ಕುಟುಂಬ ಸಮೇತರಾಗಿ ದೇವರ ದರ್ಶನಕ್ಕೆ ಬಂದಿದ್ದು, ಹೊನ್ನಕೆರೆಯಲ್ಲಿ ಸ್ನಾನ ಮಾಡುವಾಗ ವಸಂತಾ ಕಾಲು ಜಾರಿ ನೀರಿಗೆ ಬಿದ್ದರು. ಅವರ ಜೊತೆಗೆ ತೆರಳಿದ್ದ ಸಂಬಂಧಿಕರಾದ ಮಂಜು, ಪ್ರಶಾಂತ, ಲಕ್ಷ್ಮಿ, ಮಲ್ಲಿಕಾರ್ಜುನ ಮೆಟ್ಟಿಲು ಬಳಿ ಸ್ನಾನ ಮಾಡಿ ಮೇಲೆ ಬಂದರು. ವಸಂತಾ ಬಿದ್ದದ್ದು ಅವರ ಗಮನಕ್ಕೆ ಬಂದಿರಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.