<p><strong>ಯಾದಗಿರಿ: </strong>ದೇಶದ ದೇವಾಲಯಗಳು ಪ್ರಸ್ತುತ ದಿನಗಳಲ್ಲಿ ವ್ಯಾಪಾರ ಕೇಂದ್ರಗಳಾಗಿವೆ ಎಂದು ಹಿರಿಯ ಸಾಹಿತಿ ಲಿಂಗಣ್ಣ ಸತ್ಯಂಪೇಟ್ ವಿಷಾದಿಸಿದರು. <br /> <br /> ವಲಯ ವೀರಶೈವ ಸಮಾಜದ ವತಿಯಿಂದ ಮಂಗಳವಾರ ಸಂಜೆ ತಾಲ್ಲೂಕಿನ ಸೈದಾಪುರದಲ್ಲಿ ಹಮ್ಮಿಕೊಂಡಿದ್ದ ಬಸವ ಜಯಂತಿಯ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಅವರು ವಿಶೇಷ ಉಪನ್ಯಾಸ ನೀಡಿದರು.<br /> <br /> ಜಗತ್ತಿನಲ್ಲಿಯೇ ಭಾರತದ ದೇವಾಲಯಗಳು ಅತ್ಯಂತ ಶ್ರೀಮಂತ ದೇವಸ್ಥಾನಗಳಾಗಿವೆ. ದೇಶದ ರಾಜಕಾರಣಿಗಳು ಭ್ರಷ್ಟಾಚಾರದಿಂದ ಗಳಿಸಿದ ಹಣವನ್ನು ಒಳ್ಳೆಯ ಕೆಲಸಗಳಿಗೆ ಉಪಯೋಗಿಸದೇ ಹೆಚ್ಚಿನ ಪ್ರಮಾಣದಲ್ಲಿ ದೇವಸ್ಥಾನಗಳಿಗೆ ನೀಡುತ್ತಿರುವುದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.<br /> <br /> ಸ್ಪರ್ಧಾತ್ಮಕ ಯುಗದಲ್ಲಿರುವ ನಾವು ಎಲ್ಲ ರಂಗಗಳಲ್ಲೂ ಪ್ರಗತಿ ಸಾಧಿಸುತ್ತಿದ್ದೇವೆ. ಆದರೂ ಗ್ರಾಮೀಣ ಜನತೆ ಇನ್ನೂ ಮೂಢನಂಬಿಕೆ, ಅಂಧಾಚರಣೆ ಮಾಡುತ್ತಿರುವುದು ಆತಂಕಕಾರಿ ವಿಷಯ. ಇಂತಹ ಜನರಲ್ಲಿ ಕ್ರಾಂತಿಯೋಗಿ ಬಸವಣ್ಣನವರ ತತ್ವ-ಸಿದ್ಧಾಂತಗಳ ಬಗ್ಗೆ ಜಾಗೃತಿ ಮೂಡಿಸಿದಲ್ಲಿ ಮಾತ್ರ ಸದೃಢ ಸಮಾಜ ನಿರ್ಮಾಣ ಮಾಡಲು ಸಾಧ್ಯ ಎಂದು ಅಭಿಪ್ರಾಯಪಟ್ಟರು. <br /> <br /> ದೇವರ ಎಲ್ಲೆಡೆ ಇದ್ದಾನೆ. ಪ್ರತಿಯೊಬ್ಬರ ಮನಸ್ಸಿನಲ್ಲಿ ಒಂದು ದೈವತ್ವ ಶಕ್ತಿ ಇದೆ. ಅದನ್ನು ಜಾಗೃತಗೊಳಿಸುತ್ತ ಎಲ್ಲರೂ ತಮ್ಮ ವ್ಯಕ್ತಿತ್ವ, ನಡವಳಿಕೆ ಕಾರ್ಯಗಳಿಂದ ಆತ್ಮಸಾಕ್ಷಿಯಾಗಿ ಕ್ರಿಯಾಶೀಲ ಬದುಕನ್ನು ನಡೆಸಿದಲ್ಲಿ ಮಾತ್ರ ಪ್ರಗತಿ ಸಾಧಿಸಬಹುದು ಎಂದು ಹೇಳಿದರು. <br /> <br /> ಬಸವಣ್ಣ ಎಲ್ಲ ವರ್ಗದ ಜನರಲ್ಲಿ ಸಮಾನತೆ ಮೂಡಿಸಿದರು. ಆದರೆ ಪ್ರಸಕ್ತ ದಿನಗಳಲ್ಲಿ ವೀರಶೈವ ಸಮಾಜದಲ್ಲಿ ಉಪ ಜಾತಿಗಳನ್ನು ಸೃಷ್ಟಿಸಿ ಭೇದ-ಭಾವ ಮಾಡುತ್ತಿರುವುದು ಸರಿಯಲ್ಲ. ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ತೊಡಕಾಗುತ್ತದೆ ಎಂದು ಅಭಿಪ್ರಾಯಪಟ್ಟರು. <br /> <br /> ವೀರಶೈವ ಮುಖಂಡ ಶಿವಣ್ಣ ಇಜೇರಿ ಮಾತನಾಡಿ, ಹಿಂದಿನಿಂದಲೂ ಶರಣರು ನಡೆಸಿಕೊಂಡು ಬಂದಿರುವ ಅನ್ನದಾಸೋಹ ಪದ್ಧತಿಯನ್ನು ಬಸವ ಅನುಯಾಯಿಗಳು ಮುಂದುವರಿಸಿಕೊಂಡು ಹೋಗಬೇಕು ಎಂದು ಸಲಹೆ ಮಾಡಿದರು. <br /> <br /> ಜಗತ್ತಿಗೆ ಕಾಯಕ ಸಂಸ್ಕೃತಿ ನೀಡಿದ ವ್ಯಕ್ತಿ ಬಸವಣ್ಣ. ಬಸವ ಸಾಹಿತ್ಯದಿಂದ ಬದುಕಿಗೆ ಚೈತನ್ಯ ಪಡೆಯಬಹುದು ಎಂದು ಹೇಳಿದರು.<br /> <br /> ಆನಂದ ಶಾಸ್ತ್ರಿಗಳು, ಚೆನ್ನಬಸವ ಶಾಸ್ತ್ರಿಗಳು ಪ್ರವಚನ ನಡೆಸಿಕೊಟ್ಟರು. ರಾಯಚೂರಿನ ಸೋಮವಾರ ಪೇಟ ಹಿರೇಮಠದ ಅಭಿನವ ರಾಚೋಟಿವೀರ ಶಿವಾಚಾರ್ಯ ಸ್ವಾಮೀಜಿ ನೇತೃತ್ವ ಹಾಗೂ ಕಡೇಚೂರ ಸಂಸ್ಥಾನ ಮಠದ ಗುರುಮೂರ್ತಿ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. <br /> <br /> ಪ್ರಾಂಶುಪಾಲ ಜಿ.ಎಂ. ಗುರುಪ್ರಸಾದ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ನೂರಾರು ಜನ ಭಾಗವಹಿಸಿದ್ದರು. <br /> <br /> <strong>ಅದ್ದೂರಿ ಬಸವ ಜಯಂತಿ:</strong> ತಾಲ್ಲೂಕಿನ ಸೈದಾಪುರದಲ್ಲಿ ಅಖಿಲ ಭಾರತ ವೀರಶೈವ ಸಮಾಜ ವಲಯ ಘಟಕದಿಂದ ಮಂಗಳವಾರ ಸಂಜೆ ಬಸವ ಜಯಂತಿ ಅಂಗವಾಗಿ ಬಸವೇಶ್ವರರ ಭಾವಚಿತ್ರದ ಮೆರವಣಿಗೆ ಅದ್ದೂರಿಯಾಗಿ ನಡೆಯಿತು. <br /> <br /> ಗಂಜ್ ಆವರಣದಿಂದ ಹೊರಟ ಮೆರವಣಿಗೆ, ವಿಶ್ವನಾಥ ಮಂದಿರದವರೆಗೆ ನಡೆಯಿತು. ಮೆರವಣಿಗೆಯಲ್ಲಿ ಡೊಳ್ಳು, ಬಾಜಿ ಭಜಂತ್ರಿ, ಹಲಗೆ ಮುಂತಾದ ಮಂಗಲವಾದ್ಯಗಳು ಗಮನಸೆಳೆದವು. ಬಸವ ಅನುಯಾಯಿಗಳು ಪಟಾಕಿ ಸಿಡಿಸಿ ಸಂಭ್ರಮಿಸಿದರು.<br /> <br /> ಮೆರವಣಿಯಲ್ಲಿ ವಲಯ ವೀರಶೈವ ಸಮಾಜದ ಅಧ್ಯಕ್ಷ ಬಸವರಾಜಪ್ಪಗೌಡ ಗೊಂದೆಡಗಿ, ಭೀಮರಡ್ಡಿ ಶೆಟ್ಟಿಹಳ್ಳಿ, ಬಸವರಾಜಸ್ವಾಮಿ ಬದ್ದೇಪಲ್ಲಿ, ಮಲ್ಲರಡ್ಡಿಗೌಡ ಕಣೇಕಲ್, ಮಲ್ಲಣಗೌಡ ಕ್ಯಾತನಾಳ, ಶರಣಗೌಡ ಗೊಂದಡಗಿ, ಸಿದ್ಧನಗೌಡ ಕಡೇಚೂರ, ಪ್ರಕಾಶ ಪಾಟೀಲ ಸೈದಾಪೂರ, ಬಸವಂತರಾಯಗೌಡ ಪಾಟೀಲ,<br /> <br /> ಬಸವಲಿಂಗಪ್ಪಗೌಡ ಕೂಡ್ಲೂರ, ಎಪಿಎಂಸಿ ನಿರ್ದೇಶಕ ಭೀಮನಗೌಡ ಕ್ಯಾತನಾಳ, ಚಂದ್ರಾಯಗೌಡ, ಸೂಗುರಪ್ಪ ಸಾಹುಕಾರ, ಭೀಮಣಗೌಡ ಕೂಡ್ಲೂರ, ಬಸವರಾಜಪ್ಪಗೌಡ ಸೌರಾಷ್ಟ್ರಹಳ್ಳಿ, ಶಂಕ್ರಪ್ಪಗೌಡ ಬಳಿಚಕ್ರ, ಬಸವರಾಜ ಸ್ವಾಮಿ ಈಡ್ಲೂರ, ಬಸವರಾಜಪ್ಪಗೌಡ ಬೆಳಗುಂದಿ ಸೇರಿದಂತೆ ನೂರಾರು ಜನ ಭಾಗವಹಿಸಿದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಾದಗಿರಿ: </strong>ದೇಶದ ದೇವಾಲಯಗಳು ಪ್ರಸ್ತುತ ದಿನಗಳಲ್ಲಿ ವ್ಯಾಪಾರ ಕೇಂದ್ರಗಳಾಗಿವೆ ಎಂದು ಹಿರಿಯ ಸಾಹಿತಿ ಲಿಂಗಣ್ಣ ಸತ್ಯಂಪೇಟ್ ವಿಷಾದಿಸಿದರು. <br /> <br /> ವಲಯ ವೀರಶೈವ ಸಮಾಜದ ವತಿಯಿಂದ ಮಂಗಳವಾರ ಸಂಜೆ ತಾಲ್ಲೂಕಿನ ಸೈದಾಪುರದಲ್ಲಿ ಹಮ್ಮಿಕೊಂಡಿದ್ದ ಬಸವ ಜಯಂತಿಯ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಅವರು ವಿಶೇಷ ಉಪನ್ಯಾಸ ನೀಡಿದರು.<br /> <br /> ಜಗತ್ತಿನಲ್ಲಿಯೇ ಭಾರತದ ದೇವಾಲಯಗಳು ಅತ್ಯಂತ ಶ್ರೀಮಂತ ದೇವಸ್ಥಾನಗಳಾಗಿವೆ. ದೇಶದ ರಾಜಕಾರಣಿಗಳು ಭ್ರಷ್ಟಾಚಾರದಿಂದ ಗಳಿಸಿದ ಹಣವನ್ನು ಒಳ್ಳೆಯ ಕೆಲಸಗಳಿಗೆ ಉಪಯೋಗಿಸದೇ ಹೆಚ್ಚಿನ ಪ್ರಮಾಣದಲ್ಲಿ ದೇವಸ್ಥಾನಗಳಿಗೆ ನೀಡುತ್ತಿರುವುದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.<br /> <br /> ಸ್ಪರ್ಧಾತ್ಮಕ ಯುಗದಲ್ಲಿರುವ ನಾವು ಎಲ್ಲ ರಂಗಗಳಲ್ಲೂ ಪ್ರಗತಿ ಸಾಧಿಸುತ್ತಿದ್ದೇವೆ. ಆದರೂ ಗ್ರಾಮೀಣ ಜನತೆ ಇನ್ನೂ ಮೂಢನಂಬಿಕೆ, ಅಂಧಾಚರಣೆ ಮಾಡುತ್ತಿರುವುದು ಆತಂಕಕಾರಿ ವಿಷಯ. ಇಂತಹ ಜನರಲ್ಲಿ ಕ್ರಾಂತಿಯೋಗಿ ಬಸವಣ್ಣನವರ ತತ್ವ-ಸಿದ್ಧಾಂತಗಳ ಬಗ್ಗೆ ಜಾಗೃತಿ ಮೂಡಿಸಿದಲ್ಲಿ ಮಾತ್ರ ಸದೃಢ ಸಮಾಜ ನಿರ್ಮಾಣ ಮಾಡಲು ಸಾಧ್ಯ ಎಂದು ಅಭಿಪ್ರಾಯಪಟ್ಟರು. <br /> <br /> ದೇವರ ಎಲ್ಲೆಡೆ ಇದ್ದಾನೆ. ಪ್ರತಿಯೊಬ್ಬರ ಮನಸ್ಸಿನಲ್ಲಿ ಒಂದು ದೈವತ್ವ ಶಕ್ತಿ ಇದೆ. ಅದನ್ನು ಜಾಗೃತಗೊಳಿಸುತ್ತ ಎಲ್ಲರೂ ತಮ್ಮ ವ್ಯಕ್ತಿತ್ವ, ನಡವಳಿಕೆ ಕಾರ್ಯಗಳಿಂದ ಆತ್ಮಸಾಕ್ಷಿಯಾಗಿ ಕ್ರಿಯಾಶೀಲ ಬದುಕನ್ನು ನಡೆಸಿದಲ್ಲಿ ಮಾತ್ರ ಪ್ರಗತಿ ಸಾಧಿಸಬಹುದು ಎಂದು ಹೇಳಿದರು. <br /> <br /> ಬಸವಣ್ಣ ಎಲ್ಲ ವರ್ಗದ ಜನರಲ್ಲಿ ಸಮಾನತೆ ಮೂಡಿಸಿದರು. ಆದರೆ ಪ್ರಸಕ್ತ ದಿನಗಳಲ್ಲಿ ವೀರಶೈವ ಸಮಾಜದಲ್ಲಿ ಉಪ ಜಾತಿಗಳನ್ನು ಸೃಷ್ಟಿಸಿ ಭೇದ-ಭಾವ ಮಾಡುತ್ತಿರುವುದು ಸರಿಯಲ್ಲ. ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ತೊಡಕಾಗುತ್ತದೆ ಎಂದು ಅಭಿಪ್ರಾಯಪಟ್ಟರು. <br /> <br /> ವೀರಶೈವ ಮುಖಂಡ ಶಿವಣ್ಣ ಇಜೇರಿ ಮಾತನಾಡಿ, ಹಿಂದಿನಿಂದಲೂ ಶರಣರು ನಡೆಸಿಕೊಂಡು ಬಂದಿರುವ ಅನ್ನದಾಸೋಹ ಪದ್ಧತಿಯನ್ನು ಬಸವ ಅನುಯಾಯಿಗಳು ಮುಂದುವರಿಸಿಕೊಂಡು ಹೋಗಬೇಕು ಎಂದು ಸಲಹೆ ಮಾಡಿದರು. <br /> <br /> ಜಗತ್ತಿಗೆ ಕಾಯಕ ಸಂಸ್ಕೃತಿ ನೀಡಿದ ವ್ಯಕ್ತಿ ಬಸವಣ್ಣ. ಬಸವ ಸಾಹಿತ್ಯದಿಂದ ಬದುಕಿಗೆ ಚೈತನ್ಯ ಪಡೆಯಬಹುದು ಎಂದು ಹೇಳಿದರು.<br /> <br /> ಆನಂದ ಶಾಸ್ತ್ರಿಗಳು, ಚೆನ್ನಬಸವ ಶಾಸ್ತ್ರಿಗಳು ಪ್ರವಚನ ನಡೆಸಿಕೊಟ್ಟರು. ರಾಯಚೂರಿನ ಸೋಮವಾರ ಪೇಟ ಹಿರೇಮಠದ ಅಭಿನವ ರಾಚೋಟಿವೀರ ಶಿವಾಚಾರ್ಯ ಸ್ವಾಮೀಜಿ ನೇತೃತ್ವ ಹಾಗೂ ಕಡೇಚೂರ ಸಂಸ್ಥಾನ ಮಠದ ಗುರುಮೂರ್ತಿ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. <br /> <br /> ಪ್ರಾಂಶುಪಾಲ ಜಿ.ಎಂ. ಗುರುಪ್ರಸಾದ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ನೂರಾರು ಜನ ಭಾಗವಹಿಸಿದ್ದರು. <br /> <br /> <strong>ಅದ್ದೂರಿ ಬಸವ ಜಯಂತಿ:</strong> ತಾಲ್ಲೂಕಿನ ಸೈದಾಪುರದಲ್ಲಿ ಅಖಿಲ ಭಾರತ ವೀರಶೈವ ಸಮಾಜ ವಲಯ ಘಟಕದಿಂದ ಮಂಗಳವಾರ ಸಂಜೆ ಬಸವ ಜಯಂತಿ ಅಂಗವಾಗಿ ಬಸವೇಶ್ವರರ ಭಾವಚಿತ್ರದ ಮೆರವಣಿಗೆ ಅದ್ದೂರಿಯಾಗಿ ನಡೆಯಿತು. <br /> <br /> ಗಂಜ್ ಆವರಣದಿಂದ ಹೊರಟ ಮೆರವಣಿಗೆ, ವಿಶ್ವನಾಥ ಮಂದಿರದವರೆಗೆ ನಡೆಯಿತು. ಮೆರವಣಿಗೆಯಲ್ಲಿ ಡೊಳ್ಳು, ಬಾಜಿ ಭಜಂತ್ರಿ, ಹಲಗೆ ಮುಂತಾದ ಮಂಗಲವಾದ್ಯಗಳು ಗಮನಸೆಳೆದವು. ಬಸವ ಅನುಯಾಯಿಗಳು ಪಟಾಕಿ ಸಿಡಿಸಿ ಸಂಭ್ರಮಿಸಿದರು.<br /> <br /> ಮೆರವಣಿಯಲ್ಲಿ ವಲಯ ವೀರಶೈವ ಸಮಾಜದ ಅಧ್ಯಕ್ಷ ಬಸವರಾಜಪ್ಪಗೌಡ ಗೊಂದೆಡಗಿ, ಭೀಮರಡ್ಡಿ ಶೆಟ್ಟಿಹಳ್ಳಿ, ಬಸವರಾಜಸ್ವಾಮಿ ಬದ್ದೇಪಲ್ಲಿ, ಮಲ್ಲರಡ್ಡಿಗೌಡ ಕಣೇಕಲ್, ಮಲ್ಲಣಗೌಡ ಕ್ಯಾತನಾಳ, ಶರಣಗೌಡ ಗೊಂದಡಗಿ, ಸಿದ್ಧನಗೌಡ ಕಡೇಚೂರ, ಪ್ರಕಾಶ ಪಾಟೀಲ ಸೈದಾಪೂರ, ಬಸವಂತರಾಯಗೌಡ ಪಾಟೀಲ,<br /> <br /> ಬಸವಲಿಂಗಪ್ಪಗೌಡ ಕೂಡ್ಲೂರ, ಎಪಿಎಂಸಿ ನಿರ್ದೇಶಕ ಭೀಮನಗೌಡ ಕ್ಯಾತನಾಳ, ಚಂದ್ರಾಯಗೌಡ, ಸೂಗುರಪ್ಪ ಸಾಹುಕಾರ, ಭೀಮಣಗೌಡ ಕೂಡ್ಲೂರ, ಬಸವರಾಜಪ್ಪಗೌಡ ಸೌರಾಷ್ಟ್ರಹಳ್ಳಿ, ಶಂಕ್ರಪ್ಪಗೌಡ ಬಳಿಚಕ್ರ, ಬಸವರಾಜ ಸ್ವಾಮಿ ಈಡ್ಲೂರ, ಬಸವರಾಜಪ್ಪಗೌಡ ಬೆಳಗುಂದಿ ಸೇರಿದಂತೆ ನೂರಾರು ಜನ ಭಾಗವಹಿಸಿದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>