<p><strong>ಯಾದಗಿರಿ</strong>: ಸುರಪುರ, ಶಹಾಪುರ ತಾಲ್ಲೂಕಿನ ವ್ಯಾಪ್ತಿಯಲ್ಲಿ ಅನಧಿಕೃತ ಹಾಗೂ ಅಧಿಕ ಭಾರದ ಮರಳು ಸಾಗಣಿ ಮಾಡುತ್ತಿದ್ದ 7 ವಾಹನಗಳನ್ನು ವಶಕ್ಕೆ ಪಡೆದ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಗಣಿ ಮತ್ತು ಭೂವಿಜ್ಞಾನ ಇಲಾಖೆ ಹಿರಿಯ ಭೂವಿಜ್ಞಾನಿ ವೀರೇಶ ಶಾಂತಪ್ಪ ತಿಳಿಸಿದ್ದಾರೆ. </p>.<p>ಜಿಲ್ಲಾ ಮರಳು ನಿಯಂತ್ರಣಾ ಸಮಿತಿ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಹರ್ಷಲ್ ಭೋಯರ್ ಸೂಚನೆಯಂತೆ ದಾಳಿ ಮಾಡಲಾಗುತ್ತಿದೆ. ಸುರಪುರ, ಶಹಾಪುರ ತಾಲ್ಲೂಕು ವ್ಯಾಪ್ತಿಯಲ್ಲಿ ಅನಧಿಕೃತ, ಅಧಿಕ ಭಾರದ ಮರಳು ಸಾಗಣೆ ಬಗ್ಗೆ ಸಾಕಷ್ಟು ದೂರು ಬಂದಿದ್ದವು ಎಂದು ಪ್ರಕಟಣೆಯಲ್ಲಿ ಹೇಳಿದ್ದಾರೆ.</p>.<p>ಕಂದಾಯ ಇಲಾಖೆ, ಗಣಿ ಮತ್ತು ಭೂವಿಜ್ಞಾನ ಇಲಾಖೆ, ಸಾರಿಗೆ ಇಲಾಖೆ ಹಾಗೂ ಪೊಲೀಸ್ ಇಲಾಖೆ ಜಂಟಿಯಾಗಿ ಕಾರ್ಯಾಚರಣೆ ನಡೆಸಿವೆ. ಅನಧಿಕೃತ, ಅಧಿಕ ಭಾರದ ಮರಳು ಸಾಗಾಣಿಕೆ ವಾಹನಗಳನ್ನು ಪರಿಶೀಲಿಸಲು, ರಾತ್ರಿ ಗಸ್ತು ಕಾರ್ಯ ಕೈಗೊಂಡು 7 ಮರಳು ತುಂಬಿದ ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ. ₹ 2.78 ಲಕ್ಷ ದಂಡ ವಿಧಿಸಿ, ಭಾಗಿಯಾಗಿರುವ ವಾಹನಗಳ ನೋಂದಣಿ ರದ್ದುಪಡಿಸಲು ಕ್ರಮ ಕೈಗೊಳ್ಳುವಂತೆ ಸಾರಿಗೆ ಇಲಾಖೆ ಸೂಚಿಸಲಾಗಿದೆ ಎಂದಿದ್ದಾರೆ. </p>.<p>ಜಿಲ್ಲೆಯಲ್ಲಿ ಅನಧಿಕೃತ, ಅಧಿಕ ಭಾರದ ಮರಳು, ಇತರೆ ಉಪಖನಿಜಗಳ ಸಾಗಾಣಿಕೆಯನ್ನು ತಡೆಗಟ್ಟಿ ಕ್ರಮ ಕೈಗೊಳ್ಳಲು ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಮರಳು ಸಮಿತಿ ಸದಸ್ಯರನ್ನೊಳಗೊಂಡ ತಂಡಗಳನ್ನು ರಚಿಸಲಾಗಿದೆ. ವಾಹನಗಳನ್ನು ಪರಿಶೀಲಿಸಿ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಾದಗಿರಿ</strong>: ಸುರಪುರ, ಶಹಾಪುರ ತಾಲ್ಲೂಕಿನ ವ್ಯಾಪ್ತಿಯಲ್ಲಿ ಅನಧಿಕೃತ ಹಾಗೂ ಅಧಿಕ ಭಾರದ ಮರಳು ಸಾಗಣಿ ಮಾಡುತ್ತಿದ್ದ 7 ವಾಹನಗಳನ್ನು ವಶಕ್ಕೆ ಪಡೆದ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಗಣಿ ಮತ್ತು ಭೂವಿಜ್ಞಾನ ಇಲಾಖೆ ಹಿರಿಯ ಭೂವಿಜ್ಞಾನಿ ವೀರೇಶ ಶಾಂತಪ್ಪ ತಿಳಿಸಿದ್ದಾರೆ. </p>.<p>ಜಿಲ್ಲಾ ಮರಳು ನಿಯಂತ್ರಣಾ ಸಮಿತಿ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಹರ್ಷಲ್ ಭೋಯರ್ ಸೂಚನೆಯಂತೆ ದಾಳಿ ಮಾಡಲಾಗುತ್ತಿದೆ. ಸುರಪುರ, ಶಹಾಪುರ ತಾಲ್ಲೂಕು ವ್ಯಾಪ್ತಿಯಲ್ಲಿ ಅನಧಿಕೃತ, ಅಧಿಕ ಭಾರದ ಮರಳು ಸಾಗಣೆ ಬಗ್ಗೆ ಸಾಕಷ್ಟು ದೂರು ಬಂದಿದ್ದವು ಎಂದು ಪ್ರಕಟಣೆಯಲ್ಲಿ ಹೇಳಿದ್ದಾರೆ.</p>.<p>ಕಂದಾಯ ಇಲಾಖೆ, ಗಣಿ ಮತ್ತು ಭೂವಿಜ್ಞಾನ ಇಲಾಖೆ, ಸಾರಿಗೆ ಇಲಾಖೆ ಹಾಗೂ ಪೊಲೀಸ್ ಇಲಾಖೆ ಜಂಟಿಯಾಗಿ ಕಾರ್ಯಾಚರಣೆ ನಡೆಸಿವೆ. ಅನಧಿಕೃತ, ಅಧಿಕ ಭಾರದ ಮರಳು ಸಾಗಾಣಿಕೆ ವಾಹನಗಳನ್ನು ಪರಿಶೀಲಿಸಲು, ರಾತ್ರಿ ಗಸ್ತು ಕಾರ್ಯ ಕೈಗೊಂಡು 7 ಮರಳು ತುಂಬಿದ ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ. ₹ 2.78 ಲಕ್ಷ ದಂಡ ವಿಧಿಸಿ, ಭಾಗಿಯಾಗಿರುವ ವಾಹನಗಳ ನೋಂದಣಿ ರದ್ದುಪಡಿಸಲು ಕ್ರಮ ಕೈಗೊಳ್ಳುವಂತೆ ಸಾರಿಗೆ ಇಲಾಖೆ ಸೂಚಿಸಲಾಗಿದೆ ಎಂದಿದ್ದಾರೆ. </p>.<p>ಜಿಲ್ಲೆಯಲ್ಲಿ ಅನಧಿಕೃತ, ಅಧಿಕ ಭಾರದ ಮರಳು, ಇತರೆ ಉಪಖನಿಜಗಳ ಸಾಗಾಣಿಕೆಯನ್ನು ತಡೆಗಟ್ಟಿ ಕ್ರಮ ಕೈಗೊಳ್ಳಲು ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಮರಳು ಸಮಿತಿ ಸದಸ್ಯರನ್ನೊಳಗೊಂಡ ತಂಡಗಳನ್ನು ರಚಿಸಲಾಗಿದೆ. ವಾಹನಗಳನ್ನು ಪರಿಶೀಲಿಸಿ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>