ಯಾದಗಿರಿ: ಗುರುಮಠಕಲ್ ಕ್ಷೇತ್ರದ ಕೆರೆ ತುಂಬುವ ಯೋಜನೆ ನನ್ನ ಕನಸಿನ ಕೂಸಾಗಿದ್ದು, ಈಗಾಗಲೇ ಜಾರಿಯಾಗಿರುವ ಈ ಯೋಜನೆಯನ್ನು ತಾವೇ ಜಾರಿಗೊಳಿಸಿರುವುದಾಗಿ ಹೇಳುತ್ತಿರುವ ನಿಜಶರಣ ಅಂಬಿಗರ ಚೌಡಯ್ಯ ನಿಗಮದ ಅಧ್ಯಕ್ಷ ಬಾಬುರಾವ ಚಿಂಚನಸೂರ್ ಹೇಳುತ್ತಿರುವುದು ಬಾಲಿಶತನದಿಂದ ಕೂಡಿದೆ ಎಂದು ಬಿಜೆಪಿ ಮುಖಂಡ ಹಾಗೂ ಗುರುಮಠಕಲ್ ಶಾಶ್ವತ ನೀರಾವರಿ ಹೋರಾಟ ಸಮಿತಿ ಅಧ್ಯಕ್ಷ ಸಾಯಿಬಣ್ಣ ಬೋರಬಂಡಾ ಟೀಕಿಸಿದ್ದಾರೆ.