ನಟ ಪುನೀತ್ ರಾಜ್ಕುಮಾರ್ ಅವರ ನಿಧನದ ನಂತರ ಅವರಿಂದ ಸ್ಫೂರ್ತಿ ಪಡೆದ ಬಹುತೇಕರು ನೇತ್ರದಾನಕ್ಕೆ ವಾಗ್ದಾನ ಮಾಡಲು ಮುಂದಡಿ ಇಡುತ್ತಿದ್ದಾರೆ. ಶರಣಗೌಡ ಕಂದಕೂರ ಅವರು ಅಪ್ಪು ಅವರ ಅಪ್ಪಟ ಅಭಿಮಾನಿಯಾಗಿದ್ದು, ಹಲವು ಕಾರ್ಯಕ್ರಮಗಳಲ್ಲಿ ಅವರ ಸಾಮಾಜಿಕ ಸೇವಾ ಕಾರ್ಯವನ್ನು ಗುಣಗಾನ ಮಾಡಿದ್ದಲ್ಲದೆ ಪುನೀತ್ ಅವರ ಆದರ್ಶಗಳನ್ನು ಪಾಲಿಸುವಂತೆ ಕಾರ್ಯಕರ್ತರಿಗೆ ಕರೆ ನೀಡಿದ್ದರು.