ಯಾದಗಿರಿ ನಗರದ ಎಪಿಎಂಸಿ ಆವರಣದಲ್ಲಿ ಬಿತ್ತನೆ ಬೀಜಕ್ಕಾಗಿ ಹಣ ಪಾವತಿಸುತ್ತಿರುವ ರೈತರು
ಪ್ರಜಾವಾಣಿ ಚಿತ್ರ/ ರಾಜಕುಮಾರ ನಳ್ಳಿಕರ
ಈಗಾಗಲೇ ಹಿಂಗಾರು ಹಂಗಾಮಿನ ಬಿತ್ತನೆ ಬೀಜ ವಿತರಣೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಯಾದಗಿರಿ ರೈತ ಸಂಪರ್ಕ ಕೇಂದ್ರದಲ್ಲಿ ರೈತರಿಗೆ ಸಮಸ್ಯೆಯಾಗುತ್ತಿದ್ದರೆ ಈ ಕುರಿತು ಪರಿಶೀಲಿಸಲಾಗುವುದು
ಮುತ್ತುರಾಜ ಜಂಟಿ ಕೃಷಿ ನಿರ್ದೇಶಕ
ಯಾದಗಿರಿ ರೈತ ಸಂಪರ್ಕ ಕೇಂದ್ರದಲ್ಲಿ ಬಿತ್ತನೆ ಬೀಜ ಯಂತ್ರೋಪಕರಣ ವಿತರಣೆಗೆ ಸ್ಥಳಾವಕಾಶದ ಕೊರತೆಯಿಂದ ಟೋಕನ್ ಒಂದು ಕಡೆ ಕೊಡುತ್ತಾರೆ. ಮತ್ತೊಂದು ಕಡೆ ಬಿತ್ತನೆ ಬೀಜ ವಿತರಣೆ ಮಾಡಲಾಗುತ್ತಿದೆ. ಮುಂದಿನ ಬಾರಿ ಒಂದೇ ಕಡೆ ವಿತರಣೆಗೆ ಸೂಕ್ತ ಕ್ರಮಕೈಗೊಳ್ಳಲಾಗುವುದು
ಶ್ವೇತಾ ತಾಳೆಮರದ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕಿ ಯಾದಗಿರಿ
ರೈತರ ಬೇಡಿಕೆಗೆ ತಕ್ಕಂತೆ ಬಿತ್ತನೆ ಬೀಜ ವಿತರಣೆ ಮಾಡುತ್ತಿಲ್ಲ. ಇದರಿಂದ ಸಮಸ್ಯೆಯಾಗುತ್ತಿದೆ. ಮೊದಲು ಒಂದು ಕ್ವಿಂಟಲ್ ವಿತರಿಸುತ್ತಿದ್ದರು. ಈಗ ಬಂದಷ್ಟೆ ಕೊಡುತ್ತೇವೆ ಎನ್ನುತ್ತಾರೆ
ನಿಲೇಶ ಮುಂಡರಗಿ ರೈತ
ಶೇಂಗಾ ಬಿತ್ತನೆ ಬೀಜ ಖರೀದಿಗಾಗಿ ಬಂದಿದ್ದೇವೆ. ಆದರೆ ರೈತ ಸಂಪರ್ಕ ಕೇಂದ್ರದಲ್ಲಿ ಚೀಟಿ ಕೊಡುತ್ತಾರೆ. ಎಪಿಎಂಸಿಯಲ್ಲಿ ಬೀಜ ಕೊಡುತ್ತಿದ್ದಾರೆ. ಕೆಲವರಿಗೆ ಸಮಸ್ಯೆಯಾಗುತ್ತಿದೆ