<p><strong>ಕಡೇಚೂರು (ಸೈದಾಪುರ): </strong>ಯಾದಗಿರಿ ತಾಲ್ಲೂಕಿನ ಕಡೇಚೂರು ಹೊರ ವಲಯದಲ್ಲಿ ಯುವಕನ ಕೊಲೆ ಮಾಡಿದ ಘಟನೆ ಸೋಮವಾರ<br />ನಡೆದಿದೆ.</p>.<p>ಯಲಸತ್ತಿ ಗ್ರಾಮದ ನಿವಾಸಿ ಸಿದ್ಧಾರ್ಥ ಗೌಡ(28) ಕೊಲೆಯಾದ ಯುವಕ.</p>.<p>ಬೆಂಗಳೂರಿನಲ್ಲಿ ಪರಿಚಯ ಆಗಿದ್ದ ವಿವಾಹಿತ ಮಹಿಳೆಯೊಬ್ಬರನ್ನು ಮಾತನಾಡಿಸಲು ಕಡೇಚೂರಿಗೆ ತೆರಳಿದ್ದ. ಇದನ್ನು ಸಹಿಸದ ಆಕೆಯ ಸಹೋದರರು ಕೊಲೆ ಮಾಡಿದ್ದಾರೆ ಎಂದು ಆರೋಪಿಸಿ ಯುವಕನ ತಂದೆ ದೂರುನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಬೆಂಗಳೂರಿಗೆ ಕೆಲಸಕ್ಕೆ ಹೋಗಿದ್ದ ಸಿದ್ಧಾರ್ಥ, ಅಲ್ಲಿಯೇ ಪತಿಯಿಂದ ದೂರವಾಗಿದ್ದ ಮಹಿಳೆಯ ಪರಿಚಯವಾಗಿತ್ತು. ಆ ಬಳಿಕ ಕೆಲವು ಆಪ್ತರ ಸಮ್ಮುಖದಲ್ಲಿ ಮದುವೆ ಸಹ ಆಗಿದ್ದ. ಇದನ್ನು ಅರಿತ ಮಹಿಳೆಯ ಸಂಬಂಧಿಕರು ಆಕೆಯನ್ನು ಗ್ರಾಮಕ್ಕೆ ಕರೆತಂದರು. ಮಹಿಳೆಯನ್ನು ಮಾತ ನಾಡಿಸಲು ಕಡೇಚೂರಿಗೆ ಹೋಗಿ ದ್ದಾಗ ಆಕೆಯ ಪತಿ ಹಾಗೂ ಸಹೋದರರು ಕೊಲೆ ಮಾಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ ಎಂದರು.</p>.<p>ಪ್ರಕರಣ ಸಂಬಂಧ ಒಬ್ಬ ಕೊಲೆಯ ಆರೋಪಿಯನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ ಎಂದುಹೇಳಿದ್ದಾರೆ.</p>.<p>ಸೈದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಡೇಚೂರು (ಸೈದಾಪುರ): </strong>ಯಾದಗಿರಿ ತಾಲ್ಲೂಕಿನ ಕಡೇಚೂರು ಹೊರ ವಲಯದಲ್ಲಿ ಯುವಕನ ಕೊಲೆ ಮಾಡಿದ ಘಟನೆ ಸೋಮವಾರ<br />ನಡೆದಿದೆ.</p>.<p>ಯಲಸತ್ತಿ ಗ್ರಾಮದ ನಿವಾಸಿ ಸಿದ್ಧಾರ್ಥ ಗೌಡ(28) ಕೊಲೆಯಾದ ಯುವಕ.</p>.<p>ಬೆಂಗಳೂರಿನಲ್ಲಿ ಪರಿಚಯ ಆಗಿದ್ದ ವಿವಾಹಿತ ಮಹಿಳೆಯೊಬ್ಬರನ್ನು ಮಾತನಾಡಿಸಲು ಕಡೇಚೂರಿಗೆ ತೆರಳಿದ್ದ. ಇದನ್ನು ಸಹಿಸದ ಆಕೆಯ ಸಹೋದರರು ಕೊಲೆ ಮಾಡಿದ್ದಾರೆ ಎಂದು ಆರೋಪಿಸಿ ಯುವಕನ ತಂದೆ ದೂರುನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಬೆಂಗಳೂರಿಗೆ ಕೆಲಸಕ್ಕೆ ಹೋಗಿದ್ದ ಸಿದ್ಧಾರ್ಥ, ಅಲ್ಲಿಯೇ ಪತಿಯಿಂದ ದೂರವಾಗಿದ್ದ ಮಹಿಳೆಯ ಪರಿಚಯವಾಗಿತ್ತು. ಆ ಬಳಿಕ ಕೆಲವು ಆಪ್ತರ ಸಮ್ಮುಖದಲ್ಲಿ ಮದುವೆ ಸಹ ಆಗಿದ್ದ. ಇದನ್ನು ಅರಿತ ಮಹಿಳೆಯ ಸಂಬಂಧಿಕರು ಆಕೆಯನ್ನು ಗ್ರಾಮಕ್ಕೆ ಕರೆತಂದರು. ಮಹಿಳೆಯನ್ನು ಮಾತ ನಾಡಿಸಲು ಕಡೇಚೂರಿಗೆ ಹೋಗಿ ದ್ದಾಗ ಆಕೆಯ ಪತಿ ಹಾಗೂ ಸಹೋದರರು ಕೊಲೆ ಮಾಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ ಎಂದರು.</p>.<p>ಪ್ರಕರಣ ಸಂಬಂಧ ಒಬ್ಬ ಕೊಲೆಯ ಆರೋಪಿಯನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ ಎಂದುಹೇಳಿದ್ದಾರೆ.</p>.<p>ಸೈದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>