<p><span style="font-size: 26px;">ಯಾದಗಿರಿ: ಸುಮಾರು ರೂ.3 ಕೋಟಿ ವೆಚ್ಚದಲ್ಲಿ ಪೂರ್ಣಗೊಂಡಿರುವ ಯೋಜನೆಯಿಂದ ಕೊನೆಗೂ ಗ್ರಾಮಸ್ಥರು ನೀರು ಪಡೆಯುವ ದಿನಗಳ ಬಂದಂತಾಗಿದೆ. ಸಮೀಪದ ಕಂದಳ್ಳಿಯಲ್ಲಿ ಭೀಮಾ ಬ್ಯಾರೇಜ್ನಿಂದ ಮೂರು ಹಳ್ಳಿಗಳಿಗೆ ನೀರು ಪೂರೈಸುವ ಈ ಯೋಜನೆ ಪೂರ್ಣಗೊಂಡು ವರ್ಷಗಳೇ ಕಳೆದಿದ್ದರೂ, ಇದೀಗ ಜಿಲ್ಲಾ ಪಂಚಾಯಿತಿ ಸಿಇಒ ಎಸ್.ಎ. ಜಲಾನಿ ಅವರ ಭೇಟಿಯಿಂದಾಗಿ ಗ್ರಾಮಗಳ ಜನರಿಗೆ ನೀರು ಸಿಗುವ ಭರವಸೆ ಮೂಡಿದೆ.</span><br /> <br /> ಗುರುವಾರ ಕಂದಳ್ಳಿ ಬಳಿ ಇರುವ ಭೀಮಾ ಬ್ಯಾರೇಜ್ನಿಂದ ನೀರು ಪೂರೈಕೆ ಮಾಡುವ ಯೋಜನೆ ಸ್ಥಳಕ್ಕೆ ಭೇಟಿ ನೀಡಿದ ಎಸ್.ಎ. ಜಿಲಾನಿ,<br /> ಮಂಗಳವಾರದ ಒಳಗೆ ಕೋನಳ್ಳಿ, ಕಂದಳ್ಳಿ ಹಾಗೂ ವಡಗೇರಾ ಗ್ರಾಮಗಳಿಗೆ ಶುದ್ಧೀಕರಿಸಿದ ಕುಡಿಯುವ ನೀರನ್ನು ಒದಗಿಸುವಂತೆ ಅಧಿಕಾರಿಗಳಿಗೆ ಆದೇಶ ನೀಡಿದರು.<br /> <br /> ಕುಡಿಯುವ ನೀರಿನ ಬಗ್ಗೆ ಅನೇಕ ಬಾರಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಅಧಿಕಾರಿಗಳಿಗೆ ಕುಡಿಯುವ ನೀರಿನ ಸಮಸ್ಯೆ ಹೇಳಿದರೆ ಹಾರಿಕೆ ಉತ್ತರ ಕೊಡುತ್ತಾರೆ ಎಂದು ಸ್ಥಳದಲ್ಲಿ ಜಮಾಯಿಸಿದ್ದ ಸಾರ್ವಜನಿಕರು ದೂರಿದರು.<br /> <br /> ಇದರಿಂದ ಕೆಂಡಾಮಂಡಲವಾದ ಜಿಲಾನಿ, ಅಧಿಕಾರಿಗಳ ಮೇಲೆ ಹರಿಹಾಯ್ದರು. ನಿಗದಿ ಪಡಿಸಿದ ದಿನದಂದು ಈ ಗ್ರಾಮಗಳಿಗೆ ಕುಡಿಯುವ ನೀರು ಸರಬರಾಜು ಮಾಡದಿದ್ದರೆ, ಅಂತಹ ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು. ಸಾರ್ವಜನಿಕರ ಜೊತೆಗೆ ಸ್ಥಳದಲ್ಲಿಯೇ ವಾಸ್ತವ್ಯ ಮಾಡುವುದಾಗಿ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.<br /> <br /> ಕಂದಳ್ಳಿ ಗ್ರಾಮಸ್ಥರು, ನಮಗೆ ಬ್ಯಾರೇಜ್ ನೀರು ಬೇಡ. ಭೀಮಾ ನದಿಯ ಪಕ್ಕದಲ್ಲಿ ಕೊಳವೆಬಾವಿ ಹಾಕಿಸಿಕೊಡಿ ಸಾಕು. ಆ ನೀರನ್ನೇ ನಾವು ಕುಡಿಯಲು ಬಳಕೆ ಮಾಡಿಕೊಳ್ಳುತ್ತೇವೆ ಎಂದು ಹೇಳಿದರು. ನಾಳೆಯೊಳಗೆ ಈ ಕೆಲಸ ಮಾಡಿ ವರದಿ ನೀಡುವಂತೆ ಸ್ಥಳದಲ್ಲಿದ್ದ ತಾಲ್ಲೂಕು ಪಂಚಾಯಿತಿ ಅಧಿಕಾರಿಗಳಿಗೆ ಸೂಚಿಸಿದರು.<br /> <br /> ಕೋನಳ್ಳಿ ಗ್ರಾಮದಲ್ಲಿ ನೀರು ಶುದ್ಧೀಕರಣ ಘಟಕ ಸ್ಥಾಪಿಸಬೇಕು. ಅದೇ ರೀತಿಯಾಗಿ ವಡಗೇರಾ ಗ್ರಾಮದಲ್ಲಿ ಮೂರು ಶುದ್ಧೀಕರಣ ಘಟಕಗಳನ್ನು ಸ್ಥಾಪಿಸಿ ಬ್ಯಾರೇಜ್ನಿಂದ ಬರುವ ನೀರನ್ನು ಈ ಘಟಕಗಳಲ್ಲಿ ಶುದ್ಧೀಕರಿಸಿ, ಸರಬರಾಜು ಮಾಡಬೇಕು ಎಂದು ಸೂಚನೆ ನೀಡಿದರು.<br /> <br /> ನೀರು ಬಿಡಲು ಸಕಾಲದಲ್ಲಿ ವಿದ್ಯುತ್ ಇರುವುದಿಲ್ಲ. ಇದರಿಂದಾಗಿ ಕುಡಿಯುವ ನೀರಿಗೆ ಸಮಸ್ಯೆಯಾಗುತ್ತಿದೆೆ ಎಂದು ಅಧಿಕಾರಿಗಳು ಗಮನ ಸೆಳೆದರು. ಕೂಡಲೇ ಜೆಸ್ಕಾಂ ಅಧಿಕಾರಿಗಳು ಕರೆಯಿರಿ ಎಂದಾಗ, ಸ್ಥಳದಲ್ಲಿ ಯಾವೊಬ್ಬ ಜೆಸ್ಕಾಂ ಅಧಿಕಾರಿಗಳು ಇರಲಿಲ್ಲ.<br /> <br /> ದಿನದ 24 ಗಂಟೆ ವಿದ್ಯುತ್ ನಿರಂತರ ವಿದ್ಯುತ್ ಸರಬರಾಜು ಮಾಡಲು ಕ್ರಮ ಕೈಗೊಳ್ಳುವಂತೆ ಜೆಸ್ಕಾಂ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡುವಂತೆ ಅಧಿಕಾರಿಗಳಿಗೆ ತಿಳಿಸಿದರು.<br /> <br /> ಜಿಲ್ಲಾ ಪಂಚಾಯಿತಿ ಅಧಿಕಾರಿಗಳು, ಪಂಚಾಯತ್ ರಾಜ್ ಎಂಜಿನಿಯರಿಂಗ್ನ ಅಧಿಕಾರಿಗಳು, ತಾಲ್ಲೂಕು ಪಂಚಾಯಿತಿ ಅಧಿಕಾರಿಗಳು, ಮೂರು ಗ್ರಾಮಗಳ ಜನರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><span style="font-size: 26px;">ಯಾದಗಿರಿ: ಸುಮಾರು ರೂ.3 ಕೋಟಿ ವೆಚ್ಚದಲ್ಲಿ ಪೂರ್ಣಗೊಂಡಿರುವ ಯೋಜನೆಯಿಂದ ಕೊನೆಗೂ ಗ್ರಾಮಸ್ಥರು ನೀರು ಪಡೆಯುವ ದಿನಗಳ ಬಂದಂತಾಗಿದೆ. ಸಮೀಪದ ಕಂದಳ್ಳಿಯಲ್ಲಿ ಭೀಮಾ ಬ್ಯಾರೇಜ್ನಿಂದ ಮೂರು ಹಳ್ಳಿಗಳಿಗೆ ನೀರು ಪೂರೈಸುವ ಈ ಯೋಜನೆ ಪೂರ್ಣಗೊಂಡು ವರ್ಷಗಳೇ ಕಳೆದಿದ್ದರೂ, ಇದೀಗ ಜಿಲ್ಲಾ ಪಂಚಾಯಿತಿ ಸಿಇಒ ಎಸ್.ಎ. ಜಲಾನಿ ಅವರ ಭೇಟಿಯಿಂದಾಗಿ ಗ್ರಾಮಗಳ ಜನರಿಗೆ ನೀರು ಸಿಗುವ ಭರವಸೆ ಮೂಡಿದೆ.</span><br /> <br /> ಗುರುವಾರ ಕಂದಳ್ಳಿ ಬಳಿ ಇರುವ ಭೀಮಾ ಬ್ಯಾರೇಜ್ನಿಂದ ನೀರು ಪೂರೈಕೆ ಮಾಡುವ ಯೋಜನೆ ಸ್ಥಳಕ್ಕೆ ಭೇಟಿ ನೀಡಿದ ಎಸ್.ಎ. ಜಿಲಾನಿ,<br /> ಮಂಗಳವಾರದ ಒಳಗೆ ಕೋನಳ್ಳಿ, ಕಂದಳ್ಳಿ ಹಾಗೂ ವಡಗೇರಾ ಗ್ರಾಮಗಳಿಗೆ ಶುದ್ಧೀಕರಿಸಿದ ಕುಡಿಯುವ ನೀರನ್ನು ಒದಗಿಸುವಂತೆ ಅಧಿಕಾರಿಗಳಿಗೆ ಆದೇಶ ನೀಡಿದರು.<br /> <br /> ಕುಡಿಯುವ ನೀರಿನ ಬಗ್ಗೆ ಅನೇಕ ಬಾರಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಅಧಿಕಾರಿಗಳಿಗೆ ಕುಡಿಯುವ ನೀರಿನ ಸಮಸ್ಯೆ ಹೇಳಿದರೆ ಹಾರಿಕೆ ಉತ್ತರ ಕೊಡುತ್ತಾರೆ ಎಂದು ಸ್ಥಳದಲ್ಲಿ ಜಮಾಯಿಸಿದ್ದ ಸಾರ್ವಜನಿಕರು ದೂರಿದರು.<br /> <br /> ಇದರಿಂದ ಕೆಂಡಾಮಂಡಲವಾದ ಜಿಲಾನಿ, ಅಧಿಕಾರಿಗಳ ಮೇಲೆ ಹರಿಹಾಯ್ದರು. ನಿಗದಿ ಪಡಿಸಿದ ದಿನದಂದು ಈ ಗ್ರಾಮಗಳಿಗೆ ಕುಡಿಯುವ ನೀರು ಸರಬರಾಜು ಮಾಡದಿದ್ದರೆ, ಅಂತಹ ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು. ಸಾರ್ವಜನಿಕರ ಜೊತೆಗೆ ಸ್ಥಳದಲ್ಲಿಯೇ ವಾಸ್ತವ್ಯ ಮಾಡುವುದಾಗಿ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.<br /> <br /> ಕಂದಳ್ಳಿ ಗ್ರಾಮಸ್ಥರು, ನಮಗೆ ಬ್ಯಾರೇಜ್ ನೀರು ಬೇಡ. ಭೀಮಾ ನದಿಯ ಪಕ್ಕದಲ್ಲಿ ಕೊಳವೆಬಾವಿ ಹಾಕಿಸಿಕೊಡಿ ಸಾಕು. ಆ ನೀರನ್ನೇ ನಾವು ಕುಡಿಯಲು ಬಳಕೆ ಮಾಡಿಕೊಳ್ಳುತ್ತೇವೆ ಎಂದು ಹೇಳಿದರು. ನಾಳೆಯೊಳಗೆ ಈ ಕೆಲಸ ಮಾಡಿ ವರದಿ ನೀಡುವಂತೆ ಸ್ಥಳದಲ್ಲಿದ್ದ ತಾಲ್ಲೂಕು ಪಂಚಾಯಿತಿ ಅಧಿಕಾರಿಗಳಿಗೆ ಸೂಚಿಸಿದರು.<br /> <br /> ಕೋನಳ್ಳಿ ಗ್ರಾಮದಲ್ಲಿ ನೀರು ಶುದ್ಧೀಕರಣ ಘಟಕ ಸ್ಥಾಪಿಸಬೇಕು. ಅದೇ ರೀತಿಯಾಗಿ ವಡಗೇರಾ ಗ್ರಾಮದಲ್ಲಿ ಮೂರು ಶುದ್ಧೀಕರಣ ಘಟಕಗಳನ್ನು ಸ್ಥಾಪಿಸಿ ಬ್ಯಾರೇಜ್ನಿಂದ ಬರುವ ನೀರನ್ನು ಈ ಘಟಕಗಳಲ್ಲಿ ಶುದ್ಧೀಕರಿಸಿ, ಸರಬರಾಜು ಮಾಡಬೇಕು ಎಂದು ಸೂಚನೆ ನೀಡಿದರು.<br /> <br /> ನೀರು ಬಿಡಲು ಸಕಾಲದಲ್ಲಿ ವಿದ್ಯುತ್ ಇರುವುದಿಲ್ಲ. ಇದರಿಂದಾಗಿ ಕುಡಿಯುವ ನೀರಿಗೆ ಸಮಸ್ಯೆಯಾಗುತ್ತಿದೆೆ ಎಂದು ಅಧಿಕಾರಿಗಳು ಗಮನ ಸೆಳೆದರು. ಕೂಡಲೇ ಜೆಸ್ಕಾಂ ಅಧಿಕಾರಿಗಳು ಕರೆಯಿರಿ ಎಂದಾಗ, ಸ್ಥಳದಲ್ಲಿ ಯಾವೊಬ್ಬ ಜೆಸ್ಕಾಂ ಅಧಿಕಾರಿಗಳು ಇರಲಿಲ್ಲ.<br /> <br /> ದಿನದ 24 ಗಂಟೆ ವಿದ್ಯುತ್ ನಿರಂತರ ವಿದ್ಯುತ್ ಸರಬರಾಜು ಮಾಡಲು ಕ್ರಮ ಕೈಗೊಳ್ಳುವಂತೆ ಜೆಸ್ಕಾಂ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡುವಂತೆ ಅಧಿಕಾರಿಗಳಿಗೆ ತಿಳಿಸಿದರು.<br /> <br /> ಜಿಲ್ಲಾ ಪಂಚಾಯಿತಿ ಅಧಿಕಾರಿಗಳು, ಪಂಚಾಯತ್ ರಾಜ್ ಎಂಜಿನಿಯರಿಂಗ್ನ ಅಧಿಕಾರಿಗಳು, ತಾಲ್ಲೂಕು ಪಂಚಾಯಿತಿ ಅಧಿಕಾರಿಗಳು, ಮೂರು ಗ್ರಾಮಗಳ ಜನರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>