<p><strong>ಯಾದಗಿರಿ: </strong>ನಗರದ ಹೊಸ ಜಿಲ್ಲಾಸ್ಪತ್ರೆ ಸೇರಿದಂತೆ ಜಿಲ್ಲೆಯ ಐದು ಕಡೆ ಕೋ–ವ್ಯಾಕ್ಸಿನ್ ಲಸಿಕೆಗೆ ಚಾಲನೆ ನೀಡಲಾಯಿತು.</p>.<p>ಶಹಾಪುರ ತಾಲ್ಲೂಕು ಆಸ್ಪತ್ರೆ, ಸುರಪುರ ತಾಲ್ಲೂಕು ಆಸ್ಪತ್ರೆ ಮತ್ತು ನಗರ ಆರೋಗ್ಯ ಕೇಂದ್ರ, ಯರಗೋಳ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.</p>.<p>ನಗರದ ನೂತನ ಜಿಲ್ಲಾಸ್ಪತ್ರೆಯ ಲಸಿಕೆ ಕೇಂದ್ರದಲ್ಲಿ ಸ್ಥಳೀಯ ಶಾಸಕ ವೆಂಕಟರೆಡ್ಡಿ ಮುದ್ನಾಳ ಚಾಲನೆ ನೀಡಿದರು.</p>.<p>ಜಿಲ್ಲಾಸ್ಪತ್ರೆ ಸಹಾಯಕ ದರ್ಜೆ–2 ನೌಕರ ಅಶೋಕ ಅಗ್ನಿ ಮೊದಲ ಲಸಿಕೆ ಪಡೆದರು. ಅರ್ಧ ಗಂಟೆ ಕಾಲ ಚಿಕಿತ್ಸೆ ಪಡೆದವರನ್ನು ನಿಗಾವಹಿಸಲಾಗಿತ್ತು. ಸದ್ಯಕ್ಕೆ ಲಸಿಕೆ ಪಡೆದ ಫಲಾನುಭವಿಗಳಿಗೆ ಯಾವುದೇ ಸಮಸ್ಯೆಯಾಗಿಲ್ಲ.</p>.<p>ಮೊದಲ ಲಸಿಕೆ ಪಡೆದ ಅಶೋಕ ಅಗ್ನಿ ‘ಪ್ರಜಾವಾಣಿ’ ಜೊತೆ ಮಾತನಾಡಿ, ‘ಕೊರೊನಾ ವಾರಿಯರ್ ಆಗಿ ಕೆಲಸ ಮಾಡಿದ್ದೇನೆ. ಈಗ ಮೊದಲ ಲಸಿಕೆ ಪಡೆದಿದ್ದು, ಖುಷಿಯಾಗಿದೆ. ಯಾರೂ ಈ ಬಗ್ಗೆ ಭಯಪಡಬಾರದು’ ಎಂದು ಪ್ರತಿಕ್ರಿಯಿಸಿದರು.</p>.<p>ಜಿಲ್ಲಾಧಿಕಾರಿ ಡಾ.ರಾಗಾಪ್ರಿಯಾ, ಜಿಲ್ಲಾ ಪಂಚಾಯಿತಿ ಸಿಇಒ ಶಿಲ್ಪಾ ಶರ್ಮಾ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಸಂಜೀವಕುಮಾರ ರಾಯಚೂರಕರ್, ಡಾ.ನೀಲಮ್ಮ ರೆಡ್ಡಿ ಸೇರಿದಂತೆ ಆರೋಗ್ಯ ಇಲಾಖೆ ಸಿಬ್ಬಂದಿ ಇದ್ದರು.</p>.<p><strong>2 ಗಂಟೆ ತನಕ ಲಸಿಕೆ ಪಡೆದವರು<br />ನೂತನ ಜಿಲ್ಲಾಸ್ಪತ್ರೆ:</strong>15<br /><strong>ಪಿಎಚ್ಸಿ ಯರಗೋಳ: </strong>24<br /><strong>ಶಹಾಪುರ ತಾಲ್ಲೂಕು ಆಸ್ಪತ್ರೆ: </strong>50<br /><strong>ಸುರಪುರ ನಗರ ಆರೋಗ್ಯ ಕೇಂದ್ರ:</strong>21<br /><strong>ಸುರಪುರ ತಾಲ್ಲೂಕು ಆಸ್ಪತ್ರೆ:</strong>26<br /><strong>ಒಟ್ಟು:</strong>136</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಾದಗಿರಿ: </strong>ನಗರದ ಹೊಸ ಜಿಲ್ಲಾಸ್ಪತ್ರೆ ಸೇರಿದಂತೆ ಜಿಲ್ಲೆಯ ಐದು ಕಡೆ ಕೋ–ವ್ಯಾಕ್ಸಿನ್ ಲಸಿಕೆಗೆ ಚಾಲನೆ ನೀಡಲಾಯಿತು.</p>.<p>ಶಹಾಪುರ ತಾಲ್ಲೂಕು ಆಸ್ಪತ್ರೆ, ಸುರಪುರ ತಾಲ್ಲೂಕು ಆಸ್ಪತ್ರೆ ಮತ್ತು ನಗರ ಆರೋಗ್ಯ ಕೇಂದ್ರ, ಯರಗೋಳ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.</p>.<p>ನಗರದ ನೂತನ ಜಿಲ್ಲಾಸ್ಪತ್ರೆಯ ಲಸಿಕೆ ಕೇಂದ್ರದಲ್ಲಿ ಸ್ಥಳೀಯ ಶಾಸಕ ವೆಂಕಟರೆಡ್ಡಿ ಮುದ್ನಾಳ ಚಾಲನೆ ನೀಡಿದರು.</p>.<p>ಜಿಲ್ಲಾಸ್ಪತ್ರೆ ಸಹಾಯಕ ದರ್ಜೆ–2 ನೌಕರ ಅಶೋಕ ಅಗ್ನಿ ಮೊದಲ ಲಸಿಕೆ ಪಡೆದರು. ಅರ್ಧ ಗಂಟೆ ಕಾಲ ಚಿಕಿತ್ಸೆ ಪಡೆದವರನ್ನು ನಿಗಾವಹಿಸಲಾಗಿತ್ತು. ಸದ್ಯಕ್ಕೆ ಲಸಿಕೆ ಪಡೆದ ಫಲಾನುಭವಿಗಳಿಗೆ ಯಾವುದೇ ಸಮಸ್ಯೆಯಾಗಿಲ್ಲ.</p>.<p>ಮೊದಲ ಲಸಿಕೆ ಪಡೆದ ಅಶೋಕ ಅಗ್ನಿ ‘ಪ್ರಜಾವಾಣಿ’ ಜೊತೆ ಮಾತನಾಡಿ, ‘ಕೊರೊನಾ ವಾರಿಯರ್ ಆಗಿ ಕೆಲಸ ಮಾಡಿದ್ದೇನೆ. ಈಗ ಮೊದಲ ಲಸಿಕೆ ಪಡೆದಿದ್ದು, ಖುಷಿಯಾಗಿದೆ. ಯಾರೂ ಈ ಬಗ್ಗೆ ಭಯಪಡಬಾರದು’ ಎಂದು ಪ್ರತಿಕ್ರಿಯಿಸಿದರು.</p>.<p>ಜಿಲ್ಲಾಧಿಕಾರಿ ಡಾ.ರಾಗಾಪ್ರಿಯಾ, ಜಿಲ್ಲಾ ಪಂಚಾಯಿತಿ ಸಿಇಒ ಶಿಲ್ಪಾ ಶರ್ಮಾ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಸಂಜೀವಕುಮಾರ ರಾಯಚೂರಕರ್, ಡಾ.ನೀಲಮ್ಮ ರೆಡ್ಡಿ ಸೇರಿದಂತೆ ಆರೋಗ್ಯ ಇಲಾಖೆ ಸಿಬ್ಬಂದಿ ಇದ್ದರು.</p>.<p><strong>2 ಗಂಟೆ ತನಕ ಲಸಿಕೆ ಪಡೆದವರು<br />ನೂತನ ಜಿಲ್ಲಾಸ್ಪತ್ರೆ:</strong>15<br /><strong>ಪಿಎಚ್ಸಿ ಯರಗೋಳ: </strong>24<br /><strong>ಶಹಾಪುರ ತಾಲ್ಲೂಕು ಆಸ್ಪತ್ರೆ: </strong>50<br /><strong>ಸುರಪುರ ನಗರ ಆರೋಗ್ಯ ಕೇಂದ್ರ:</strong>21<br /><strong>ಸುರಪುರ ತಾಲ್ಲೂಕು ಆಸ್ಪತ್ರೆ:</strong>26<br /><strong>ಒಟ್ಟು:</strong>136</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>