ಯಾದಗಿರಿ: ಜಿಲ್ಲೆಯಲ್ಲಿ ಬುಧವಾರ ಮಧ್ಯರಾತ್ರಿ ಸುರಿದ ಬಿರುಗಾಳಿ ಸಹಿತ ಮಳೆಗೆ ಮರಗಳು ಧರೆಗೆ ಉದುರಿ ಬಿದ್ದಿವೆ. ಇದರಿಂದ ರಸ್ತೆಯಲ್ಲಿ ಪ್ರಯಾಣಿಕರು ಪರದಾಡಿದರು.
ನಗರದಲ್ಲಿ ಮಧ್ಯರಾತ್ರಿ ಸುಮಾರು 1 ಗಂಟೆಗೆ ಸುರಿದ ಮಳೆಗೆ ಅಲ್ಲಲ್ಲಿ ಮರಗಳು ರಸ್ತೆಗೆ ಬಿದ್ದಿವೆ.
ನಗರದ ರೈಲ್ವೆ ಸ್ಟೇಷನ್ಗೆ ತೆರಳುವ ಮಾರ್ಗದ ಅರಣ್ಯ ಇಲಾಖೆಯ ಕಾಂಪೌಂಡ್ನಲ್ಲಿ ಇದ್ದ ಭಾರಿ ಗಾತ್ರದ ಮರ ರಸ್ತೆಯ ಮೇಲೆ ಉರುಳಿ ಬಿದ್ದಿದೆ. ಇದರಿಂದಾಗಿ ಸಾರ್ವಜನಿಕರು ತುಂಬಾ ತೊಂದರೆ ಅನುಭವಿಸಬೇಕಾಯಿತು.
ಭಾರಿ ಬಿರುಗಾಳಿ, ಗುಡುಗು ಸಹಿತ ಮಳೆಗೆ ಗ್ರಾಮೀಣ ಭಾಗದಲ್ಲಿ ಪತ್ರಾಸ್ಗಳು ಹಾರಿವೆ.
ವಡಗೇರಾ ತಾಲ್ಲೂಕಿನ ನಾಯ್ಕಲ್ ಮತ್ತು ಗುರುಸಣಗಿ ಕ್ರಾಸ್ ಬಳಿ ಮರಗಳು ಬಿದ್ದಿವೆ.
ಜಿಲ್ಲೆಯಲ್ಲಿ ಮೋಡ ಕವಿದ ವಾತಾವರಣ ಇದ್ದು, ತಂಪಿನ ವಾತಾವರಣ ನಿರ್ಮಾಣವಾಗಿದೆ.