ಸೇತುವೆ ನಿರ್ಮಾಣ ಕಾಮಗಾರಿಗಾಗಿ ನದಿ ಬಳಿ ಸಂಗ್ರಹಿಸಿಡಲಾಗಿದ್ದ ಕಬ್ಬಿಣ ರಾಡು, 200 ಪ್ಲೇಟ್ ಹಾಗೂ 100 ಟ್ರಿಪ್ ಮರಳು ಸೇರಿದಂತೆ ಇತರೆ ಸಾಮಾಗ್ರಿಗಳು ನೀರಿನಲ್ಲಿ ಕೊಚ್ಚಿ ಹೋಗಿವೆ. ಹೀಗಾಗಿ ₹ 10 ಲಕ್ಷ ನಷ್ಟವಾಗಿದೆ ಎಂದು ಗುತ್ತಿಗೆದಾರ ಶಂಕರ ಚವ್ಹಾಣ ಆತಂಕ ತೋಡಿಕೊಂಡಿದ್ದಾರೆ.ಜನವರಿಯಲ್ಲಿ ಸೇತುವೆಯ ಸ್ತಂಭಗಳ ನಿರ್ಮಾಣ ಕಾಮಗಾರಿ ಆರಂಭವಾಗಿತ್ತು. ಜಲಾಶಯದಿಂದ ನದಿಗೆ ನೀರು ಹರಿದು ಬಂದಿದ್ದರಿಂದ ಕಾಮಗಾರಿಗೆ ಅಡ್ಡಿಯುಂಟಾಗಿ, ಭಾರಿ ನಷ್ಟವಾಗಿದೆ ಎಂದು ಅವರು ಅಳಲು ತೋಡಿಕೊಂಡರು.