<p><strong>ಬಳಿಚಕ್ರ (ಸೈದಾಪುರ):</strong> ಅಧಿಕ ಮಳೆ ಹಾಗೂ ತಂಪು ವಾತಾವರಣದಿಂದ ಹೆಸರು ಬೆಳೆಗೆ ಹಳದಿ ರೋಗ ಬರುವ ಸಾಧ್ಯತೆ ಇರುತ್ತದೆ. ಅದನ್ನು ತಡೆಗಟ್ಟಲು ರೈತರು ಸಮಯಕ್ಕೆ ಸರಿಯಾಗಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಬಳಿಚಕ್ರ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ಜಯಪ್ಪ ತಿಳಿಸಿದರು.</p>.<p>ಸಮೀಪದ ಬಳಿಚಕ್ರ ಹೋಬಳಿ ವ್ಯಾಪ್ತಿಯಲ್ಲಿನ ಹಳದಿ ರೋಗ ಬಾಧಿತ ರೈತರ ಹೊಲಗಳಿಗೆ ಭೇಟಿ ನೀಡಿ, ಸೂಕ್ತ ಮುಂಜಾಗ್ರತಾ ಕ್ರಮ ಕೈಗೊಳ್ಳುವ ಬಗ್ಗೆ ರೈತರಿಗೆ ಮಾಹಿತಿ ನೀಡಿದರು.</p>.<p>ಹೆಸರು ಮೂರು ವಾರಗಳ ಬೆಳವಣಿಗೆ ಹಂತದ ಸಮಯದಲ್ಲಿಯೇ ಹಳದಿ ರೋಗದ ಕಾಟ ಶುರುವಾಗಿದೆ. ಬಳಿಚಕ್ರ ಹೋಬಳಿಯ ವಿವಿಧ ಭಾಗದಲ್ಲಿ ಹೆಸರು ಬೆಳೆಗೆ ಕೀಟಗಳ ಕಾಟದ ಜೊತೆಗೆ ಹಳದಿ ರೋಗ ಕಾಣಿಸಿಕೊಂಡಿದ್ದು, ರೈತರನ್ನು ಆತಂಕಕ್ಕೆ ದೂಡುವಂತೆ ಮಾಡಿದೆ.</p>.<p>ಹತೋಟಿ ಕ್ರಮಗಳು: ರೋಗಕ್ಕೆ ತುತ್ತಾದ ಗಿಡಗಳನ್ನು ಆರಂಭಿಕ ಹಂತದಲ್ಲಿಯೇ ಗುರುತಿಸಿ ಕಿತ್ತು ಮಣ್ಣಿನಲ್ಲಿ ಹೂಳಬೇಕು. ಪ್ರತಿ ಎಕರೆಗೆ 8-10 ಹಳದಿ ಅಂಟು ಬಲೆಗಳನ್ನು ಅಳವಡಿಸಬೇಕು. ಒಂದು ಮಿ.ಲೀ ಬೇವಿನ ಎಣ್ಣೆಯನ್ನು ಒಂದು ಲೀಟರ್ ನೀರಿಗೆ ಅಥವಾ ಇಮಿಡಾಕ್ಲೋಪ್ರಿಡ್ 0.5 ಮಿ. ಲೀ. ಯನ್ನು ಒಂದು ಲೀಟರ್ ನೀರಿಗೆ ಅಥವಾ ಅಸಿಟಾಮಿಪ್ರಿಡ್ 20 ಎಸ್ ಪಿ 0.3 ಗ್ರಾಂ/ಲೀಟರ್ ನೀರಿಗೆ ಬೆರೆಸಿ ಸಿಂಪಡಿಸಬೇಕು. ಥಯೋಮೆತಾಕ್ಷಂ 25ಡಬ್ಲೂವ್ 0.3 ಗ್ರಾಂ/ಲೀಟರ್ ನೀರಿಗೆ (3 ಗ್ರಾಂ/10 ಲೀಟರ್ ನೀರಿಗೆ ) ಬೆರೆಸಿ ಸಿಂಪರಣೆ ಮಾಡಬೇಕು. ಈ ಮೇಲಿನ ಯಾವುದಾದರೂ ಒಂದು ಕೀಟನಾಶಕ ಮಾತ್ರ ಸಿಂಪರಣೆ ಮಾಡಬೇಕು. ಅವಶ್ಯಕತೆ ಇದ್ದರೆ 10 ದಿನಗಳ ನಂತರ ಮತ್ತೊಂದು ಸಿಂಪರಣೆ ಮಾಡಬೇಕು ಎಂದರು.</p>.<p>ಹೆಚ್ಚಿನ ಮಾಹಿತಿಗಾಗಿ ಸಂಬಂಧಿಸಿದ ಕೃಷಿ ಅಧಿಕಾರಿಗಳನ್ನು ಸಂಪರ್ಕಿಸಿ ಎಂದು ರೈತರಿಗೆ ಸಲಹೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಳಿಚಕ್ರ (ಸೈದಾಪುರ):</strong> ಅಧಿಕ ಮಳೆ ಹಾಗೂ ತಂಪು ವಾತಾವರಣದಿಂದ ಹೆಸರು ಬೆಳೆಗೆ ಹಳದಿ ರೋಗ ಬರುವ ಸಾಧ್ಯತೆ ಇರುತ್ತದೆ. ಅದನ್ನು ತಡೆಗಟ್ಟಲು ರೈತರು ಸಮಯಕ್ಕೆ ಸರಿಯಾಗಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಬಳಿಚಕ್ರ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ಜಯಪ್ಪ ತಿಳಿಸಿದರು.</p>.<p>ಸಮೀಪದ ಬಳಿಚಕ್ರ ಹೋಬಳಿ ವ್ಯಾಪ್ತಿಯಲ್ಲಿನ ಹಳದಿ ರೋಗ ಬಾಧಿತ ರೈತರ ಹೊಲಗಳಿಗೆ ಭೇಟಿ ನೀಡಿ, ಸೂಕ್ತ ಮುಂಜಾಗ್ರತಾ ಕ್ರಮ ಕೈಗೊಳ್ಳುವ ಬಗ್ಗೆ ರೈತರಿಗೆ ಮಾಹಿತಿ ನೀಡಿದರು.</p>.<p>ಹೆಸರು ಮೂರು ವಾರಗಳ ಬೆಳವಣಿಗೆ ಹಂತದ ಸಮಯದಲ್ಲಿಯೇ ಹಳದಿ ರೋಗದ ಕಾಟ ಶುರುವಾಗಿದೆ. ಬಳಿಚಕ್ರ ಹೋಬಳಿಯ ವಿವಿಧ ಭಾಗದಲ್ಲಿ ಹೆಸರು ಬೆಳೆಗೆ ಕೀಟಗಳ ಕಾಟದ ಜೊತೆಗೆ ಹಳದಿ ರೋಗ ಕಾಣಿಸಿಕೊಂಡಿದ್ದು, ರೈತರನ್ನು ಆತಂಕಕ್ಕೆ ದೂಡುವಂತೆ ಮಾಡಿದೆ.</p>.<p>ಹತೋಟಿ ಕ್ರಮಗಳು: ರೋಗಕ್ಕೆ ತುತ್ತಾದ ಗಿಡಗಳನ್ನು ಆರಂಭಿಕ ಹಂತದಲ್ಲಿಯೇ ಗುರುತಿಸಿ ಕಿತ್ತು ಮಣ್ಣಿನಲ್ಲಿ ಹೂಳಬೇಕು. ಪ್ರತಿ ಎಕರೆಗೆ 8-10 ಹಳದಿ ಅಂಟು ಬಲೆಗಳನ್ನು ಅಳವಡಿಸಬೇಕು. ಒಂದು ಮಿ.ಲೀ ಬೇವಿನ ಎಣ್ಣೆಯನ್ನು ಒಂದು ಲೀಟರ್ ನೀರಿಗೆ ಅಥವಾ ಇಮಿಡಾಕ್ಲೋಪ್ರಿಡ್ 0.5 ಮಿ. ಲೀ. ಯನ್ನು ಒಂದು ಲೀಟರ್ ನೀರಿಗೆ ಅಥವಾ ಅಸಿಟಾಮಿಪ್ರಿಡ್ 20 ಎಸ್ ಪಿ 0.3 ಗ್ರಾಂ/ಲೀಟರ್ ನೀರಿಗೆ ಬೆರೆಸಿ ಸಿಂಪಡಿಸಬೇಕು. ಥಯೋಮೆತಾಕ್ಷಂ 25ಡಬ್ಲೂವ್ 0.3 ಗ್ರಾಂ/ಲೀಟರ್ ನೀರಿಗೆ (3 ಗ್ರಾಂ/10 ಲೀಟರ್ ನೀರಿಗೆ ) ಬೆರೆಸಿ ಸಿಂಪರಣೆ ಮಾಡಬೇಕು. ಈ ಮೇಲಿನ ಯಾವುದಾದರೂ ಒಂದು ಕೀಟನಾಶಕ ಮಾತ್ರ ಸಿಂಪರಣೆ ಮಾಡಬೇಕು. ಅವಶ್ಯಕತೆ ಇದ್ದರೆ 10 ದಿನಗಳ ನಂತರ ಮತ್ತೊಂದು ಸಿಂಪರಣೆ ಮಾಡಬೇಕು ಎಂದರು.</p>.<p>ಹೆಚ್ಚಿನ ಮಾಹಿತಿಗಾಗಿ ಸಂಬಂಧಿಸಿದ ಕೃಷಿ ಅಧಿಕಾರಿಗಳನ್ನು ಸಂಪರ್ಕಿಸಿ ಎಂದು ರೈತರಿಗೆ ಸಲಹೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>