<p><strong>ಯಾದಗಿರಿ:</strong> ಅಪಘಾತ ಪ್ರಕರಣವೊಂದರ ಬೈಕ್ ಬಿಟ್ಟುಕೊಡಲು ₹ 13 ಸಾವಿರ ಲಂಚ ಪಡೆದ ಆರೋಪದಡಿ ಯಾದಗಿರಿ ಸಂಚಾರ ಪೊಲೀಸ್ ಠಾಣೆಯ ಹೆಡ್ಕಾನ್ಸ್ಟೆಬಲ್ ಒಬ್ಬರನ್ನು ಲೋಕಾಯುಕ್ತ ಪೊಲೀಸರು ಗುರುವಾರ ವಶಕ್ಕೆ ಪಡೆದಿದ್ದಾರೆ.</p><p>ಹೆಡ್ಕಾನ್ಸ್ಟೆಬಲ್ ನಾಗೇಶ ಲಂಚ ಪಡೆದ ಆರೋಪಿ. ತಾಲ್ಲೂಕಿನ ಮುದ್ನಾಳ ದೊಡ್ಡ ತಾಂಡಾ ನಿವಾಸಿ ಅಣ್ಣಯ್ಯ ರಾಠೋಡ ಅವರು ನೀಡಿದ ದೂರಿನ ಅನ್ವಯ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದಾರೆ.</p><p>ಅಪಘಾತ ಪ್ರಕರಣದಲ್ಲಿ ಅಣ್ಣಯ್ಯ ಅವರ ಬೈಕ್ ವಶಕ್ಕೆ ಪಡೆದುಕೊಳ್ಳಲಾಗಿತ್ತು. ಪ್ರಕರಣ ಇತ್ಯರ್ಥವಾದರೂ ಮಾಲೀಕರಿಗೆ ಬೈಕ್ ಹಸ್ತಾಂತರ ಮಾಡಿರಲಿಲ್ಲ. ಬೈಕ್ ಕೊಡಲು ಆರೋಪಿಯು ₹ 13 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಪೊಲೀಸ್ ಠಾಣೆಯ ಕಚೇರಿಯಲ್ಲಿ ನಾಗೇಶ ₹ 13 ಸಾವಿರ ಲಂಚದ ಹಣವನ್ನು ಪಡೆದಿದ್ದರು. ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ಮಾಡಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.</p><p>ಲೋಕಾಯುಕ್ತ ಡಿವೈಎಸ್ಪಿ ಜೆ.ಎಚ್. ಇನಾಮದಾರ್, ಇನ್ಸ್ಪೆಕ್ಟರ್ ಸಿದ್ದರಾಯ ಬಳ್ಳೂರಗಿ ಅವರಿದ್ದ ತಂಡವು ದಾಳಿ ಮಾಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಾದಗಿರಿ:</strong> ಅಪಘಾತ ಪ್ರಕರಣವೊಂದರ ಬೈಕ್ ಬಿಟ್ಟುಕೊಡಲು ₹ 13 ಸಾವಿರ ಲಂಚ ಪಡೆದ ಆರೋಪದಡಿ ಯಾದಗಿರಿ ಸಂಚಾರ ಪೊಲೀಸ್ ಠಾಣೆಯ ಹೆಡ್ಕಾನ್ಸ್ಟೆಬಲ್ ಒಬ್ಬರನ್ನು ಲೋಕಾಯುಕ್ತ ಪೊಲೀಸರು ಗುರುವಾರ ವಶಕ್ಕೆ ಪಡೆದಿದ್ದಾರೆ.</p><p>ಹೆಡ್ಕಾನ್ಸ್ಟೆಬಲ್ ನಾಗೇಶ ಲಂಚ ಪಡೆದ ಆರೋಪಿ. ತಾಲ್ಲೂಕಿನ ಮುದ್ನಾಳ ದೊಡ್ಡ ತಾಂಡಾ ನಿವಾಸಿ ಅಣ್ಣಯ್ಯ ರಾಠೋಡ ಅವರು ನೀಡಿದ ದೂರಿನ ಅನ್ವಯ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದಾರೆ.</p><p>ಅಪಘಾತ ಪ್ರಕರಣದಲ್ಲಿ ಅಣ್ಣಯ್ಯ ಅವರ ಬೈಕ್ ವಶಕ್ಕೆ ಪಡೆದುಕೊಳ್ಳಲಾಗಿತ್ತು. ಪ್ರಕರಣ ಇತ್ಯರ್ಥವಾದರೂ ಮಾಲೀಕರಿಗೆ ಬೈಕ್ ಹಸ್ತಾಂತರ ಮಾಡಿರಲಿಲ್ಲ. ಬೈಕ್ ಕೊಡಲು ಆರೋಪಿಯು ₹ 13 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಪೊಲೀಸ್ ಠಾಣೆಯ ಕಚೇರಿಯಲ್ಲಿ ನಾಗೇಶ ₹ 13 ಸಾವಿರ ಲಂಚದ ಹಣವನ್ನು ಪಡೆದಿದ್ದರು. ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ಮಾಡಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.</p><p>ಲೋಕಾಯುಕ್ತ ಡಿವೈಎಸ್ಪಿ ಜೆ.ಎಚ್. ಇನಾಮದಾರ್, ಇನ್ಸ್ಪೆಕ್ಟರ್ ಸಿದ್ದರಾಯ ಬಳ್ಳೂರಗಿ ಅವರಿದ್ದ ತಂಡವು ದಾಳಿ ಮಾಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>