ಕಲ್ಯಾಣ ಕರ್ನಾಟಕದ ಪ್ರಸಿದ್ಧ, ಯಾದಗಿರಿ ತಾಲ್ಲೂಕಿನ ಐತಿಹಾಸಿಕ ಮೈಲಾಪುರದ ಮೈಲಾರಲಿಂಗೇಶ್ವರ ಜಾತ್ರೆ ಮಕರ ಸಂಕ್ರಮಣದ ಅಂಗವಾಗಿ ಭಾನುವಾರ ಅದ್ಧೂರಿಯಾಗಿ ನಡೆಯಿತು. ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣ ಹಾಗೂ ಮಹಾರಾಷ್ಟ್ರದಿಂದ ಭಾನುವಾರ ಬೆಳಿಗ್ಗೆಯಿಂದಲೇ ಆಗಮಿಸಿದ ಭಕ್ತರು ಹೊನ್ನಕೆರೆಯಲ್ಲಿ ಪುಣ್ಯ ಸ್ನಾನ ಮಾಡಿ, ಸರದಿಯಲ್ಲಿ ಗಂಟೆಗಳ ಕಾಲ ನಿಂತು, ಮೈಲಾರಲಿಂಗೇಶ್ವರನ ದರ್ಶನ ಪಡೆದರು.