<p>ಯಾದಗಿರಿ: ರಾಜ್ಯದ ವಿವಿಧ ಜಿಲ್ಲೆಗಳ ನ್ಯಾಯಾಲಯಗಳಿಗೆ ಬಾಂಬ್ ಬೆದರಿಕೆ ಸಂದೇಶ ಬಂದಿದ್ದ ಕಾರಣ ಪೊಲೀಸರು, ಬಾಂಬ್ ನಿಷ್ಕ್ರಿಯ ದಳ, ಶ್ವಾನ ದಳ ಸಿಬ್ಬಂದಿ ನಗರದ ಜನಸಂದಣಿ ಸ್ಥಳಗಳಲ್ಲಿ ಸೋಮವಾರ ಪರಿಶೀಲನೆ ನಡೆಸಿದರು.</p>.<p>ನಗರದ ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ, ಜಿಲ್ಲಾ ನ್ಯಾಯಾಲಯದ ಸೇರಿದಂತೆ ವಿವಿಧೆಡೆ ತಪಾಸಣೆ ನಡೆಸಿದರು. ಶ್ವಾನ ದಳದೊಂದಿಗೆ ಪ್ರಯಾಣಿಕರ ಲಗೇಜ್, ಅನುಮಾನಾಸ್ಪದ ವಸ್ತುಗಳನ್ನು ಪರಿಶೀಲಿಸಿದರು.</p>.<p>ಬಾಂಬ್ ನಿಷ್ಕ್ರಿಯ ದಳದ ತಂಡವು ಮಂಗಳವಾರ ನಾರಾಯಣಪುರ ಜಲಾಶಯ ಸೇರಿದಂತೆ ಜಿಲ್ಲೆಯ ಇತರೆ ಪ್ರಮುಖ ಸ್ಥಳಗಳಿಗೆ ತೆರಳಿ ತಪಾಸಣೆ ನಡೆಸಲಿದೆ ಎಂದು ಮೂಲಗಳು ತಿಳಿಸಿವೆ.</p>
<p>ಯಾದಗಿರಿ: ರಾಜ್ಯದ ವಿವಿಧ ಜಿಲ್ಲೆಗಳ ನ್ಯಾಯಾಲಯಗಳಿಗೆ ಬಾಂಬ್ ಬೆದರಿಕೆ ಸಂದೇಶ ಬಂದಿದ್ದ ಕಾರಣ ಪೊಲೀಸರು, ಬಾಂಬ್ ನಿಷ್ಕ್ರಿಯ ದಳ, ಶ್ವಾನ ದಳ ಸಿಬ್ಬಂದಿ ನಗರದ ಜನಸಂದಣಿ ಸ್ಥಳಗಳಲ್ಲಿ ಸೋಮವಾರ ಪರಿಶೀಲನೆ ನಡೆಸಿದರು.</p>.<p>ನಗರದ ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ, ಜಿಲ್ಲಾ ನ್ಯಾಯಾಲಯದ ಸೇರಿದಂತೆ ವಿವಿಧೆಡೆ ತಪಾಸಣೆ ನಡೆಸಿದರು. ಶ್ವಾನ ದಳದೊಂದಿಗೆ ಪ್ರಯಾಣಿಕರ ಲಗೇಜ್, ಅನುಮಾನಾಸ್ಪದ ವಸ್ತುಗಳನ್ನು ಪರಿಶೀಲಿಸಿದರು.</p>.<p>ಬಾಂಬ್ ನಿಷ್ಕ್ರಿಯ ದಳದ ತಂಡವು ಮಂಗಳವಾರ ನಾರಾಯಣಪುರ ಜಲಾಶಯ ಸೇರಿದಂತೆ ಜಿಲ್ಲೆಯ ಇತರೆ ಪ್ರಮುಖ ಸ್ಥಳಗಳಿಗೆ ತೆರಳಿ ತಪಾಸಣೆ ನಡೆಸಲಿದೆ ಎಂದು ಮೂಲಗಳು ತಿಳಿಸಿವೆ.</p>