<p><strong>ವಡಗೇರಾ (ಯಾದಗಿರಿ ಜಿಲ್ಲೆ):</strong> ಜಮೀನು ದಾರಿ ವಿಚಾರವಾಗಿ ಎಸ್ಸಿ ಸಮುದಾಯದವರು ಅಟ್ರಾಸಿಟಿ ಕೇಸ್ ಮಾಡುತ್ತೇವೆ ಎಂದು ಜೀವ ಬೆದರಿಕೆ ಹಾಕಿದ್ದರಿಂದ ಪಟ್ಟಣದ ಯುವಕ ಭಯಗೊಂಡು ಬೇವಿನ ಗಿಡಕ್ಕೆ ನೇಣುಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ವಿಷಯ ತಿಳಿದ ತಂದೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.</p><p>ಕೋನಹಳ್ಳಿ ಗ್ರಾಮಕ್ಕೆ ಹೋಗುವ ಮಾರ್ಗದಲ್ಲಿರುವ ಬೇವಿನ ಗಿಡಕ್ಕೆ ಮಹೆಬೂಬ್ (21) ನೇಣು ಬಿಗಿದುಕೊಂಡು ಬುಧವಾರ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.</p><p>ಮಗನ ಸಾವಿನ ಸುದ್ದಿ ಕೇಳಿ ತಂದೆ ಸೈಯದ್ಗೆ(50)ಹೃದಯಾಘಾತವಾಗಿದೆ.</p><p>ಹೆಚ್ಚಿನ ಚಿಕಿತ್ಸೆಗಾಗಿ ಕಲಬುರಗಿಯಲ್ಲಿ ಕರೆದೊಯ್ದಾಗ ಗುರುವಾರ ಚಿಕಿತ್ಸೆಗೆ ಸ್ಪಂದಿಸದೇ ಸಾವನ್ನಪ್ಪಿದ್ದಾರೆ.</p><p><strong>ಘಟನೆ ವಿವರ:</strong></p><p>ಕೆಲವು ದಿನಗಳ ಹಿಂದೆ ಜಮೀನಿಗೆ ತೆರಳುವ ರಸ್ತೆಗಾಗಿ ಎಸ್ಸಿ ಹಾಗೂ ಮುಸ್ಲಿಂ ಸಮುದಾಯದ ನಡುವೆ ಜಗಳವಾಗಿತ್ತು. ಯುವಕನ ವಿರುದ್ಧ ಜಾತಿ ನಿಂದನೆ ಪ್ರಕರಣ ದಾಖಲಿಸುತ್ತೇವೆ ಎಂದು ಎಸ್ಸಿ ಸಮುದಾಯದವರು ಹೇಳಿದ್ದಾರೆ. ಇದಕ್ಕೆ ಯುವಕ ಹೆದರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. </p><p>ಘಟನೆಗೆ ಸಂಬಂಧ 8 ಜನರ ವಿರುದ್ಧ ಪ್ರಕರಣ ದಾಖಲಾಗಿದೆ.</p><p>ಇದರಲ್ಲಿ ಈಶಪ್ಪ ನಾಯ್ಕಲ್ ಎಂಬುವರನ್ನು ಬಂಧಿಸಲಾಗಿದೆ ಎಂದು ವಡಗೇರಾ ಠಾಣೆಯ ಪಿಎಸ್ಐ ಮಹೆಬೂಬ್ ಅಲಿ ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಡಗೇರಾ (ಯಾದಗಿರಿ ಜಿಲ್ಲೆ):</strong> ಜಮೀನು ದಾರಿ ವಿಚಾರವಾಗಿ ಎಸ್ಸಿ ಸಮುದಾಯದವರು ಅಟ್ರಾಸಿಟಿ ಕೇಸ್ ಮಾಡುತ್ತೇವೆ ಎಂದು ಜೀವ ಬೆದರಿಕೆ ಹಾಕಿದ್ದರಿಂದ ಪಟ್ಟಣದ ಯುವಕ ಭಯಗೊಂಡು ಬೇವಿನ ಗಿಡಕ್ಕೆ ನೇಣುಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ವಿಷಯ ತಿಳಿದ ತಂದೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.</p><p>ಕೋನಹಳ್ಳಿ ಗ್ರಾಮಕ್ಕೆ ಹೋಗುವ ಮಾರ್ಗದಲ್ಲಿರುವ ಬೇವಿನ ಗಿಡಕ್ಕೆ ಮಹೆಬೂಬ್ (21) ನೇಣು ಬಿಗಿದುಕೊಂಡು ಬುಧವಾರ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.</p><p>ಮಗನ ಸಾವಿನ ಸುದ್ದಿ ಕೇಳಿ ತಂದೆ ಸೈಯದ್ಗೆ(50)ಹೃದಯಾಘಾತವಾಗಿದೆ.</p><p>ಹೆಚ್ಚಿನ ಚಿಕಿತ್ಸೆಗಾಗಿ ಕಲಬುರಗಿಯಲ್ಲಿ ಕರೆದೊಯ್ದಾಗ ಗುರುವಾರ ಚಿಕಿತ್ಸೆಗೆ ಸ್ಪಂದಿಸದೇ ಸಾವನ್ನಪ್ಪಿದ್ದಾರೆ.</p><p><strong>ಘಟನೆ ವಿವರ:</strong></p><p>ಕೆಲವು ದಿನಗಳ ಹಿಂದೆ ಜಮೀನಿಗೆ ತೆರಳುವ ರಸ್ತೆಗಾಗಿ ಎಸ್ಸಿ ಹಾಗೂ ಮುಸ್ಲಿಂ ಸಮುದಾಯದ ನಡುವೆ ಜಗಳವಾಗಿತ್ತು. ಯುವಕನ ವಿರುದ್ಧ ಜಾತಿ ನಿಂದನೆ ಪ್ರಕರಣ ದಾಖಲಿಸುತ್ತೇವೆ ಎಂದು ಎಸ್ಸಿ ಸಮುದಾಯದವರು ಹೇಳಿದ್ದಾರೆ. ಇದಕ್ಕೆ ಯುವಕ ಹೆದರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. </p><p>ಘಟನೆಗೆ ಸಂಬಂಧ 8 ಜನರ ವಿರುದ್ಧ ಪ್ರಕರಣ ದಾಖಲಾಗಿದೆ.</p><p>ಇದರಲ್ಲಿ ಈಶಪ್ಪ ನಾಯ್ಕಲ್ ಎಂಬುವರನ್ನು ಬಂಧಿಸಲಾಗಿದೆ ಎಂದು ವಡಗೇರಾ ಠಾಣೆಯ ಪಿಎಸ್ಐ ಮಹೆಬೂಬ್ ಅಲಿ ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>