<p><strong>ಯಾದಗಿರಿ:</strong> ಶಹಾಪುರ ತಾಲ್ಲೂಕಿನ ಚಾಮನಾಳ ತಾಂಡಾದ ಮಹಿಳೆಯೊಬ್ಬರ ಕೂದಲು ಕತ್ತರಿಸಿ, ತಲೆಗೆ ಸುಣ್ಣ ಹಚ್ಚಿ, ಖಾರದ ಪುಡಿ ಹಾಕಿ ಅಮಾನುಷವಾಗಿ ವರ್ತಿಸಿದ್ದು, ಕೆಂಭಾವಿ ಠಾಣೆ ಪೊಲೀಸರು ಈ ಕುರಿತು ಇಬ್ಬರನ್ನು ಬಂಧಿಸಿದ್ದಾರೆ.</p>.<p>11ಕ್ಕೂ ಹೆಚ್ಚು ಮಂದಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಗಂಗಾಬಾಯಿ ಶಂಕರ ಚಿನ್ನಾರಾಠೋಡ ಸಂತ್ರಸ್ತೆ. ಕಸ್ತೂರಿಬಾಯಿ ಡಾಕಪ್ಪ ಮತ್ತು ಡಾಕಪ್ಪ ಚಿನ್ನಾರಾಠೋಡ ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ವಿಜಯಕುಮಾರ ಕಿಶನ್ ರಾಠೋಡ (ರೌಡಿ ಶೀಟರ್) ಮತ್ತು ಇತರೆ ಹತ್ತು ಮಂದಿ ಆರೋಪಿಗಳು ತಮ್ಮ ಮೊಬೈಲ್ ಫೋನ್ಗಳನ್ನು ಸ್ವಿಚ್ಡ್ ಆಫ್ ಮಾಡಿದ್ದು, ಮುಂಬೈ, ಪುಣೆಯಲ್ಲಿ ತಲೆ ಮರೆಸಿಕೊಂಡಿರುವ ಶಂಕೆ ಇದೆ ಎಂದು ಮಾಹಿತಿ ನೀಡಿದರು.</p>.<p>ಆರೋಗ್ಯ ಸಮಸ್ಯೆಯಿಂದಾಗಿ ಮಹಿಳೆ ಆಗಾಗ್ಗೆ ಚಿಕ್ಕಮ್ಮನ ಮನೆಗೆ, ಅಳಿಯ ಅನಿಲ್ ರಾಮು ರಾಠೋಡ ಕರೆದುಕೊಂಡು ಹೋಗುತ್ತಿದ್ದರು. ‘ಅಳಿಯನ ಜೊತೆಗೆ ಸಂಬಂಧ ಇಟ್ಟುಕೊಂಡು ಓಡಿ ಹೋಗಿ ಮರ್ಯಾದೆ ತೆಗೆದಿದ್ದೀಯಾ’ ಎಂದು ನಿಂದಿಸಿ ಹಲ್ಲೆ ಮಾಡಿದ್ದರು ಎಂದು ದೂರು ನೀಡಲಾಗಿದೆ. </p>.<p>ತಿಪ್ಪಣ್ಣ ಎಂಬವರು ಮಹಿಳೆಗೆ ಒದ್ದು ನೆಲಕ್ಕೆ ಕೆಡವಿದರು. ಅನುಶಾಬಾಯಿ ತಲೆ ಕೂದಲು ಹಿಡಿದರೆ, ರೂಪ್ಲಿಬಾಯಿ ಅವರು ಕತ್ತರಿಯಿಂದ ಕತ್ತರಿಸಿದರು. ಚಾವಳಿ ಬಾಯಿ ಮತ್ತು ದೇವಿಬಾಯಿ ಅವರು ತಲೆಗೆ ಸುಣ್ಣ ಹಚ್ಚಿದರು. ಆ ಬಳಿಕ ತಿಪ್ಪಿಬಾಯಿ ಅವರು ಖಾರದ ಪುಡಿಯನ್ನು ಸಂತ್ರಸ್ತೆ ಮೈಮೇಲೆ ಹಾಕಿದರು. ವಿಜಯಕುಮಾರ ಸೇರಿ ಉಳಿದವರು ಮಹಿಳೆಗೆ ಜೀವ ಬೆದರಿಕೆ ಹಾಕಿದ್ದಾರೆ ಎಂದು ದೂರು ನೀಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<div><blockquote>ಮಹಿಳೆ ಮೇಲೆ ಹಲ್ಲೆ ಮಾಡಿ ಕೂದಲು ಕತ್ತರಿಸಿ ಜೀವ ಬೆದರಿಕೆ ಹಾಕಿದ್ದು ಗಮನಕ್ಕೆ ಬರುತ್ತಿದ್ದಂತೆ ನಾವೇ ಸಂತ್ರಸ್ತೆಯ ಹೇಳಿಕೆ ಪಡೆದು ಪ್ರಕರಣ ದಾಖಲಿಸಿಕೊಂಡು ಕೆಲ ಆರೋಪಿಗಳನ್ನು ಬಂಧಿಸಿದ್ದೇವೆ </blockquote><span class="attribution">ಪೃಥ್ವಿಕ್ ಶಂಕರ್ ಯಾದಗಿರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಾದಗಿರಿ:</strong> ಶಹಾಪುರ ತಾಲ್ಲೂಕಿನ ಚಾಮನಾಳ ತಾಂಡಾದ ಮಹಿಳೆಯೊಬ್ಬರ ಕೂದಲು ಕತ್ತರಿಸಿ, ತಲೆಗೆ ಸುಣ್ಣ ಹಚ್ಚಿ, ಖಾರದ ಪುಡಿ ಹಾಕಿ ಅಮಾನುಷವಾಗಿ ವರ್ತಿಸಿದ್ದು, ಕೆಂಭಾವಿ ಠಾಣೆ ಪೊಲೀಸರು ಈ ಕುರಿತು ಇಬ್ಬರನ್ನು ಬಂಧಿಸಿದ್ದಾರೆ.</p>.<p>11ಕ್ಕೂ ಹೆಚ್ಚು ಮಂದಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಗಂಗಾಬಾಯಿ ಶಂಕರ ಚಿನ್ನಾರಾಠೋಡ ಸಂತ್ರಸ್ತೆ. ಕಸ್ತೂರಿಬಾಯಿ ಡಾಕಪ್ಪ ಮತ್ತು ಡಾಕಪ್ಪ ಚಿನ್ನಾರಾಠೋಡ ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ವಿಜಯಕುಮಾರ ಕಿಶನ್ ರಾಠೋಡ (ರೌಡಿ ಶೀಟರ್) ಮತ್ತು ಇತರೆ ಹತ್ತು ಮಂದಿ ಆರೋಪಿಗಳು ತಮ್ಮ ಮೊಬೈಲ್ ಫೋನ್ಗಳನ್ನು ಸ್ವಿಚ್ಡ್ ಆಫ್ ಮಾಡಿದ್ದು, ಮುಂಬೈ, ಪುಣೆಯಲ್ಲಿ ತಲೆ ಮರೆಸಿಕೊಂಡಿರುವ ಶಂಕೆ ಇದೆ ಎಂದು ಮಾಹಿತಿ ನೀಡಿದರು.</p>.<p>ಆರೋಗ್ಯ ಸಮಸ್ಯೆಯಿಂದಾಗಿ ಮಹಿಳೆ ಆಗಾಗ್ಗೆ ಚಿಕ್ಕಮ್ಮನ ಮನೆಗೆ, ಅಳಿಯ ಅನಿಲ್ ರಾಮು ರಾಠೋಡ ಕರೆದುಕೊಂಡು ಹೋಗುತ್ತಿದ್ದರು. ‘ಅಳಿಯನ ಜೊತೆಗೆ ಸಂಬಂಧ ಇಟ್ಟುಕೊಂಡು ಓಡಿ ಹೋಗಿ ಮರ್ಯಾದೆ ತೆಗೆದಿದ್ದೀಯಾ’ ಎಂದು ನಿಂದಿಸಿ ಹಲ್ಲೆ ಮಾಡಿದ್ದರು ಎಂದು ದೂರು ನೀಡಲಾಗಿದೆ. </p>.<p>ತಿಪ್ಪಣ್ಣ ಎಂಬವರು ಮಹಿಳೆಗೆ ಒದ್ದು ನೆಲಕ್ಕೆ ಕೆಡವಿದರು. ಅನುಶಾಬಾಯಿ ತಲೆ ಕೂದಲು ಹಿಡಿದರೆ, ರೂಪ್ಲಿಬಾಯಿ ಅವರು ಕತ್ತರಿಯಿಂದ ಕತ್ತರಿಸಿದರು. ಚಾವಳಿ ಬಾಯಿ ಮತ್ತು ದೇವಿಬಾಯಿ ಅವರು ತಲೆಗೆ ಸುಣ್ಣ ಹಚ್ಚಿದರು. ಆ ಬಳಿಕ ತಿಪ್ಪಿಬಾಯಿ ಅವರು ಖಾರದ ಪುಡಿಯನ್ನು ಸಂತ್ರಸ್ತೆ ಮೈಮೇಲೆ ಹಾಕಿದರು. ವಿಜಯಕುಮಾರ ಸೇರಿ ಉಳಿದವರು ಮಹಿಳೆಗೆ ಜೀವ ಬೆದರಿಕೆ ಹಾಕಿದ್ದಾರೆ ಎಂದು ದೂರು ನೀಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<div><blockquote>ಮಹಿಳೆ ಮೇಲೆ ಹಲ್ಲೆ ಮಾಡಿ ಕೂದಲು ಕತ್ತರಿಸಿ ಜೀವ ಬೆದರಿಕೆ ಹಾಕಿದ್ದು ಗಮನಕ್ಕೆ ಬರುತ್ತಿದ್ದಂತೆ ನಾವೇ ಸಂತ್ರಸ್ತೆಯ ಹೇಳಿಕೆ ಪಡೆದು ಪ್ರಕರಣ ದಾಖಲಿಸಿಕೊಂಡು ಕೆಲ ಆರೋಪಿಗಳನ್ನು ಬಂಧಿಸಿದ್ದೇವೆ </blockquote><span class="attribution">ಪೃಥ್ವಿಕ್ ಶಂಕರ್ ಯಾದಗಿರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>