<p><strong>ಯಾದಗಿರಿ:</strong> ‘ಸಾರ್ವಜನಿಕರ ಮತ್ತು ವ್ಯಾಪಾರಿಗಳ ಬಹುದಿನಗಳ ಬೇಡಿಕೆ ಈಡೇರಿಸುವ ನಿಟ್ಟಿನಲ್ಲಿ ₹ 3 ಕೋಟಿ ವೆಚ್ಚದಲ್ಲಿ 71 ತರಕಾತಿ ಮಳಿಗೆಗಳಿರುವ ಕಟ್ಟಡ ನಿರ್ಮಾಣಕ್ಕೆ ಚಾಲನೆ ನೀಡಲಾಗಿದೆ’ ಎಂದು ಶಾಸಕ ಚನ್ನಾರೆಡ್ಡಿ ಪಾಟೀಲ ತುನ್ನೂರು ಹೇಳಿದರು.</p>.<p>ನಗರದ ಹಳೇ ತರಕಾರಿ ಮಾರುಕಟ್ಟೆಯ ಜಾಗದಲ್ಲಿ ಬುಧವಾರ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಮೈಕ್ರೋ ಯೋಜನೆ ಅಡಿಯ ಲೋಕೊಪಯೋಗಿ ಇಲಾಖೆ ವಿಶೇಷ ಉಪ-ವಿಭಾಗದಿಂದ ನೂತನ ತರಕಾರಿ ಮಾರುಕಟ್ಟೆಯ ನೆಲ ಮಹಡಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.</p>.<p>‘ಸುಸಜ್ಜಿತವಾದ ತರಕಾರಿ ಮಾರುಕಟ್ಟೆ ನಿರ್ಮಾಣ ಆಗಬೇಕು ಎಂಬ ಸ್ಥಳೀಯರ ಬೇಡಿಕೆ ಈಗ ಸಮಯ ಕೂಡಿ ಬಂದಿದೆ. ತರಕಾರಿ ಮಾರುಕಟ್ಟೆ ಕಟ್ಟಡದ ಕಾಮಗಾರಿ ಗುಣಮಟ್ಟದಲ್ಲಿ ನಿಗದಿತ ಅವಧಿಯಲ್ಲಿ ಮುಗಿಸಬೇಕು’ ಎಂದು ಸೂಚಿಸಿದರು. </p>.<p>‘ಕಟ್ಟಡ ನಿರ್ಮಾಣದ ನಂತರ ಸ್ಥಳವನ್ನು ವ್ಯಾಪಾರಿಗಳು ಸ್ವಚ್ಛವಾಗಿ ಇರಿಸಿಕೊಂಡು ಗ್ರಾಹಕರಿಗೆ ಸಹಕರಿಸಬೇಕು. ತರಕಾರಿ ಮಾರುಕಟ್ಟೆ ಸ್ಥಳದಲ್ಲಿ ಪುರುಷ, ಮಹಿಳೆಯರಿಗಾಗಿ ಪ್ರತ್ಯೇಕ ಶೌಚಾಲಯದ ವ್ಯವಸ್ಥೆ ಮಾಡಲಾಗುವುದು. ಜನರಿ ಮಾರುಕಟ್ಟೆಗೆ ಬಂದು ಸುಗಮವಾಗಿ ಓಡಾಡುವ ಹಾಗೂ ವಾಹನ ನಿಲುಗಡೆ ವ್ಯವಸ್ಥೆಯೂ ಮಾಡಬೇಕು’ ಎಂದರು.</p>.<p>ಲೋಕೋಪಯೋಗಿ ಇಲಾಖೆ ಎಇಇ ಕೈಲಾಸ್ ಅವರು ಕಾಮಗಾರಿ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು.</p>.<p>ವೇದಿಕೆಯಲ್ಲಿ ‘ಯುಡಾ’ ಅಧ್ಯಕ್ಷ ಬಾಬುರಾವ ಕಾಡ್ಲೂರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಈಟೆ, ಮುಖಂಡರಾದ ಹಣಮಂತ ನಾಯಕ, ಸುರೇಶ ಮಡ್ಡಿ, ಅಭಿಷೇಕ, ಸ್ಯಾಮ್ಸನ್ ಮಾಳಿಕೇರಿ, ಬಾಬು, ಖಲೀಲ್ ಅಹಮದ್, ಸಾಯಿಬಣ್ಣ ಕೆಂಗೂರಿ, ಶರಣಗೌಡ ಮಾಲಿಪಾಟೀಲ, ಸಲೀಂ ಅಹಮದ ಸೇರಿದಂತೆ ಇತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಾದಗಿರಿ:</strong> ‘ಸಾರ್ವಜನಿಕರ ಮತ್ತು ವ್ಯಾಪಾರಿಗಳ ಬಹುದಿನಗಳ ಬೇಡಿಕೆ ಈಡೇರಿಸುವ ನಿಟ್ಟಿನಲ್ಲಿ ₹ 3 ಕೋಟಿ ವೆಚ್ಚದಲ್ಲಿ 71 ತರಕಾತಿ ಮಳಿಗೆಗಳಿರುವ ಕಟ್ಟಡ ನಿರ್ಮಾಣಕ್ಕೆ ಚಾಲನೆ ನೀಡಲಾಗಿದೆ’ ಎಂದು ಶಾಸಕ ಚನ್ನಾರೆಡ್ಡಿ ಪಾಟೀಲ ತುನ್ನೂರು ಹೇಳಿದರು.</p>.<p>ನಗರದ ಹಳೇ ತರಕಾರಿ ಮಾರುಕಟ್ಟೆಯ ಜಾಗದಲ್ಲಿ ಬುಧವಾರ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಮೈಕ್ರೋ ಯೋಜನೆ ಅಡಿಯ ಲೋಕೊಪಯೋಗಿ ಇಲಾಖೆ ವಿಶೇಷ ಉಪ-ವಿಭಾಗದಿಂದ ನೂತನ ತರಕಾರಿ ಮಾರುಕಟ್ಟೆಯ ನೆಲ ಮಹಡಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.</p>.<p>‘ಸುಸಜ್ಜಿತವಾದ ತರಕಾರಿ ಮಾರುಕಟ್ಟೆ ನಿರ್ಮಾಣ ಆಗಬೇಕು ಎಂಬ ಸ್ಥಳೀಯರ ಬೇಡಿಕೆ ಈಗ ಸಮಯ ಕೂಡಿ ಬಂದಿದೆ. ತರಕಾರಿ ಮಾರುಕಟ್ಟೆ ಕಟ್ಟಡದ ಕಾಮಗಾರಿ ಗುಣಮಟ್ಟದಲ್ಲಿ ನಿಗದಿತ ಅವಧಿಯಲ್ಲಿ ಮುಗಿಸಬೇಕು’ ಎಂದು ಸೂಚಿಸಿದರು. </p>.<p>‘ಕಟ್ಟಡ ನಿರ್ಮಾಣದ ನಂತರ ಸ್ಥಳವನ್ನು ವ್ಯಾಪಾರಿಗಳು ಸ್ವಚ್ಛವಾಗಿ ಇರಿಸಿಕೊಂಡು ಗ್ರಾಹಕರಿಗೆ ಸಹಕರಿಸಬೇಕು. ತರಕಾರಿ ಮಾರುಕಟ್ಟೆ ಸ್ಥಳದಲ್ಲಿ ಪುರುಷ, ಮಹಿಳೆಯರಿಗಾಗಿ ಪ್ರತ್ಯೇಕ ಶೌಚಾಲಯದ ವ್ಯವಸ್ಥೆ ಮಾಡಲಾಗುವುದು. ಜನರಿ ಮಾರುಕಟ್ಟೆಗೆ ಬಂದು ಸುಗಮವಾಗಿ ಓಡಾಡುವ ಹಾಗೂ ವಾಹನ ನಿಲುಗಡೆ ವ್ಯವಸ್ಥೆಯೂ ಮಾಡಬೇಕು’ ಎಂದರು.</p>.<p>ಲೋಕೋಪಯೋಗಿ ಇಲಾಖೆ ಎಇಇ ಕೈಲಾಸ್ ಅವರು ಕಾಮಗಾರಿ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು.</p>.<p>ವೇದಿಕೆಯಲ್ಲಿ ‘ಯುಡಾ’ ಅಧ್ಯಕ್ಷ ಬಾಬುರಾವ ಕಾಡ್ಲೂರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಈಟೆ, ಮುಖಂಡರಾದ ಹಣಮಂತ ನಾಯಕ, ಸುರೇಶ ಮಡ್ಡಿ, ಅಭಿಷೇಕ, ಸ್ಯಾಮ್ಸನ್ ಮಾಳಿಕೇರಿ, ಬಾಬು, ಖಲೀಲ್ ಅಹಮದ್, ಸಾಯಿಬಣ್ಣ ಕೆಂಗೂರಿ, ಶರಣಗೌಡ ಮಾಲಿಪಾಟೀಲ, ಸಲೀಂ ಅಹಮದ ಸೇರಿದಂತೆ ಇತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>