<p><strong>ಯಾದಗಿರಿ:</strong> ಜಿಲ್ಲೆಯ ಹುಣಸಗಿ ತಾಲ್ಲೂಕಿನ ನಾರಾಯಣಪುರ ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ ಹರಿಸುವ ನೀರಿನ ಪ್ರಮಾಣ ಇಳಿಕೆಯಾಗಿದ್ದು, ರೈತರ ಆತಂಕ ದೂರವಾಗಿದೆ.</p>.<p>ಸದ್ಯ ಜಲಾಶಯದಿಂದ 2.29 ಲಕ್ಷ ಕ್ಯುಸೆಕ್ ನೀರು ಹರಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ನೀರು ಇಳಿಕೆಯಾಗುವ ಸಾಧ್ಯತೆ ಇದೆ.</p>.<p>ಕಳೆದ 10 ದಿನಗಳಿಂದ ಶಹಾಪುರ ತಾಲ್ಲೂಕಿನ ಕೊಳ್ಳೂರು (ಎಂ) ಸೇತುವೆ ಮುಳುಗಡೆಯಾಗಿತ್ತು. ಇದರಿಂದ ಯಾದಗಿರಿ, ಕಲಬುರ್ಗಿ, ರಾಯಚೂರು ಮಾರ್ಗ ಬಂದ್ ಆಗಿತ್ತು. ಸೋಮವಾರ ಸೇತುವೆ ಮೇಲೆ ಹರಿಯುವ ನೀರಿನ ಪ್ರಮಾಣ ಇಳಿಕೆಯಾಗಿದ್ದು, ಸಂಜೆ ವೇಳೆಗೆ ಸಂಚಾರಕ್ಕೆ ಮುಕ್ತವಾಗುವ ಸಾಧ್ಯತೆ ಇದೆ.</p>.<p><strong>ಸಾವಿರಾರು ಹೆಕ್ಟೇರ್ ಪ್ರದೇಶಕ್ಕೆ ಹಾನಿ:</strong></p>.<p>ಕೃಷ್ಣಾ ನದಿ ಪ್ರವಾಹದಿಂದ ಜಿಲ್ಲೆಯ ಮೂರು ತಾಲ್ಲೂಕಿನ ಸಾವಿರಾರು ಹೆಕ್ಟೇರ್ ಪ್ರದೇಶದಲ್ಲಿ ಬೆಳೆದ ಬೆಳೆಗಳು ಹಾಳಾಗಿವೆ.</p>.<p>ಸುರಪುರ, ಶಹಾಪುರ, ವಡಗೇರಾ ತಾಲ್ಲೂಕಿನ ನದಿಯಂಚಿನ ಗ್ರಾಮಗಳ ಜಮೀನುಗಳಿಗೆ ನೀರು ನುಗ್ಗಿದ್ದರಿಂದ ಭತ್ತ, ಹತ್ತಿ ಬೆಳೆಗಳು ಹಾಳಾಗಿವೆ. ಎಕರೆಗೆ ₹20 ರಿಂದ ₹30 ಸಾವಿರ ಹಣ ಖರ್ಚು ಮಾಡಿ ಬೆಳೆದಿದ್ದ ಫಸಲು ನಷ್ಟವಾಗಿದೆ.</p>.<p>ನದಿಯಂಚಿನಲ್ಲಿದ್ದ 50 ಕ್ಕೂ ಹೆಚ್ಚು ಕುಟುಂಬಗಳನ್ನು ಸುರಕ್ಷತಾ ಸ್ಥಳಕ್ಕೆ ಸ್ಥಳಾಂತರಿಸಲಾಗಿತ್ತು. ಕಳೆದ 10 ದಿನಗಳಿಂದ ಜಿಲ್ಲೆ ಕೃಷ್ಣಾ ನದಿ ಪ್ರವಾಹ ಎದುರಿಸಿತ್ತು.</p>.<p>'ಪ್ರವಾಹದ ನೀರು ಇಳಿಕೆಯಾಗುತ್ತಿದ್ದು, ಶೀಘ್ರ ಹಾನಿಯಾದ ಪ್ರದೇಶಗಳಿಗೆ ಅಧಿಕಾರಿಗಳು ಭೇಟಿ ನೀಡಿ ಸರ್ವೆ ಮಾಡಬೇಕು. ತಕ್ಷಣವೇ ಪರಿಹಾರ ನೀಡಬೇಕು' ಎಂದು ರೈತ ಶಿವಾರೆಡ್ಡಿ ಪಾಟೀಲ ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಾದಗಿರಿ:</strong> ಜಿಲ್ಲೆಯ ಹುಣಸಗಿ ತಾಲ್ಲೂಕಿನ ನಾರಾಯಣಪುರ ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ ಹರಿಸುವ ನೀರಿನ ಪ್ರಮಾಣ ಇಳಿಕೆಯಾಗಿದ್ದು, ರೈತರ ಆತಂಕ ದೂರವಾಗಿದೆ.</p>.<p>ಸದ್ಯ ಜಲಾಶಯದಿಂದ 2.29 ಲಕ್ಷ ಕ್ಯುಸೆಕ್ ನೀರು ಹರಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ನೀರು ಇಳಿಕೆಯಾಗುವ ಸಾಧ್ಯತೆ ಇದೆ.</p>.<p>ಕಳೆದ 10 ದಿನಗಳಿಂದ ಶಹಾಪುರ ತಾಲ್ಲೂಕಿನ ಕೊಳ್ಳೂರು (ಎಂ) ಸೇತುವೆ ಮುಳುಗಡೆಯಾಗಿತ್ತು. ಇದರಿಂದ ಯಾದಗಿರಿ, ಕಲಬುರ್ಗಿ, ರಾಯಚೂರು ಮಾರ್ಗ ಬಂದ್ ಆಗಿತ್ತು. ಸೋಮವಾರ ಸೇತುವೆ ಮೇಲೆ ಹರಿಯುವ ನೀರಿನ ಪ್ರಮಾಣ ಇಳಿಕೆಯಾಗಿದ್ದು, ಸಂಜೆ ವೇಳೆಗೆ ಸಂಚಾರಕ್ಕೆ ಮುಕ್ತವಾಗುವ ಸಾಧ್ಯತೆ ಇದೆ.</p>.<p><strong>ಸಾವಿರಾರು ಹೆಕ್ಟೇರ್ ಪ್ರದೇಶಕ್ಕೆ ಹಾನಿ:</strong></p>.<p>ಕೃಷ್ಣಾ ನದಿ ಪ್ರವಾಹದಿಂದ ಜಿಲ್ಲೆಯ ಮೂರು ತಾಲ್ಲೂಕಿನ ಸಾವಿರಾರು ಹೆಕ್ಟೇರ್ ಪ್ರದೇಶದಲ್ಲಿ ಬೆಳೆದ ಬೆಳೆಗಳು ಹಾಳಾಗಿವೆ.</p>.<p>ಸುರಪುರ, ಶಹಾಪುರ, ವಡಗೇರಾ ತಾಲ್ಲೂಕಿನ ನದಿಯಂಚಿನ ಗ್ರಾಮಗಳ ಜಮೀನುಗಳಿಗೆ ನೀರು ನುಗ್ಗಿದ್ದರಿಂದ ಭತ್ತ, ಹತ್ತಿ ಬೆಳೆಗಳು ಹಾಳಾಗಿವೆ. ಎಕರೆಗೆ ₹20 ರಿಂದ ₹30 ಸಾವಿರ ಹಣ ಖರ್ಚು ಮಾಡಿ ಬೆಳೆದಿದ್ದ ಫಸಲು ನಷ್ಟವಾಗಿದೆ.</p>.<p>ನದಿಯಂಚಿನಲ್ಲಿದ್ದ 50 ಕ್ಕೂ ಹೆಚ್ಚು ಕುಟುಂಬಗಳನ್ನು ಸುರಕ್ಷತಾ ಸ್ಥಳಕ್ಕೆ ಸ್ಥಳಾಂತರಿಸಲಾಗಿತ್ತು. ಕಳೆದ 10 ದಿನಗಳಿಂದ ಜಿಲ್ಲೆ ಕೃಷ್ಣಾ ನದಿ ಪ್ರವಾಹ ಎದುರಿಸಿತ್ತು.</p>.<p>'ಪ್ರವಾಹದ ನೀರು ಇಳಿಕೆಯಾಗುತ್ತಿದ್ದು, ಶೀಘ್ರ ಹಾನಿಯಾದ ಪ್ರದೇಶಗಳಿಗೆ ಅಧಿಕಾರಿಗಳು ಭೇಟಿ ನೀಡಿ ಸರ್ವೆ ಮಾಡಬೇಕು. ತಕ್ಷಣವೇ ಪರಿಹಾರ ನೀಡಬೇಕು' ಎಂದು ರೈತ ಶಿವಾರೆಡ್ಡಿ ಪಾಟೀಲ ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>