<p><strong>ಸೈದಾಪುರ (ಯಾದಗಿರಿ ಜಿಲ್ಲೆ): </strong>ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ವತಿಯಿಂದ ಭಾನುವಾರ ಇಲ್ಲಿ ನಡೆದ ರಾಜ್ಯಮಟ್ಟದ ಯುವ ವಿಜ್ಞಾನಿಗಳ ಸಮಾವೇಶದಲ್ಲಿ ನಾಲ್ವರು ವಿದ್ಯಾರ್ಥಿಗಳಿಗೆ 2020–21ನೇ ಸಾಲಿನ ಯುವ ವಿಜ್ಞಾನಿ ಪ್ರಶಸ್ತಿ ಪ್ರದಾನ ಮಾಡಲಾಯಿತು.</p>.<p>ದಾವಣಗೆರೆಯ ಕೇಂದ್ರೀಯ ವಿದ್ಯಾಲಯದ ವೈ.ಹಿ.ಯೋಗಪ್ರಿಯ, ದಕ್ಷಿಣ ಕನ್ನಡ ಜಿಲ್ಲೆಯ ವಿವೇಕಾನಂದ ಇಂಗ್ಲಿಷ್ ಮಾಧ್ಯಮ ಶಾಲೆಯ ಯಶಸ್ವಿ ಶೆಟ್ಟಿ, ಬಳ್ಳಾರಿಯ ಜಿಂದಾಲ್ ವಿದ್ಯಾಮಂದಿರದ ಸುಮೇಧ ಎಸ್.ಎಸ್ ಮತ್ತು ಗದಗ್ನ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕಾರ್ತಿಕ ಮೋಹನಲಾಲ್ ಅವರು ಪ್ರಶಸ್ತಿ ಸ್ವೀಕರಿಸಿದರು.</p>.<p>ರಾಜ್ಯದ ವಿವಿಧ ಜಿಲ್ಲೆಗಳ 66 ವಿದ್ಯಾರ್ಥಿಗಳು ವಿಜ್ಞಾನ ಅನ್ವೇಷಣೆಯ ಮಾದರಿಗಳನ್ನು ಪ್ರದರ್ಶಿಸಿದರು. ಅಂತಿಮ ಹಂತಕ್ಕೆ ಆಯ್ಕೆಯಾದ 12 ವಿದ್ಯಾರ್ಥಿಗಳ ಮಾದರಿಗಳನ್ನು 8 ಮಂದಿ ತಜ್ಞರು ಪರೀಶೀಲಿಸಿದರು. ಲಿಖಿತ ಪರೀಕ್ಷೆ ಜೊತೆ ಸಂದರ್ಶನ ನಡೆಸಿ ನಾಲ್ವರನ್ನು ಪ್ರಶಸ್ತಿಗೆ ಆಯ್ಕೆ ಮಾಡಿದರು. ಅವರಿಗೆ ತಲಾ ₹10 ಸಾವಿರ ನಗದು ಮತ್ತು ಪ್ರಶಸ್ತಿ ಪತ್ರವನ್ನು ಭಾರತೀಯ ವಿಜ್ಞಾನ ಸಂಸ್ಥೆ ನಿವೃತ್ತ ವಿಜ್ಞಾನಿ ಡಾ.ಎಚ್.ಎಲ್.ಭಟ್ ವಿತರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸೈದಾಪುರ (ಯಾದಗಿರಿ ಜಿಲ್ಲೆ): </strong>ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ವತಿಯಿಂದ ಭಾನುವಾರ ಇಲ್ಲಿ ನಡೆದ ರಾಜ್ಯಮಟ್ಟದ ಯುವ ವಿಜ್ಞಾನಿಗಳ ಸಮಾವೇಶದಲ್ಲಿ ನಾಲ್ವರು ವಿದ್ಯಾರ್ಥಿಗಳಿಗೆ 2020–21ನೇ ಸಾಲಿನ ಯುವ ವಿಜ್ಞಾನಿ ಪ್ರಶಸ್ತಿ ಪ್ರದಾನ ಮಾಡಲಾಯಿತು.</p>.<p>ದಾವಣಗೆರೆಯ ಕೇಂದ್ರೀಯ ವಿದ್ಯಾಲಯದ ವೈ.ಹಿ.ಯೋಗಪ್ರಿಯ, ದಕ್ಷಿಣ ಕನ್ನಡ ಜಿಲ್ಲೆಯ ವಿವೇಕಾನಂದ ಇಂಗ್ಲಿಷ್ ಮಾಧ್ಯಮ ಶಾಲೆಯ ಯಶಸ್ವಿ ಶೆಟ್ಟಿ, ಬಳ್ಳಾರಿಯ ಜಿಂದಾಲ್ ವಿದ್ಯಾಮಂದಿರದ ಸುಮೇಧ ಎಸ್.ಎಸ್ ಮತ್ತು ಗದಗ್ನ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕಾರ್ತಿಕ ಮೋಹನಲಾಲ್ ಅವರು ಪ್ರಶಸ್ತಿ ಸ್ವೀಕರಿಸಿದರು.</p>.<p>ರಾಜ್ಯದ ವಿವಿಧ ಜಿಲ್ಲೆಗಳ 66 ವಿದ್ಯಾರ್ಥಿಗಳು ವಿಜ್ಞಾನ ಅನ್ವೇಷಣೆಯ ಮಾದರಿಗಳನ್ನು ಪ್ರದರ್ಶಿಸಿದರು. ಅಂತಿಮ ಹಂತಕ್ಕೆ ಆಯ್ಕೆಯಾದ 12 ವಿದ್ಯಾರ್ಥಿಗಳ ಮಾದರಿಗಳನ್ನು 8 ಮಂದಿ ತಜ್ಞರು ಪರೀಶೀಲಿಸಿದರು. ಲಿಖಿತ ಪರೀಕ್ಷೆ ಜೊತೆ ಸಂದರ್ಶನ ನಡೆಸಿ ನಾಲ್ವರನ್ನು ಪ್ರಶಸ್ತಿಗೆ ಆಯ್ಕೆ ಮಾಡಿದರು. ಅವರಿಗೆ ತಲಾ ₹10 ಸಾವಿರ ನಗದು ಮತ್ತು ಪ್ರಶಸ್ತಿ ಪತ್ರವನ್ನು ಭಾರತೀಯ ವಿಜ್ಞಾನ ಸಂಸ್ಥೆ ನಿವೃತ್ತ ವಿಜ್ಞಾನಿ ಡಾ.ಎಚ್.ಎಲ್.ಭಟ್ ವಿತರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>