<p><strong>ಯಾದಗಿರಿ</strong>: ‘ನಗರದ ಅಭಿವೃದ್ಧಿ ಹಾಗೂ ಸೌಂದರ್ಯೀಕರಣಕ್ಕೆ ಹೆಚ್ಚಿನ ಒತ್ತು ನೀಡುವ ನಿಟ್ಟಿನಲ್ಲಿ ಹಲವು ಅಭಿವೃದ್ಧಿ ಕೆಲಸಗಳನ್ನು ಕೈಗೊಳ್ಳಲಾಗುತ್ತಿದೆ. ಈ ನಿಟ್ಟಿನಲ್ಲಿ ಮಹಾತ್ಮ ಗಾಂಧಿ, ನೇತಾಜಿ ಸುಭಾಷ್ ಮತ್ತು ಶಾಸ್ತ್ರಿ ವೃತ್ತಗಳಿಗೆ ಆಧುನಿಕತೆಯ ಸ್ಪರ್ಶ ನೀಡಲಾಗುತ್ತಿದೆ’ ಎಂದು ಶಾಸಕ ಚನ್ನಾರೆಡ್ಡಿ ಪಾಟೀಲ ತುನ್ನೂರು ಹೇಳಿದರು.</p>.<p>ಇಲ್ಲಿನ ನೇತಾಜಿ ಸುಭಾಷ್ ಹಾಗೂ ಶಾಸ್ತ್ರಿ ವೃತ್ತಗಳಲ್ಲಿ ನಡೆಯುತ್ತಿರುವ ಕಾಮಗಾರಿ ಸ್ಥಳಗಳಿಗೆ ಈಚೆಗೆ ಭೇಟಿ ನೀಡಿ ಅವರು ಮಾತನಾಡಿದರು.</p>.<p>‘ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಅನುದಾನದಡಿ ಈ ಎರಡೂ ವೃತ್ತಗಳ ಅಭಿವೃದ್ಧಿಗೆ ₹ 14.90 ಲಕ್ಷ ಬಿಡುಗಡೆಯಾಗಿದೆ. ನಿರ್ಮಿತಿ ಕೇಂದ್ರವು ಕಾಮಗಾರಿಯ ಜವಾಬ್ದಾರಿ ಹೊತ್ತುಕೊಂಡಿದೆ’ ಎಂದರು.</p>.<p>‘14 ಅಡಿಯ ಸುತ್ತು ಗೋಡೆ, ಗ್ರಾನೈಟ್ ಹಾಸಿಗೆ, ಸ್ಟೀಲ್ ಗ್ರಿಲ್, ಮೆಟ್ಟಿಲು, ದೀಪಾಲಂಕಾರ, ಕಾರಂಜಿ ನಿರ್ಮಾಣ ಆಗಲಿವೆ’ ಎಂದು ಹೇಳಿದರು.</p>.<p>ಈ ವೇಳೆ ನಗರಸಭೆ ಸದಸ್ಯ ಚನ್ನಕೇಶವ ಬಾಣತಿಹಾಳ, ಮಲ್ಲಿಕಾರ್ಜುನ ಈಟೆ, ನಿರ್ಮಿತಿ ಕೇಂದ್ರದ ಎಇ ರವಿ ಕಂದಕೂರ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಾದಗಿರಿ</strong>: ‘ನಗರದ ಅಭಿವೃದ್ಧಿ ಹಾಗೂ ಸೌಂದರ್ಯೀಕರಣಕ್ಕೆ ಹೆಚ್ಚಿನ ಒತ್ತು ನೀಡುವ ನಿಟ್ಟಿನಲ್ಲಿ ಹಲವು ಅಭಿವೃದ್ಧಿ ಕೆಲಸಗಳನ್ನು ಕೈಗೊಳ್ಳಲಾಗುತ್ತಿದೆ. ಈ ನಿಟ್ಟಿನಲ್ಲಿ ಮಹಾತ್ಮ ಗಾಂಧಿ, ನೇತಾಜಿ ಸುಭಾಷ್ ಮತ್ತು ಶಾಸ್ತ್ರಿ ವೃತ್ತಗಳಿಗೆ ಆಧುನಿಕತೆಯ ಸ್ಪರ್ಶ ನೀಡಲಾಗುತ್ತಿದೆ’ ಎಂದು ಶಾಸಕ ಚನ್ನಾರೆಡ್ಡಿ ಪಾಟೀಲ ತುನ್ನೂರು ಹೇಳಿದರು.</p>.<p>ಇಲ್ಲಿನ ನೇತಾಜಿ ಸುಭಾಷ್ ಹಾಗೂ ಶಾಸ್ತ್ರಿ ವೃತ್ತಗಳಲ್ಲಿ ನಡೆಯುತ್ತಿರುವ ಕಾಮಗಾರಿ ಸ್ಥಳಗಳಿಗೆ ಈಚೆಗೆ ಭೇಟಿ ನೀಡಿ ಅವರು ಮಾತನಾಡಿದರು.</p>.<p>‘ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಅನುದಾನದಡಿ ಈ ಎರಡೂ ವೃತ್ತಗಳ ಅಭಿವೃದ್ಧಿಗೆ ₹ 14.90 ಲಕ್ಷ ಬಿಡುಗಡೆಯಾಗಿದೆ. ನಿರ್ಮಿತಿ ಕೇಂದ್ರವು ಕಾಮಗಾರಿಯ ಜವಾಬ್ದಾರಿ ಹೊತ್ತುಕೊಂಡಿದೆ’ ಎಂದರು.</p>.<p>‘14 ಅಡಿಯ ಸುತ್ತು ಗೋಡೆ, ಗ್ರಾನೈಟ್ ಹಾಸಿಗೆ, ಸ್ಟೀಲ್ ಗ್ರಿಲ್, ಮೆಟ್ಟಿಲು, ದೀಪಾಲಂಕಾರ, ಕಾರಂಜಿ ನಿರ್ಮಾಣ ಆಗಲಿವೆ’ ಎಂದು ಹೇಳಿದರು.</p>.<p>ಈ ವೇಳೆ ನಗರಸಭೆ ಸದಸ್ಯ ಚನ್ನಕೇಶವ ಬಾಣತಿಹಾಳ, ಮಲ್ಲಿಕಾರ್ಜುನ ಈಟೆ, ನಿರ್ಮಿತಿ ಕೇಂದ್ರದ ಎಇ ರವಿ ಕಂದಕೂರ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>