ಶುಕ್ರವಾರ, 5 ಡಿಸೆಂಬರ್ 2025
×
ADVERTISEMENT
ADVERTISEMENT

ಯಾದಗಿರಿ | ಯುವ ‘ಉತ್ಸವ’ ಸಂಪನ್ನ; ‘ಪಕ್ಷಪಾತ’ದ ಕಪ್ಪು ಚುಕ್ಕೆ

Published : 5 ಡಿಸೆಂಬರ್ 2025, 7:11 IST
Last Updated : 5 ಡಿಸೆಂಬರ್ 2025, 7:11 IST
ಫಾಲೋ ಮಾಡಿ
Comments
ಯಾದಗಿರಿಯಲ್ಲಿ ಗುರುವಾರ ನಡೆದ ರಾಜ್ಯಮಟ್ಟದ ಯುವಜನೋತ್ಸವದಲ್ಲಿ ಕಲಬುರಗಿ ತಂಡ ಮಹಿಷಾಸುರ ಮರ್ದಿನಿ ನೃತ್ಯದ ಪ್ರದರ್ಶನ ನೀಡಿದರು
ಯಾದಗಿರಿಯಲ್ಲಿ ಗುರುವಾರ ನಡೆದ ರಾಜ್ಯಮಟ್ಟದ ಯುವಜನೋತ್ಸವದಲ್ಲಿ ಕಲಬುರಗಿ ತಂಡ ಮಹಿಷಾಸುರ ಮರ್ದಿನಿ ನೃತ್ಯದ ಪ್ರದರ್ಶನ ನೀಡಿದರು
ಯಾದಗಿರಿಯಲ್ಲಿ ಗುರುವಾರ ನಡೆದ ರಾಜ್ಯಮಟ್ಟದ ಯುವಜನೋತ್ಸವದಲ್ಲಿ ಜನಪದ ನೃತ್ಯ ಪ್ರದರ್ಶನ ನೀಡಿದ ಬೀದರ್ ತಂಡ
ಯಾದಗಿರಿಯಲ್ಲಿ ಗುರುವಾರ ನಡೆದ ರಾಜ್ಯಮಟ್ಟದ ಯುವಜನೋತ್ಸವದಲ್ಲಿ ಜನಪದ ನೃತ್ಯ ಪ್ರದರ್ಶನ ನೀಡಿದ ಬೀದರ್ ತಂಡ
ಯಾದಗಿರಿಯಲ್ಲಿ ಗುರುವಾರ ನಡೆದ ರಾಜ್ಯಮಟ್ಟದ ಯುವಜನೋತ್ಸವದಲ್ಲಿ ಜನಪದ ನೃತ್ಯ ಪ್ರದರ್ಶನ ನೀಡಿದ ರಾಯಚೂರಿನ ತಂಡ
ಯಾದಗಿರಿಯಲ್ಲಿ ಗುರುವಾರ ನಡೆದ ರಾಜ್ಯಮಟ್ಟದ ಯುವಜನೋತ್ಸವದಲ್ಲಿ ಜನಪದ ನೃತ್ಯ ಪ್ರದರ್ಶನ ನೀಡಿದ ರಾಯಚೂರಿನ ತಂಡ
ಯಾದಗಿರಿಯಲ್ಲಿ ಗುರುವಾರ ನಡೆದ ರಾಜ್ಯಮಟ್ಟದ ಯುವಜನೋತ್ಸವದಲ್ಲಿ ನೃತ್ಯ ಪ್ರದರ್ಶನ ನೀಡಿದ ರಾಯಚೂರಿನ ತಂಡ
ಯಾದಗಿರಿಯಲ್ಲಿ ಗುರುವಾರ ನಡೆದ ರಾಜ್ಯಮಟ್ಟದ ಯುವಜನೋತ್ಸವದಲ್ಲಿ ನೃತ್ಯ ಪ್ರದರ್ಶನ ನೀಡಿದ ರಾಯಚೂರಿನ ತಂಡ
ಯಾದಗಿರಿಯಲ್ಲಿ ಗುರುವಾರ ನಡೆದ ರಾಜ್ಯ ಮಟ್ಟದ ಯುವಜನೋತ್ಸವದ ಜನಪದ ನೃತ್ಯ ಸ್ಪರ್ಧೆಯ ಪ್ರಥಮ ಸ್ಥಾನ ಸಂಬಂಧ ಪೊಲೀಸರೊಂದಿಗೆ ನಡೆದ ವಾಗ್ವಾದ 
ಯಾದಗಿರಿಯಲ್ಲಿ ಗುರುವಾರ ನಡೆದ ರಾಜ್ಯ ಮಟ್ಟದ ಯುವಜನೋತ್ಸವದ ಜನಪದ ನೃತ್ಯ ಸ್ಪರ್ಧೆಯ ಪ್ರಥಮ ಸ್ಥಾನ ಸಂಬಂಧ ಪೊಲೀಸರೊಂದಿಗೆ ನಡೆದ ವಾಗ್ವಾದ 
‘ರಾಷ್ಟ್ರ ಮಟ್ಟದಲ್ಲಿ ಸಾಧನೆ ಮಾಡಿ’
‘ವಿವಿಧ ಕಲಾ ಸ್ಪರ್ಧೆಗಳಲ್ಲಿ ಭಾಗವಹಿಸಿರುವ ವಿದ್ಯಾರ್ಥಿಗಳು ಸೋಲು– ಗೆಲುವು ಸಮಾನವಾಗಿ ಸ್ವೀಕರಿಸುವ ಮನೋಭಾವ ಬೆಳೆಸಿಕೊಳ್ಳಬೇಕು. ರಾಜ್ಯ ಮಟ್ಟದಲ್ಲಿ ವಿಜೇತರಾದವರು ರಾಷ್ಟ್ರ ಮಟ್ಟದಲ್ಲಿಯೂ ಸಾಧನೆ ಮಾಡಬೇಕು’ ಎಂದು ಶಾಸಕ ಚನ್ನಾರೆಡ್ಡಿ ಪಾಟೀಲ ತುನ್ನೂರು ಹೇಳಿದರು. ರಾಜ್ಯ ಮಟ್ಟದ ಯುವಜನೋತ್ಸವದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು ‘ಸೋಲು- ಗೆಲುವು ಒಂದೇ ನಾಣ್ಯದ ಎರಡು ಮುಖಗಳಂತೆ. ಎರಡೂ ಸಮಾನವಾಗಿ ಸ್ವೀಕರಿಸಿ ಭವಿಷ್ಯದ ಸ್ಪರ್ಧೆಗಳತ್ತ ದೃಷ್ಟಿ ಹಾಯಿಸಬೇಕು’ ಎಂದರು. ಜಿಲ್ಲಾಧಿಕಾರಿ ಹರ್ಷಲ್ ಭೋಯರ್ ಮಾತನಾಡಿ ‘ಯಾದಗಿರಿ ಜಿಲ್ಲೆ ಮೊದಲ ಬಾರಿಗೆ ರಾಜ್ಯಮಟ್ಟದ ಯುವಜನೋತ್ಸವವನ್ನು ಯಶಸ್ವಿಯಾಗಿ ನಡೆಸಿದೆ. ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ವಸತಿ ಊಟ ಉಪಹಾರದ ವ್ಯವಸ್ಥೆಯನ್ನು ಅಧಿಕಾರಿಗಳು ಸಮನ್ವಯದಿಂದ ಮಾಡಲಾಗಿದೆ. ಸ್ಪರ್ಧಾಳುಗಳು ಸಹ ಉತ್ಸಾಹದಿಂದ ಭಾಗವಹಿಸಿದ್ದಾರೆ’ ಎಂದರು. ಕಾರ್ಯಕ್ರಮದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ರಮೇಶ ಕೋಲಾರ ಕ್ರೀಡಾ ಇಲಾಖೆ ಜಂಟಿ ನಿರ್ದೇಶಕ ಸುಭಾಷ್ ಚಂದ್ರ ಉಪನಿರ್ದೇಶಕ ಶ್ರೀನಿವಾಸ ಸಹಾಯಕ ಆಯುಕ್ತ ಶ್ರೀಧರ್ ಗೋಟುರ್ ಕ್ರೀಡಾಧಿಕಾರಿ ರಾಜು ಬಾವಿಹಳ್ಳಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಭಾಷಣ ಸ್ಪರ್ಧೆ:
 ತುರ್ತು ಪರಿಸ್ಥಿತಿಯಲ್ಲಿ ಸಂವಿಧಾನ ಉಲ್ಲಂಘನೆಯ ಚರ್ಚೆ ಇಲ್ಲಿನ ಕನ್ನಡ ಸಾಹಿತ್ಯ ಪರಿಷತ್‌ನ ಸಭಾಂಗಣದಲ್ಲಿ ಯುವಜನೋತ್ಸವದ ಅಂಗವಾಗಿ ನಡೆದ ಘೋಷಣೆ (ಭಾಷಣ) ಸ್ಪರ್ಧೆಗೆ ‘ತುರ್ತು ಪರಿಸ್ಥಿತಿಯ ಅವಧಿಯಲ್ಲಿ ಭಾರತದಲ್ಲಿ ಸಂವಿಧಾನದ ಉಲ್ಲಂಘನೆ ಮತ್ತು ಪ್ರಜಾಪ್ರಭುತ್ವ ಹಾಗೂ ಪ್ರಜಾಪ್ರಭುತ್ವದ ಮೌಲ್ಯಗಳ ರಕ್ಷಣೆ’ ಕುರಿತ ವಿಷಯವನ್ನು ವಿದ್ಯಾರ್ಥಿಗಳಿಗೆ ನೀಡಲಾಗಿತ್ತು. ಕೇಂದ್ರ ಯುವ ವ್ಯವಹಾರಗಳು ಮತ್ತು ಕ್ರೀಡಾ ಮಂತ್ರಾಲಯವು ಭಾಷಣ ಸ್ಪರ್ಧೆಗೆ ವಿಷಯವನ್ನು ಆಯ್ಕೆ ಮಾಡಿದೆ. ಸ್ಪರ್ಧೆ ಶುರುವಾಗುವ ಒಂದು ಗಂಟೆ ಮುಂಚಿತವಾಗಿ ಬಹಿರಂಗ ಪಡಿಸಲಾಯಿತು. 21 ಜಿಲ್ಲೆಗಳ ವಿದ್ಯಾರ್ಥಿಗಳು ಸ್ಪರ್ಧಿಸಿ ತುರ್ತು ಪರಿಸ್ಥಿತಿಯಲ್ಲಿ ಸಂವಿಧಾನದ ಉಲ್ಲಂಘನೆ ಅದರ ರಕ್ಷಣೆ ಹಾಗೂ ಮಹತ್ವದ ಕುರಿತು ತಮ್ಮ ವಿಚಾರಗಳನ್ನು ಮಂಡಿಸಿದರು. ಚಿಕ್ಕಮಗಳೂರಿನ ವರುಣ ಆರ್ಯ ಪ್ರಥಮ ಮೈಸೂರಿನ ಪಾಷಾ ದ್ವಿತೀಯ ಹಾಗೂ ಉಡುಪಿಯ ಶರಣಯ್ಯ ನಾಯ್ಕ ತೃತೀಯ ಸ್ಥಾನ ಗಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT