<p><strong>ನಾರಾಯಣಪುರ</strong>: ಆಲಮಟ್ಟಿಯ ಜಲಾಶಯದಿಂದ ಬರುತ್ತಿರುವ ನೀರಿನ ಪ್ರಮಾಣ ಹೆಚ್ಚಿದ ಬೆನ್ನಲ್ಲೆ ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿ ಪಾತ್ರಕ್ಕೆ ಬಿಡುವ ನೀರಿನ ಪ್ರಮಾಣವನ್ನು ಹೆಚ್ಚಿಸಲಾಗಿದೆ. ಈ ಬೆನ್ನಲ್ಲೆ ಜಲಾಶಯ ಕಣ್ತುಂಬಿಕೊಳ್ಳಲು ಪ್ರವಾಸಿಗರ ದಂಡು ಹರಿದು ಬರುತ್ತಿದೆ.</p>.<p>ಆಲಮಟ್ಟಿ ಶಾಸ್ತ್ರಿ ಜಲಾಶಯದಿಂದ ಭಾನುವಾರ ಸಂಜೆ 70 ಸಾವಿರ ಕ್ಯುಸೆಕ್ನಷ್ಟು ನೀರು ಬಸವಸಾಗರಕ್ಕೆ ಹರಿಬಿಡಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಆಣೆಕಟ್ಟಿನ 20 ಕ್ರಸ್ಟ್ಗೇಟ್ಗಳನ್ನು ತೆರದು 63 ಸಾವಿರ ಕ್ಯುಸೆಕ್ ನೀರು ನದಿಗೆ ಹರಿಸಲಾಗುತ್ತಿದೆ ಎಂದು ಜಲಾಶಯಗಳ ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಜಲಾಶಯದ ಗರಿಷ್ಠ ಎತ್ತರ 491.75 ಮೀಟರ್ ಇದ್ದು, ಸದ್ಯ ಶೇ 93.09ರಷ್ಟು ಭರ್ತಿಯಾಗಿದೆ. ಜಲಾಶಯದಲ್ಲಿ 31.01 ಟಿಎಂಸಿ ಅಡಿಗಳಷ್ಟು ನೀರಿದೆ ಎಂದು ಕೆಬಿಜೆಎನ್ಎಲ್ ಮೂಲಗಳು ಹೇಳಿವೆ.</p>.<p><strong>ಪ್ರವಾಸಿಗರ ದಂಡು:</strong></p>.<p>ಕ್ರಸ್ಟ್ ಗೇಟ್ಗಳ ಮೂಲಕ ಅಪಾರ ಪ್ರಮಾಣದಲ್ಲಿ ನೀರನ್ನು ಕೃಷ್ಣಾ ನದಿಗೆ ಹರಿಬಿಡುವ ದೃಶ್ಯ ವೀಕ್ಷಿಸಲು ರಜಾ ದಿನವಾದ ಭಾನುವಾರ ಸಹಸ್ರಾರು ಪ್ರವಾಸಿಗರು ತಂಡೋಪ ತಂಡವಾಗಿ ಬಸವಸಾಗರ ಜಲಾಶಯ ಭೇಟಿ ನೀಡಿದರು.</p>.<p>ಕ್ರಸ್ಟ್ಗೇಟ್ಗಳ ಮೂಲಕ ಹೊಮ್ಮುವ ಜಲಧಾರೆ ಸೌಂದರ್ಯ ಕಣ್ತುಂಬಿಕೊಂಡು ಸಂಭ್ರಮಿಸಿದರು.</p>.<p>ಜಲಾಶಯ ಭಾಗದಲ್ಲಿ ಹಲವರು ತಳ್ಳುಗಾಡಿಗಳಲ್ಲಿ ಕುರಕಲು ತಿನಿಸು, ನೀರಿನ ಬಾಟಲ್, ಸ್ವೀಟ್ ಕಾರ್ನ್, ಶೇಂಗಾ ಹಾಗೂ ಭಜಿ ಸೇರಿ ಇತರೆ ತಿನಿಸುಗಳ ವಹಿವಾಟು ಜೋರಾಗಿತ್ತು.</p>.<p>‘ಈ ಸಂದರ್ಭದಲ್ಲಿ ಜಲಾಶಯ ನೋಡಲು ಸಾವಿರಾರು ಜನರು ಬರುತ್ತಾರೆ. ಬಸವಸಾಗರ ಮುಂಭಾಗದಲ್ಲಿ ಆಕರ್ಷಕ ಉದ್ಯಾನ ನಿರ್ಮಿಸಿದರೆ, ಸ್ಥಳೀಯರಿಗೆ ಉದ್ಯೋಗಾವಕಾಶ ಸೃಷ್ಟಿಯ ಜೊತೆಗೆ ಪ್ರವಾಸೋದ್ಯಮಕ್ಕೆ ಬಲ ಸಿಕ್ಕಂತಾಗುತ್ತದೆ’ ಎಂದು ಸ್ಥಳೀಯರೊಬ್ಬರು ಅಭಿಪ್ರಾಯಪಟ್ಟರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನಾರಾಯಣಪುರ</strong>: ಆಲಮಟ್ಟಿಯ ಜಲಾಶಯದಿಂದ ಬರುತ್ತಿರುವ ನೀರಿನ ಪ್ರಮಾಣ ಹೆಚ್ಚಿದ ಬೆನ್ನಲ್ಲೆ ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿ ಪಾತ್ರಕ್ಕೆ ಬಿಡುವ ನೀರಿನ ಪ್ರಮಾಣವನ್ನು ಹೆಚ್ಚಿಸಲಾಗಿದೆ. ಈ ಬೆನ್ನಲ್ಲೆ ಜಲಾಶಯ ಕಣ್ತುಂಬಿಕೊಳ್ಳಲು ಪ್ರವಾಸಿಗರ ದಂಡು ಹರಿದು ಬರುತ್ತಿದೆ.</p>.<p>ಆಲಮಟ್ಟಿ ಶಾಸ್ತ್ರಿ ಜಲಾಶಯದಿಂದ ಭಾನುವಾರ ಸಂಜೆ 70 ಸಾವಿರ ಕ್ಯುಸೆಕ್ನಷ್ಟು ನೀರು ಬಸವಸಾಗರಕ್ಕೆ ಹರಿಬಿಡಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಆಣೆಕಟ್ಟಿನ 20 ಕ್ರಸ್ಟ್ಗೇಟ್ಗಳನ್ನು ತೆರದು 63 ಸಾವಿರ ಕ್ಯುಸೆಕ್ ನೀರು ನದಿಗೆ ಹರಿಸಲಾಗುತ್ತಿದೆ ಎಂದು ಜಲಾಶಯಗಳ ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಜಲಾಶಯದ ಗರಿಷ್ಠ ಎತ್ತರ 491.75 ಮೀಟರ್ ಇದ್ದು, ಸದ್ಯ ಶೇ 93.09ರಷ್ಟು ಭರ್ತಿಯಾಗಿದೆ. ಜಲಾಶಯದಲ್ಲಿ 31.01 ಟಿಎಂಸಿ ಅಡಿಗಳಷ್ಟು ನೀರಿದೆ ಎಂದು ಕೆಬಿಜೆಎನ್ಎಲ್ ಮೂಲಗಳು ಹೇಳಿವೆ.</p>.<p><strong>ಪ್ರವಾಸಿಗರ ದಂಡು:</strong></p>.<p>ಕ್ರಸ್ಟ್ ಗೇಟ್ಗಳ ಮೂಲಕ ಅಪಾರ ಪ್ರಮಾಣದಲ್ಲಿ ನೀರನ್ನು ಕೃಷ್ಣಾ ನದಿಗೆ ಹರಿಬಿಡುವ ದೃಶ್ಯ ವೀಕ್ಷಿಸಲು ರಜಾ ದಿನವಾದ ಭಾನುವಾರ ಸಹಸ್ರಾರು ಪ್ರವಾಸಿಗರು ತಂಡೋಪ ತಂಡವಾಗಿ ಬಸವಸಾಗರ ಜಲಾಶಯ ಭೇಟಿ ನೀಡಿದರು.</p>.<p>ಕ್ರಸ್ಟ್ಗೇಟ್ಗಳ ಮೂಲಕ ಹೊಮ್ಮುವ ಜಲಧಾರೆ ಸೌಂದರ್ಯ ಕಣ್ತುಂಬಿಕೊಂಡು ಸಂಭ್ರಮಿಸಿದರು.</p>.<p>ಜಲಾಶಯ ಭಾಗದಲ್ಲಿ ಹಲವರು ತಳ್ಳುಗಾಡಿಗಳಲ್ಲಿ ಕುರಕಲು ತಿನಿಸು, ನೀರಿನ ಬಾಟಲ್, ಸ್ವೀಟ್ ಕಾರ್ನ್, ಶೇಂಗಾ ಹಾಗೂ ಭಜಿ ಸೇರಿ ಇತರೆ ತಿನಿಸುಗಳ ವಹಿವಾಟು ಜೋರಾಗಿತ್ತು.</p>.<p>‘ಈ ಸಂದರ್ಭದಲ್ಲಿ ಜಲಾಶಯ ನೋಡಲು ಸಾವಿರಾರು ಜನರು ಬರುತ್ತಾರೆ. ಬಸವಸಾಗರ ಮುಂಭಾಗದಲ್ಲಿ ಆಕರ್ಷಕ ಉದ್ಯಾನ ನಿರ್ಮಿಸಿದರೆ, ಸ್ಥಳೀಯರಿಗೆ ಉದ್ಯೋಗಾವಕಾಶ ಸೃಷ್ಟಿಯ ಜೊತೆಗೆ ಪ್ರವಾಸೋದ್ಯಮಕ್ಕೆ ಬಲ ಸಿಕ್ಕಂತಾಗುತ್ತದೆ’ ಎಂದು ಸ್ಥಳೀಯರೊಬ್ಬರು ಅಭಿಪ್ರಾಯಪಟ್ಟರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>