ಮಂಗಳವಾರ, 6 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯುವ ಬ್ರಿಗೇಡ್‌ನಿಂದ ದೇಗುಲಗಳ ಸ್ವಚ್ಛತೆ

Last Updated 1 ಸೆಪ್ಟೆಂಬರ್ 2020, 7:44 IST
ಅಕ್ಷರ ಗಾತ್ರ

ಯಾದಗಿರಿ:ನಗರದ ಬೆಟ್ಟದ ಕೋಟೆಯ ಮೇಲಿನ ಐತಿಹಾಸಿಕ ರಾಮಲಿಂಗೇಶ್ವರ ದೇವಸ್ಥಾನ ಹಾಗೂ ಜಿನ್ನಪ್ಪನ ಬೆಟ್ಟದ ಸ್ವಚ್ಛತಾ ಕಾರ್ಯಕ್ರಮವನ್ನು ಯುವ ಬ್ರಿಗೇಡ್ ವತಿಯಿಂದ ಭಾನುವಾರ ಹಮ್ಮಿಕೊಳ್ಳಲಾಗಿತ್ತು.

ನಗರದ ಹೊರವಲಯದಲ್ಲಿರುವ ಜಿನ್ನಪ್ಪನ ಬೆಟ್ಟ (ಜೈನ ಬಸದಿ)ಯನ್ನು ಮೊದಲ ಹಂತದಲ್ಲಿ ಯುವ ಬ್ರಿಗೇಡ್ ಕಾರ್ಯಕರ್ತರು ಶ್ರಮದಾನ ಮಾಡುವ ಮೂಲಕ ಸ್ವಚ್ಛಗೊಳಿಸುವ ಕಾರ್ಯ ಕೈಗೆತ್ತಿಕೊಂಡರು.

ವಿಭಾಗೀಯ ಸಹ ಸಂಚಾಲಕ ಸಂಗಮೇಶ ಕೆಂಭಾವಿ ಮಾತನಾಡಿ,2021ರ ಸ್ವಾತಂತ್ರ್ಯ ದಿನಾಚರಣೆಯನ್ನು ಸ್ಮರಣೀಯವಾಗಿಸುವ ನಿಟ್ಟಿನಲ್ಲಿ ರಾಜ್ಯದಾದ್ಯಂತ 75 ಮಾದರಿ ಕಾರ್ಯಕ್ರಮಗಳನ್ನು ಹಾಕಿಕೊಳ್ಳಲಾಗಿದ್ದು, ಇದರ ಪೈಕಿ ಪ್ರಾಚೀನ ದೇವಸ್ಥಾನಗಳ ಸ್ವಚ್ಛತೆ ಕೈಗೊಳ್ಳಲಾಗುತ್ತಿದೆ.ಬ್ರಿಗೇಡ್‌ನ ಯುವಕರು ಸ್ವಾತಂತ್ರ್ಯ ಪೂರ್ವದಲ್ಲಿ ಅಸ್ತಿತ್ವದಲ್ಲಿದ್ದ ದೇವಸ್ಥಾನಗಳೆಲ್ಲವನ್ನು ಸ್ವಚ್ಛಗೊಳಿಸುವ ವಿಸ್ತೃತ ಯೋಜನೆ ಹಮ್ಮಿಕೊಂಡಿದ್ದಾರೆ. ಆಗಸ್ಟ್ ತಿಂಗಳಿನಿಂದ ಆರಂಭಗೊಂಡ ಅಭಿಯಾನ ಬರುವ ವರ್ಷದ ಆಗಸ್ಟ್ 15 ರವರೆಗೆ ಜಾರಿಯಲ್ಲಿರುತ್ತದೆ ಎಂದರು.

ಯುವ ಬ್ರಿಗೇಡ್ ಸಂಪರ್ಕ ಪ್ರಮುಖ ವೆಂಕಟೇಶ ಕಲಬುರ್ಗಿ ಮಾತನಾಡಿದರು.ನಿತೀಶಕುಮಾರ ಜಕಾತಿ, ಸಿದ್ದಲಿಂಗರೆಡ್ಡಿ ನಾಯ್ಕಲ್, ನಿಖಿಲ್ ಪಾಟೀಲ, ವಿಠಲ್ ಕುಲಕಣಿ, ಡಾ.ನಾಗರಾಜ, ಡಾ.ಶಿವಕುಮಾರ, ರಘು ಕುಮಾರ ಖಾನಾಪುರ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT