<p><strong>ನಾರಾಯಣಪುರ</strong>: ಸಮೀಪದ ಮಾರನಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾರನಾಳ ತಾಂಡಾದಲ್ಲಿ ಕೊಳವೆಬಾವಿ ನೀರು ಕುಡಿದ 9 ಜನ ವಾಂತಿ ಭೇದಿಯಿಂದ ಅಸ್ವಸ್ಥರಾಗಿದ್ದಾರೆ.</p>.<p>ತಾಂಡಾದಲ್ಲಿ ಎರಡು ಕೊಳವೆಬಾವಿಗಳಿವೆ. ಜನ ದಿನಾಲೂ ಬಳಸುತ್ತಿದ್ದ ಒಂದು ಕೊಳವೆಬಾವಿ ಮೂರು ದಿನಗಳ ಹಿಂದೆ ದುರಸ್ತಿಗೆ ಬಂದಿತ್ತು. ಇನ್ನೊಂದು ಕೊಳವೆಬಾವಿಯ ನೀರು ಕುಡಿದ 4 ಜನರಲ್ಲಿ ಸೋಮವಾರ ಆರೋಗ್ಯ ಸಮಸ್ಯೆ ಕಂಡುಬಂದಿದೆ. ಕೂಡಲೇ ಎಲ್ಲರನ್ನೂ ಕೊಡೇಕಲ್ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆತಂದು ಚಿಕಿತ್ಸೆ ಕೊಡಿಸಲಾಗಿದೆ ಎಂದು ಕೊಡೇಕಲ್ ಸಮುದಾಯ ಆರೋಗ್ಯ ಕೇಂದ್ರದ ವೈದ್ಯ ಡಾ.ಪವನರಾವ್ ಮಾಹಿತಿ ನೀಡಿದರು. </p>.<p>ಮಂಗಳವಾರ, ಬುಧವಾರ ಮತ್ತೆ 5 ಜನರಲ್ಲಿ ವಾಂತಿ ಭೇದಿ ಕಂಡು ಬಂದಿದ್ದು, ಅವರಿಗೂ ಚಿಕಿತ್ಸೆ ಕೊಡಿಸಿ ತಾಂಡಾಕ್ಕೆ ಕಳುಹಿಸಿಕೊಡಲಾಗಿದೆ. ಸದ್ಯ ಎಲ್ಲರೂ ಆರೋಗ್ಯವಾಗಿದ್ದಾರೆ. ನಿತ್ಯವೂ ಬಳಸುವ ಕೊಳವೆಬಾವಿಯನ್ನು ಗ್ರಾಮ ಪಂಚಾಯಿತಿ ದುರಸ್ತಿ ಮಾಡಿಸಿದೆ ಎಂದೂ ಅವರು ತಿಳಿಸಿದರು.</p>.<p>ಆರೋಗ್ಯ ನಿರೀಕ್ಷಣಾಧಿಕಾರಿ ಚನ್ನಬಸು ನಾಲತವಾಡ, ನೀಲಮ್ಮ ಗಸ್ತಿ, ಇಸ್ಮಾಯಿಲ್, ಆಶಾ ಕಾರ್ಯಕರ್ತೆ ಮಾನಮ್ಮ, ಸವಿತಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನಾರಾಯಣಪುರ</strong>: ಸಮೀಪದ ಮಾರನಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾರನಾಳ ತಾಂಡಾದಲ್ಲಿ ಕೊಳವೆಬಾವಿ ನೀರು ಕುಡಿದ 9 ಜನ ವಾಂತಿ ಭೇದಿಯಿಂದ ಅಸ್ವಸ್ಥರಾಗಿದ್ದಾರೆ.</p>.<p>ತಾಂಡಾದಲ್ಲಿ ಎರಡು ಕೊಳವೆಬಾವಿಗಳಿವೆ. ಜನ ದಿನಾಲೂ ಬಳಸುತ್ತಿದ್ದ ಒಂದು ಕೊಳವೆಬಾವಿ ಮೂರು ದಿನಗಳ ಹಿಂದೆ ದುರಸ್ತಿಗೆ ಬಂದಿತ್ತು. ಇನ್ನೊಂದು ಕೊಳವೆಬಾವಿಯ ನೀರು ಕುಡಿದ 4 ಜನರಲ್ಲಿ ಸೋಮವಾರ ಆರೋಗ್ಯ ಸಮಸ್ಯೆ ಕಂಡುಬಂದಿದೆ. ಕೂಡಲೇ ಎಲ್ಲರನ್ನೂ ಕೊಡೇಕಲ್ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆತಂದು ಚಿಕಿತ್ಸೆ ಕೊಡಿಸಲಾಗಿದೆ ಎಂದು ಕೊಡೇಕಲ್ ಸಮುದಾಯ ಆರೋಗ್ಯ ಕೇಂದ್ರದ ವೈದ್ಯ ಡಾ.ಪವನರಾವ್ ಮಾಹಿತಿ ನೀಡಿದರು. </p>.<p>ಮಂಗಳವಾರ, ಬುಧವಾರ ಮತ್ತೆ 5 ಜನರಲ್ಲಿ ವಾಂತಿ ಭೇದಿ ಕಂಡು ಬಂದಿದ್ದು, ಅವರಿಗೂ ಚಿಕಿತ್ಸೆ ಕೊಡಿಸಿ ತಾಂಡಾಕ್ಕೆ ಕಳುಹಿಸಿಕೊಡಲಾಗಿದೆ. ಸದ್ಯ ಎಲ್ಲರೂ ಆರೋಗ್ಯವಾಗಿದ್ದಾರೆ. ನಿತ್ಯವೂ ಬಳಸುವ ಕೊಳವೆಬಾವಿಯನ್ನು ಗ್ರಾಮ ಪಂಚಾಯಿತಿ ದುರಸ್ತಿ ಮಾಡಿಸಿದೆ ಎಂದೂ ಅವರು ತಿಳಿಸಿದರು.</p>.<p>ಆರೋಗ್ಯ ನಿರೀಕ್ಷಣಾಧಿಕಾರಿ ಚನ್ನಬಸು ನಾಲತವಾಡ, ನೀಲಮ್ಮ ಗಸ್ತಿ, ಇಸ್ಮಾಯಿಲ್, ಆಶಾ ಕಾರ್ಯಕರ್ತೆ ಮಾನಮ್ಮ, ಸವಿತಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>