲವು ಅಧಿಕಾರಿಗಳು ದುರ್ಬಳಕೆ ಮಾಡಿಕೊಂಡಿದ್ದಾರೆ. ಅವ್ಯವಹಾರ ಎಸಗಿದ ಬಗ್ಗೆ ದಾಖಲೆಗಳ ಸಮೇತ ತಾಲ್ಲೂಕು, ಜಿಲ್ಲಾ ಪಂಚಾಯಿತಿಗಳಿಗೆ ದೂರು ನೀಡಿದರೂ ಇದುವರೆಗೂ ತಪ್ಪಿತಸ್ಥರ ವಿರುದ್ಧ ಯಾವುದೇ ಕ್ರಮ ತೆಗೆದುಕೊಂಡಿಲ್ಲ’ ಎಂದು ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ದೂರಿದರು.</p>.<p>‘ಅವ್ಯವಹಾರದಲ್ಲಿ ಭಾಗಿಯಾಗಿ ಹಣ ಲಪಟಾಯಿಸಿದ ಅಧಿಕಾರಿಗಳಿಂದಲೇ ಹಣವನ್ನು ಹಿಂಪಡೆದು ಗೋದಾಮು ಕಾಮಗಾರಿಯನ್ನು ಪೂರ್ಣಗೊಳಿಸಬೇಕು. ಜೊತೆಗೆ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮವೂ ತೆಗೆದುಕೊಳ್ಳಬೇಕು. ಒಂದು ವಾರದೊಳಗೆ ಕ್ರಮ ತೆಗೆದುಕೊಳ್ಳದೆ ಇದ್ದರೆ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ಮಾಡಲಾಗುವುದು’ ಎಂದರು.</p>.<p>‘ಬಡ ರೈತರ ಉಪಯೋಗಕ್ಕೆ ನರೇಗಾ ಯೋಜನೆಯಡಿ ಗೋದಾಮು ಕಟ್ಟಲು ಲಕ್ಷಾಂತರ ರೂಪಾಯಿ ಅನುದಾನ ಬಿಡುಗಡೆ ಮಾಡಲಾಗಿತ್ತು. ಅಲ್ಪ ಕೆಲಸ ಮಾಡಿ ಒಂದೇ ದಿನದಲ್ಲಿ ನಾಲ್ಕು ಬಿಲ್ಗಳನ್ನು ಎತ್ತುವ ಮೂಲಕ ಪಿಡಿಒ ಸೇರಿ ಇತರೆ ಮೇಲಧಿಕಾರಿಗಳು ಅವ್ಯವಹಾರ ಎಸಗಿದ್ದಾರೆ. ಈ ಸಂಬಂಧ ದೂರು ಕೊಡಲಾಗಿದ್ದು, ಅಧಿಕಾರಿಗಳನ್ನು ರಕ್ಷಿಸಿ ಈ ಹಿಂದಿನ ಹಾಗೂ ಹಾಲಿ ಅಧ್ಯಕ್ಷರಿಗೆ ಪ್ರಾದೇಶಿಕ ಆಯುಕ್ತರು ನೋಟಿಸ್ ಕೊಟ್ಟಿದ್ದಾರೆ. ತಪ್ಪು ಎಸಗಿರುವ ಅಧಿಕಾರಿಗಳನ್ನು ರಕ್ಷಣೆ ಮಾಡಲಾಗಿದೆ’ ಎಂದು ಆಪಾದಿಸಿದರು.</p>.<p>ಪತ್ರಿಕಾಗೋಷ್ಠಿಯಲ್ಲಿ ಗ್ರಾಮಸ್ಥರಾದ ರವಿ, ಪ್ರಭು, ರಾಜಪ್ಪ, ಭೀಮಾಶಂಕರ, ನಾಗಪ್ಪ, ಮಲ್ಲೇಶಿ, ಶಿವು, ಪವನ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>