‘300 ವರ್ಷಗಳಷ್ಟು ಹಳೆಯ ಖಬರಸ್ತಾನ ಜಾಗದಲ್ಲಿ ಬೆಳೆದಿದ್ದ ಜಾಲಿಕಂಟಿ ಗಿಡಗಳನ್ನು ಕಡಿದು ಸ್ವಚ್ಛಗೊಳಿಸಿದ್ದು, ಅಲ್ಲಿರುವ ಹಳೆಯ ಗೋರಿಗಳನ್ನು ತೆರವುಗೊಳಿಸುವ ಮೂಲಕ ಸಂಪೂರ್ಣ ಖಬರಸ್ತಾನ ಜಾಗವನ್ನು ಕಬಳಿಸಲು ಹುನ್ನಾರ ನಡೆಸುತ್ತಿದ್ದಾರೆ. ಇದನ್ನು ತಹಶೀಲ್ದಾರ್ ಅವರ ಗಮನಕ್ಕೆ ತಂದಿದ್ದು, ಸ್ಪಂದಿಸುತ್ತಿಲ್ಲ’ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.