ಗುರುವಾರ ಈ ಕುರಿತು ಹೇಳಿಕೆ ನೀಡಿದ ಅವರು, ‘ನನಗೆ 43 ಸಾವಿರಕ್ಕೂ ಹೆಚ್ಚು ಮತಗಳು ಬಿದ್ದಿವೆ. ಇಷ್ಟೊಂದು ಮತದಾರರು ನನ್ನ ಮೇಲೆ ವಿಶ್ವಾಸವಿಟ್ಟು ಮತ ಹಾಕಿದ್ದಾರೆ. ಕಳೆದ ಐದು ವರ್ಷದಲ್ಲಿ ಕ್ಷೇತ್ರದಲ್ಲಿ ಹಲವಾರು ಹೆಜ್ಜೆ ಗುರುತು ಮೂಡಿಸುವ ಕೆಲಸ ಮಾಡಿದ್ದೇನೆ. ರೈತರ ಹಿತ ಕಾಪಾಡುವ ಉದ್ದೇಶದಿಂದ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ಹಲವು ಬಾರಿ →ಭಾಗವಹಿಸಿ, →ಬೇಸಿಗೆ ಹಂಗಾಮಿ ನಲ್ಲಿಯೂ →ಶಹಾಪುರ →ನಗರಕ್ಕೆ ಕಾಲುವೆ ಮೂಲಕ ನೀರು ಹರಿಸಿ ರೈತರ ಹಿತ ಕಾಪಾಡಿದ್ದೇನೆ. ಆದರೂ, ಗೆಲುವು ದೊರಕದಿದ್ದಾಗ ನಿರಾಶೆಯಾಗಿದೆ’ ಎಂದು ಅವರು ಬೇಸರ ವ್ಯಕ್ತಪಡಿಸಿದರು.