<p><strong>ಯಾದಗಿರಿ:</strong> ಹಲ್ಲೆ, ಜೀವ ಬೆದರಿಕೆ ಪ್ರಕರಣದ ಆರೋಪಿಗಳನ್ನು ಬಂಧಿಸಲು ದೂರುದಾರರಿಂದ ಹಣ ಪಡೆದ ಆರೋಪದಡಿ ಇಬ್ಬರು ಪೊಲೀಸರನ್ನು ಎಸ್ಪಿ ಪೃಥ್ವಿಕ್ ಶಂಕರ್ ಅವರು ಮಂಗಳವಾರ ಅಮಾನತು ಮಾಡಿದ್ದಾರೆ.</p>.<p>ಗುರುಮಠಕಲ್ ಪೊಲೀಸ್ ಠಾಣೆಯ ಎಎಸ್ಐ ಗೋಪಾಲರೆಡ್ಡಿ ಹಾಗೂ ಹೆಡ್ಕಾನ್ಸ್ಟೆಬಲ್ ವಿಶ್ವನಾಥರೆಡ್ಡಿ ಅಮಾನತು ಆದವರು. ಮಿನಾಸಪುರದ ಅನುಸೂಯಾ ವೆಂಟಕರಡ್ಡಿ ಅವರು ನೀಡಿದ ದೂರಿನ ಅನ್ವಯ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.</p>.<p>ಅನುಸೂಯಾ ಅವರ ಪತಿ ಹಾಗೂ ಮಗನ ಮೇಲೆ ಯಾದಯ್ಯ, ಮಲ್ಲಯ್ಯ, ಗೋಪಿ ಸೇರಿ ಐವರು ಹಲ್ಲೆ ಮಾಡಿದ್ದರು. ಈ ಸಂಬಂಧ ಅನುಸೂಯಾ ಅವರು ಗುರುಮಠಕಲ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಆರೋಪಿಗಳನ್ನು ಬಂಧಿಸಲು ಗೋಪಾಲರೆಡ್ಡಿ ಹಾಗೂ ವಿಶ್ವನಾಥರೆಡ್ಡಿ ₹ 1 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದರು. ಒಬ್ಬರು ಫೋನ್ ಪೇ ಮೂಲಕ ₹ 10 ಸಾವಿರ ಹಾಗೂ ಮತ್ತೊಬ್ಬರು ₹ 10 ಸಾವಿರ ನಗದು ಪಡೆದಿದ್ದಾರೆ ಎಂದು ದೂರಿನಲ್ಲಿ ಆರೋಪಿಸಿದ್ದಾಗಿ ಮಾಹಿತಿ ನೀಡಿದ್ದಾರೆ. </p>.<p>ಡಿವೈಎಸ್ಪಿ ಸುರೇಶ ಅವರು ಈ ಬಗ್ಗೆ ವಿಚಾರಣೆ ನಡೆಸಿ ಎಸ್ಪಿ ಅವರಿಗೆ ವರದಿ ಸಲ್ಲಿಸಿದರು. ವರದಿ ಆಧರಿಸಿ ಈ ಇಬ್ಬರನ್ನು ಸೇವೆಯಿಂದ ಅಮಾನತುಗೊಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಾದಗಿರಿ:</strong> ಹಲ್ಲೆ, ಜೀವ ಬೆದರಿಕೆ ಪ್ರಕರಣದ ಆರೋಪಿಗಳನ್ನು ಬಂಧಿಸಲು ದೂರುದಾರರಿಂದ ಹಣ ಪಡೆದ ಆರೋಪದಡಿ ಇಬ್ಬರು ಪೊಲೀಸರನ್ನು ಎಸ್ಪಿ ಪೃಥ್ವಿಕ್ ಶಂಕರ್ ಅವರು ಮಂಗಳವಾರ ಅಮಾನತು ಮಾಡಿದ್ದಾರೆ.</p>.<p>ಗುರುಮಠಕಲ್ ಪೊಲೀಸ್ ಠಾಣೆಯ ಎಎಸ್ಐ ಗೋಪಾಲರೆಡ್ಡಿ ಹಾಗೂ ಹೆಡ್ಕಾನ್ಸ್ಟೆಬಲ್ ವಿಶ್ವನಾಥರೆಡ್ಡಿ ಅಮಾನತು ಆದವರು. ಮಿನಾಸಪುರದ ಅನುಸೂಯಾ ವೆಂಟಕರಡ್ಡಿ ಅವರು ನೀಡಿದ ದೂರಿನ ಅನ್ವಯ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.</p>.<p>ಅನುಸೂಯಾ ಅವರ ಪತಿ ಹಾಗೂ ಮಗನ ಮೇಲೆ ಯಾದಯ್ಯ, ಮಲ್ಲಯ್ಯ, ಗೋಪಿ ಸೇರಿ ಐವರು ಹಲ್ಲೆ ಮಾಡಿದ್ದರು. ಈ ಸಂಬಂಧ ಅನುಸೂಯಾ ಅವರು ಗುರುಮಠಕಲ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಆರೋಪಿಗಳನ್ನು ಬಂಧಿಸಲು ಗೋಪಾಲರೆಡ್ಡಿ ಹಾಗೂ ವಿಶ್ವನಾಥರೆಡ್ಡಿ ₹ 1 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದರು. ಒಬ್ಬರು ಫೋನ್ ಪೇ ಮೂಲಕ ₹ 10 ಸಾವಿರ ಹಾಗೂ ಮತ್ತೊಬ್ಬರು ₹ 10 ಸಾವಿರ ನಗದು ಪಡೆದಿದ್ದಾರೆ ಎಂದು ದೂರಿನಲ್ಲಿ ಆರೋಪಿಸಿದ್ದಾಗಿ ಮಾಹಿತಿ ನೀಡಿದ್ದಾರೆ. </p>.<p>ಡಿವೈಎಸ್ಪಿ ಸುರೇಶ ಅವರು ಈ ಬಗ್ಗೆ ವಿಚಾರಣೆ ನಡೆಸಿ ಎಸ್ಪಿ ಅವರಿಗೆ ವರದಿ ಸಲ್ಲಿಸಿದರು. ವರದಿ ಆಧರಿಸಿ ಈ ಇಬ್ಬರನ್ನು ಸೇವೆಯಿಂದ ಅಮಾನತುಗೊಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>