<p><strong>ಸುರಪುರ</strong>: ವಿಶ್ವ ಯೋಗ ದಿನಾಚರಣೆ ಅಂಗವಾಗಿ ಶಾಸಕ ರಾಜೂಗೌಡ ಅವರು ತಮ್ಮ ನಿವಾಸದಲ್ಲಿ ಸೋಮವಾರ ತಮ್ಮ ಪುತ್ರ ಮಣಿಕಂಠ ಅವರೊಂದಿಗೆ ಯೋಗ ಮಾಡುವ ಮೂಲಕ ಯೋಗ ದಿನಾಚರಣೆಯನ್ನು ಸರಳವಾಗಿ ಆಚರಿಸಿದರು.</p>.<p>'ದೇಹದಲ್ಲಿ ರೋಗ ನಿರೋಧ ಶಕ್ತಿ ಹೆಚ್ಚಿಸಿಕೊಳ್ಳಲು ಯೋಗ ಬ್ರಹ್ಮಾಸ್ತ್ರವಿದ್ದಂತೆ. ಸದೃಢ ಆರೋಗ್ಯದೊಂದಿಗೆ ಬುದ್ಧಿ ಮತ್ತು ಮನಸ್ಸನ್ನು ಏಕಾಗೃತೆಯಲ್ಲಿಡುತ್ತದೆ. ಆರೋಗ್ಯ ಚೆನ್ನಾಗಿದ್ದಲ್ಲಿ ನಾವು ಏನನ್ನಾದರೂ ಸಾಧಿಸಲು ಸಾಧ್ಯ. ಆದ್ದರಿಂದ ಪ್ರತಿಯೊಬ್ಬರು ಯೋಗಭ್ಯಾಸ ಮಾಡಿ ಉತ್ತಮ ಆರೋಗ್ಯ ಪಡೆದುಕೊಳ್ಳಬೇಕು' ಎಂದರು</p>.<p>'ಯೋಗವನ್ನು ವಿಶ್ವಕ್ಕೆ ಪರಿಚಯಿಸಿದ್ದು ಭಾರತ. ಹೀಗಾಗಿ ಇದು ನಮ್ಮ ಪರಂಪರೆಯ ಪ್ರತೀಕವಾಗಿದೆ. ಋಷಿ ಮುನಿಗಳು ಸೇರಿದಂತೆ ಆದಿಕಾಲದಿಂದಲೂ ಈ ಪರಂಪರೆಯನ್ನು ಇಂದಿಗೂ ಮುಂದುವರಿಸಿಕೊಂಡು ಬರಲಾಗುತ್ತಿದೆ. ಹೀಗಾಗಿ ದಿನದ ಒಂದಿಷ್ಟು ಸಮುಯನ್ನು ಯೋಗಕ್ಕೆ ಮೀಸಲಿಡಬೇಕು. ಪ್ರತಿ ದಿನವೂ ತಪ್ಪದೆ ಯೋಗ ಮಾಡಿದಲ್ಲಿ ಉತ್ತಮ ಆರೋಗ್ಯ ಲಭಿಸುತ್ತದೆ ಎಂದು ಸಲಹೆ ನೀಡಿದರು.</p>.<p>ಬಿಜೆಪಿ ಸುರಪುರ ಮಂಡಲ ಅಧ್ಯಕ್ಷ ಮೇಲಪ್ಪ ಗುಳಗಿ. ಜಿ.ಪಂ ಸದಸ್ಯ ಬಸಯ್ಯ ಸ್ವಾಮಿ, ಮಾಜಿ ಸದಸ್ಯ ಎಚ್.ಸಿ.ಪಾಟೀಲ ಇತರರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸುರಪುರ</strong>: ವಿಶ್ವ ಯೋಗ ದಿನಾಚರಣೆ ಅಂಗವಾಗಿ ಶಾಸಕ ರಾಜೂಗೌಡ ಅವರು ತಮ್ಮ ನಿವಾಸದಲ್ಲಿ ಸೋಮವಾರ ತಮ್ಮ ಪುತ್ರ ಮಣಿಕಂಠ ಅವರೊಂದಿಗೆ ಯೋಗ ಮಾಡುವ ಮೂಲಕ ಯೋಗ ದಿನಾಚರಣೆಯನ್ನು ಸರಳವಾಗಿ ಆಚರಿಸಿದರು.</p>.<p>'ದೇಹದಲ್ಲಿ ರೋಗ ನಿರೋಧ ಶಕ್ತಿ ಹೆಚ್ಚಿಸಿಕೊಳ್ಳಲು ಯೋಗ ಬ್ರಹ್ಮಾಸ್ತ್ರವಿದ್ದಂತೆ. ಸದೃಢ ಆರೋಗ್ಯದೊಂದಿಗೆ ಬುದ್ಧಿ ಮತ್ತು ಮನಸ್ಸನ್ನು ಏಕಾಗೃತೆಯಲ್ಲಿಡುತ್ತದೆ. ಆರೋಗ್ಯ ಚೆನ್ನಾಗಿದ್ದಲ್ಲಿ ನಾವು ಏನನ್ನಾದರೂ ಸಾಧಿಸಲು ಸಾಧ್ಯ. ಆದ್ದರಿಂದ ಪ್ರತಿಯೊಬ್ಬರು ಯೋಗಭ್ಯಾಸ ಮಾಡಿ ಉತ್ತಮ ಆರೋಗ್ಯ ಪಡೆದುಕೊಳ್ಳಬೇಕು' ಎಂದರು</p>.<p>'ಯೋಗವನ್ನು ವಿಶ್ವಕ್ಕೆ ಪರಿಚಯಿಸಿದ್ದು ಭಾರತ. ಹೀಗಾಗಿ ಇದು ನಮ್ಮ ಪರಂಪರೆಯ ಪ್ರತೀಕವಾಗಿದೆ. ಋಷಿ ಮುನಿಗಳು ಸೇರಿದಂತೆ ಆದಿಕಾಲದಿಂದಲೂ ಈ ಪರಂಪರೆಯನ್ನು ಇಂದಿಗೂ ಮುಂದುವರಿಸಿಕೊಂಡು ಬರಲಾಗುತ್ತಿದೆ. ಹೀಗಾಗಿ ದಿನದ ಒಂದಿಷ್ಟು ಸಮುಯನ್ನು ಯೋಗಕ್ಕೆ ಮೀಸಲಿಡಬೇಕು. ಪ್ರತಿ ದಿನವೂ ತಪ್ಪದೆ ಯೋಗ ಮಾಡಿದಲ್ಲಿ ಉತ್ತಮ ಆರೋಗ್ಯ ಲಭಿಸುತ್ತದೆ ಎಂದು ಸಲಹೆ ನೀಡಿದರು.</p>.<p>ಬಿಜೆಪಿ ಸುರಪುರ ಮಂಡಲ ಅಧ್ಯಕ್ಷ ಮೇಲಪ್ಪ ಗುಳಗಿ. ಜಿ.ಪಂ ಸದಸ್ಯ ಬಸಯ್ಯ ಸ್ವಾಮಿ, ಮಾಜಿ ಸದಸ್ಯ ಎಚ್.ಸಿ.ಪಾಟೀಲ ಇತರರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>