<p><strong>ಯಾದಗಿರಿ:</strong> ನಗರದಲ್ಲಿ ಸೋಮವಾರ ಸುರಿದ ಬಿರುಸಿನ ಮಳೆಗೆ ರಸ್ತೆಯ ಮೇಲೆ ನೀರು ಹರಿದಾಡಿತು.</p>.<p>ನಗರದ ಲಾಲ್ ಬಹದ್ದೂರ್ ಶಾಸ್ತ್ರಿ ವೃತ್ತದ ಸಮೀಪ ಅವೈಜ್ಞಾನಿಕವಾಗಿ ಚರಂಡಿ ನಿರ್ಮಾಣಮಾಡಿದ್ದು, ನೀರು ಹರಿದು ಹೋಗದ ಕಾರಣ ರಸ್ತೆಯ ಮೇಲೆ ಒಂದು ಅಡಿ ನೀರು ನಿಂತಿತು.</p>.<p>ಶಾಸ್ತ್ರಿ ವೃತ್ತದಿಂದ ಎಲ್ಐಸಿ ಕಚೇರಿ, ಹೊಸ ಬಸ್ ನಿಲ್ದಾಣ ಸಮೀಪದ ತನಕ ನೀರು ಹರಿಯಿತು. ಇದರಿಂದ ವಾಹನ ಸವಾರರು ಪರದಾಡುವಂತೆ ಆಯಿತು.</p>.<p>ಬೈಕ್ ಸವಾರರು ನೀರಿನಲ್ಲೇ ಹರಸಾಹಸಪಟ್ಟು ವಾಹನ ಚಲಾಯಿಸಿದರು. ಇನ್ನೂ ಪಾದಚಾರಿಗಳು ನಡೆದುಕೊಂಡು ಹೋಗಲು ನೀರು ಅಡ್ಡಿಯಾಗಿತ್ತು.</p>.<p>ನಂತರ ನಗರಸಭೆ ವತಿಯಿಂದ ಜೆಸಿಬಿ ಮೂಲಕ ನೀರು ಸರಾಗವಾಗಿ ಹರಿಯಲು ದಾರಿ ಮಾಡಿದ ಮೇಲೆ ರಸ್ತೆ ಮೇಲೆ ನೀರು ಕಡಿಮೆಯಾಯಿತು.</p>.<p>ಇನ್ನೂ ನಗರದ ರೈಲ್ವೆ ಸ್ಟೇಷನ್ ರಸ್ತೆಯಲ್ಲೂ ಮಳೆ ನೀರು ನಿಂತು ವಾಹನ ಸವಾರರು ಪರದಾಡುವಂತೆ ಆಗಿತ್ತು. ನಗರದ ವಿವಿಧ ಕಡೆಯೂ ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗಿತ್ತು.</p>.<p><strong>ಬಿರುಸಿನ ಮಳೆ:</strong>ಮಧ್ಯಾಹ್ನ 3.30ಕ್ಕೆ ಆರಂಭವಾಗದ ಬಿರುಸಿನ ಮಳೆ ಸುಮಾರು 20 ನಿಮಿಷ ಎಡೆಬಿಡದೇ ಸುರಿಯಿತು. ಇದರಿಂದ ಬಡಾವಣೆಗಳ ರಸ್ತೆಗಳಲ್ಲೂ ನೀರು ಹರಿಯಿತು.</p>.<p>ಬೆಳಿಗ್ಗೆಯಿಂದಲೂ ಮೋಡ ಕವಿದ ವಾತಾವರಣ ಇತ್ತು. ಮಧ್ಯಾಹ್ನದ ಕೆಲವೊತ್ತು ಬಿಸಿಲಿನ ವಾತಾವರಣ ಇತ್ತು.</p>.<p>ಜಿಲ್ಲೆಯ ವಿವಿಧೆಡೆಯೂ ಉತ್ತಮವಾಗಿ ಮಳೆಯಾಗಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಯಾದಗಿರಿ:</strong> ನಗರದಲ್ಲಿ ಸೋಮವಾರ ಸುರಿದ ಬಿರುಸಿನ ಮಳೆಗೆ ರಸ್ತೆಯ ಮೇಲೆ ನೀರು ಹರಿದಾಡಿತು.</p>.<p>ನಗರದ ಲಾಲ್ ಬಹದ್ದೂರ್ ಶಾಸ್ತ್ರಿ ವೃತ್ತದ ಸಮೀಪ ಅವೈಜ್ಞಾನಿಕವಾಗಿ ಚರಂಡಿ ನಿರ್ಮಾಣಮಾಡಿದ್ದು, ನೀರು ಹರಿದು ಹೋಗದ ಕಾರಣ ರಸ್ತೆಯ ಮೇಲೆ ಒಂದು ಅಡಿ ನೀರು ನಿಂತಿತು.</p>.<p>ಶಾಸ್ತ್ರಿ ವೃತ್ತದಿಂದ ಎಲ್ಐಸಿ ಕಚೇರಿ, ಹೊಸ ಬಸ್ ನಿಲ್ದಾಣ ಸಮೀಪದ ತನಕ ನೀರು ಹರಿಯಿತು. ಇದರಿಂದ ವಾಹನ ಸವಾರರು ಪರದಾಡುವಂತೆ ಆಯಿತು.</p>.<p>ಬೈಕ್ ಸವಾರರು ನೀರಿನಲ್ಲೇ ಹರಸಾಹಸಪಟ್ಟು ವಾಹನ ಚಲಾಯಿಸಿದರು. ಇನ್ನೂ ಪಾದಚಾರಿಗಳು ನಡೆದುಕೊಂಡು ಹೋಗಲು ನೀರು ಅಡ್ಡಿಯಾಗಿತ್ತು.</p>.<p>ನಂತರ ನಗರಸಭೆ ವತಿಯಿಂದ ಜೆಸಿಬಿ ಮೂಲಕ ನೀರು ಸರಾಗವಾಗಿ ಹರಿಯಲು ದಾರಿ ಮಾಡಿದ ಮೇಲೆ ರಸ್ತೆ ಮೇಲೆ ನೀರು ಕಡಿಮೆಯಾಯಿತು.</p>.<p>ಇನ್ನೂ ನಗರದ ರೈಲ್ವೆ ಸ್ಟೇಷನ್ ರಸ್ತೆಯಲ್ಲೂ ಮಳೆ ನೀರು ನಿಂತು ವಾಹನ ಸವಾರರು ಪರದಾಡುವಂತೆ ಆಗಿತ್ತು. ನಗರದ ವಿವಿಧ ಕಡೆಯೂ ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗಿತ್ತು.</p>.<p><strong>ಬಿರುಸಿನ ಮಳೆ:</strong>ಮಧ್ಯಾಹ್ನ 3.30ಕ್ಕೆ ಆರಂಭವಾಗದ ಬಿರುಸಿನ ಮಳೆ ಸುಮಾರು 20 ನಿಮಿಷ ಎಡೆಬಿಡದೇ ಸುರಿಯಿತು. ಇದರಿಂದ ಬಡಾವಣೆಗಳ ರಸ್ತೆಗಳಲ್ಲೂ ನೀರು ಹರಿಯಿತು.</p>.<p>ಬೆಳಿಗ್ಗೆಯಿಂದಲೂ ಮೋಡ ಕವಿದ ವಾತಾವರಣ ಇತ್ತು. ಮಧ್ಯಾಹ್ನದ ಕೆಲವೊತ್ತು ಬಿಸಿಲಿನ ವಾತಾವರಣ ಇತ್ತು.</p>.<p>ಜಿಲ್ಲೆಯ ವಿವಿಧೆಡೆಯೂ ಉತ್ತಮವಾಗಿ ಮಳೆಯಾಗಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>