<p><strong>ಯಾದಗಿರಿ:</strong> ಜಿಲ್ಲಾ ಕ್ರೀಡಾಂಗಣ ಅಭಿವೃದ್ಧಿಗೆ ನಿರ್ಲಕ್ಷ್ಯ, ಜಿಲ್ಲಾಡಳಿತದ ಆಡಳಿತ ವೈಫಲ್ಯ ಖಂಡಿಸಿ ಕಲ್ಯಾಣ ಕರ್ನಾಟಕ ಯುವ ಸಂಘ, ಕೆಆರ್ಎಸ್ ಮುಖಂಡರು ನಗರದಲ್ಲಿ ಸೋಮವಾರ ಪ್ರತಿಭಟನಾ ಮೆರವಣಿಗೆ ನಡೆಸಿದರು.</p>.<p>ನಗರದ ನೇತಾಜಿ ಸುಭಾಷ್ಚಂದ್ರ ಬೋಸ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಕ್ರೀಡಾಪಟುಗಳ ಪದಕಗಳೊಂದಿಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು. ಜಿಲ್ಲಾಡಳಿತದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.</p>.<p>ಜಿಲ್ಲಾ ಕ್ರೀಡಾಂಗಣಕ್ಕೆ ಕೆಕೆಆರ್ಡಿಬಿಯಿಂದ ₹ 10 ಕೋಟಿ ಬಿಡುಗಡೆಯಾಗಿದ್ದರೂ ಅದನ್ನು ಸಮರ್ಪಕವಾಗಿ ಬಳಕೆ ಮಾಡಿಕೊಂಡಿಲ್ಲ. ರನ್ನಿಂಗ್ ಟ್ರ್ಯಾಕ್ ಬೇಕಾಬಿಟ್ಟಿಯಾಗಿ ನಿರ್ಮಿಸಲಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.</p>.<p>ಈ ಹಿಂದೆ ನಡೆಸಿದ ಪ್ರತಿಭಟನೆಯ ವೇಳೆ ಹೆಚ್ಚುವರಿ ಜಿಲ್ಲಾಧಿಕಾರಿ ನೀಡಿದ ಭರವಸೆಯನ್ನು ಈಡೇರಿಸಬೇಕು. ಜಿಲ್ಲೆಯಲ್ಲಿನ ಸಮಸ್ಯೆಗಳನ್ನು ಕಾಲಮಿತಿಯೊಳಗೆ ಕ್ರಿಯಾ ಯೋಜನೆ ಮಾಡಿ, ಪರಿಹಾರ ಕಲ್ಪಿಸಬೇಕು. 7 ದಿನಗಳ ಒಳಗೆ ಯಾವುದೇ ಕ್ರಮ ಕೈಗೊಳ್ಳದಿದ್ದಲ್ಲಿ ಮಾನವ ಹಕ್ಕುಗಳ ಆಯೋಗ ಹಾಗೂ ಲೋಕಾಯುಕ್ತರಿಗೆ ದೂರು ನೀಡಲಾಗುವುದು ಎಂದು ಹೇಳಿದರು.</p>.<p>ಪ್ರತಿಭಟನೆಯಲ್ಲಿ ಮುಖಂಡರಾದ ಪುನೀತ್ ರಾಜ್ ಕಾಮತಗಿ, ಲೋಕೇಶ ರಾಠೋಡ್, ಎಸ್.ಜಗನ್ನಾಥ ಚಿಂತನಳ್ಳಿ, ಎಸ್.ನಿಜಲಿಂಗಪ್ಪ ಪೂಜಾರಿ, ಚರಿತಾ ಕೊಂಕಲ್ ಸೇರಿದಂತೆ ಇತರರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಾದಗಿರಿ:</strong> ಜಿಲ್ಲಾ ಕ್ರೀಡಾಂಗಣ ಅಭಿವೃದ್ಧಿಗೆ ನಿರ್ಲಕ್ಷ್ಯ, ಜಿಲ್ಲಾಡಳಿತದ ಆಡಳಿತ ವೈಫಲ್ಯ ಖಂಡಿಸಿ ಕಲ್ಯಾಣ ಕರ್ನಾಟಕ ಯುವ ಸಂಘ, ಕೆಆರ್ಎಸ್ ಮುಖಂಡರು ನಗರದಲ್ಲಿ ಸೋಮವಾರ ಪ್ರತಿಭಟನಾ ಮೆರವಣಿಗೆ ನಡೆಸಿದರು.</p>.<p>ನಗರದ ನೇತಾಜಿ ಸುಭಾಷ್ಚಂದ್ರ ಬೋಸ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಕ್ರೀಡಾಪಟುಗಳ ಪದಕಗಳೊಂದಿಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು. ಜಿಲ್ಲಾಡಳಿತದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.</p>.<p>ಜಿಲ್ಲಾ ಕ್ರೀಡಾಂಗಣಕ್ಕೆ ಕೆಕೆಆರ್ಡಿಬಿಯಿಂದ ₹ 10 ಕೋಟಿ ಬಿಡುಗಡೆಯಾಗಿದ್ದರೂ ಅದನ್ನು ಸಮರ್ಪಕವಾಗಿ ಬಳಕೆ ಮಾಡಿಕೊಂಡಿಲ್ಲ. ರನ್ನಿಂಗ್ ಟ್ರ್ಯಾಕ್ ಬೇಕಾಬಿಟ್ಟಿಯಾಗಿ ನಿರ್ಮಿಸಲಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.</p>.<p>ಈ ಹಿಂದೆ ನಡೆಸಿದ ಪ್ರತಿಭಟನೆಯ ವೇಳೆ ಹೆಚ್ಚುವರಿ ಜಿಲ್ಲಾಧಿಕಾರಿ ನೀಡಿದ ಭರವಸೆಯನ್ನು ಈಡೇರಿಸಬೇಕು. ಜಿಲ್ಲೆಯಲ್ಲಿನ ಸಮಸ್ಯೆಗಳನ್ನು ಕಾಲಮಿತಿಯೊಳಗೆ ಕ್ರಿಯಾ ಯೋಜನೆ ಮಾಡಿ, ಪರಿಹಾರ ಕಲ್ಪಿಸಬೇಕು. 7 ದಿನಗಳ ಒಳಗೆ ಯಾವುದೇ ಕ್ರಮ ಕೈಗೊಳ್ಳದಿದ್ದಲ್ಲಿ ಮಾನವ ಹಕ್ಕುಗಳ ಆಯೋಗ ಹಾಗೂ ಲೋಕಾಯುಕ್ತರಿಗೆ ದೂರು ನೀಡಲಾಗುವುದು ಎಂದು ಹೇಳಿದರು.</p>.<p>ಪ್ರತಿಭಟನೆಯಲ್ಲಿ ಮುಖಂಡರಾದ ಪುನೀತ್ ರಾಜ್ ಕಾಮತಗಿ, ಲೋಕೇಶ ರಾಠೋಡ್, ಎಸ್.ಜಗನ್ನಾಥ ಚಿಂತನಳ್ಳಿ, ಎಸ್.ನಿಜಲಿಂಗಪ್ಪ ಪೂಜಾರಿ, ಚರಿತಾ ಕೊಂಕಲ್ ಸೇರಿದಂತೆ ಇತರರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>