<p>ಸುರಪುರ: ‘ವಿಶ್ವಕರ್ಮರಿಂದ ಕಲೆ ವಿಶ್ವವ್ಯಾಪ್ತಿಯಾಗಲು ಸಾಧ್ಯವಾಗಿದೆ. ಕಲ್ಲಿನಲ್ಲಿ ಚಿತ್ತಾರ ಬಿಡಿಸುವ ಶಿಲ್ಪಿಗಳ ಬದುಕು ಶೋಚನಿಯ ಸ್ಥಿತಿಯಲ್ಲಿದೆ. ವಿಶ್ವಕರ್ಮರ ಅಭಿವೃದ್ಧಿಗೆ ಸರ್ಕಾರ ಆದ್ಯ ಗಮನ ಹರಿಸಬೇಕು’ ಎಂದು ಆನೆಗುಂದಿ ಸಂಸ್ಥಾನದ ಸರಸ್ವತಿ ಪೀಠಾಧೀಶರಾದ ಗುರುನಾಥೇಂದ್ರ ಮಹಾಸ್ವಾಮಿ ಹೇಳಿದರು.<br /> <br /> ಪಟ್ಟಣದ ಕಾಳಿಕಾದೇವಿ ಮಂದಿರದಲ್ಲಿ ಮಂಗಳವಾರ ವಿಶ್ವಕರ್ಮ ವಿಕಾಸ ಸಂಘ ಹಾಗೂ ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾ ತಾಲ್ಲೂಕು ಘಟಕ ಸಂಯುಕ್ತವಾಗಿ ಏರ್ಪಡಿಸಿದ್ದ ಮೌನೇಶ್ವರರ 7ನೇ ವರ್ಷದ ತೊಟ್ಟಿಲೋತ್ಸವ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಮಾತನಾಡಿದರು.<br /> <br /> ಮಾಜಿ ಸಂಸದ ರಾಜಾ ರಂಗಪ್ಪನಾಯಕ ಉದ್ಘಾಟಿಸಿ ಮಾತನಾಡಿ, ‘ಬಡಿಗೇರ ಬಾವಿ ಹತ್ತಿರದ ವಿಶ್ವಕರ್ಮ ಸಮಾಜಕ್ಕೆ ಸೇರಿದ ನಿವೇಶನದಲ್ಲಿ ವಿಶ್ವಕರ್ಮ ಕಲ್ಯಾಣ ಮಂಟಪ ನಿರ್ಮಾಣಕ್ಕೆ ನನ್ನ ಸಹೋದರ ಶಾಸಕ ರಾಜಾ ವೆಂಕಟಪ್ಪನಾಯಕ ನೆರವಿನ ಭರವಸೆ ನೀಡಿದ್ದಾರೆ’ ಎಂದರು.<br /> <br /> ‘ನಮ್ಮಲ್ಲಿ ಯಾವುದೇ ಜಾತಿ ಧರ್ಮಗಳ ಭೇದಭಾವವಿಲ್ಲ. ನಾವು ಕಾಣುವುದು ಎರಡೇ ಜಾತಿ ನಮ್ಮೊಂದಿಗಿರುವವರು ಒಂದು ಜಾತಿ. ವಿರೋಧಿಗಳದು ಇನ್ನೊಂದು ಜಾತಿ’ ಎಂದು ಹಾಸ್ಯ ಚಟಾಕೆ ಹಾರಿಸಿದರು. ನಮ್ಮ ಅಧಿಕಾರವಧಿಯಲ್ಲಿ ಎಲ್ಲ ಜಾತಿ ಜನಾಂಗದವರಿಗೆ ರಾಜಕೀಯವಾಗಿ ಪ್ರಾತಿನಿಧ್ಯ ನೀಡಿರುವುದಾಗಿ ಹೇಳಿದರು.<br /> <br /> ಎಲ್ಲ ಜಾತಿ ಜನಾಂಗವನ್ನು ಒಂದೇ ದೃಷ್ಟಿಯಿಂದ ಕಾಣುವುದು ನಮ್ಮ ಸಂಸ್ಕೃತಿಯಾಗಿದೆ. ಎಲ್ಲ ಜಾತಿ ಜನಾಂಗದವರಿಗೆ ಆದ್ಯತೆ ಮೇರೆಗೆ ಶಾದಿಮಹಲ್, ಸಮುದಾಯ ಭವನ, ಕಲ್ಯಾಣ ಮಂಟಪ ನಿರ್ಮಿಸಿಕೊಡಲಾಗುವುದು ಎಂದರು.<br /> <br /> ಶಹಪುರದ ಏಕದಂಡಗಿ ಮಠದ ಕಾಳಹಸ್ತೇಂದ್ರ ಸ್ವಾಮೀಜಿ ಮಾತನಾಡಿ, ಚಿನ್ನ, ಬೆಳ್ಳಿ ಆಭರಣ ತಯಾರಕರ ಮೇಲೆ ನಡೆಯುತ್ತಿರುವ ಪೊಲೀಸ್ ದೌರ್ಜನ್ಯ ತಡೆಗಟ್ಟಬೇಕು. ಸೆಪ್ಟೆಂಬರ್ 17ರಂದು ವಿಶ್ವಕರ್ಮ ಜಯಂತಿಗೆ ರಜೆ ಘೋಷಿಸಿ ಸರ್ಕಾರವೇ ಜಯಂತಿಯನ್ನು ಆಚರಿಸಬೇಕು. ಪ್ರಾಧಿಕಾರದ ರಚನೆಯಲ್ಲಿ ವಿಶ್ವಕರ್ಮರನ್ನು ಸೇರಿಸಿಕೊಳ್ಳಬೇಕು ಎಂದು ಆಗ್ರಹಿಸಿದರು.<br /> <br /> ಸೂರ್ಯನಾರಾಯಣ ಸ್ವಾಮೀಜಿ ಮಾತನಾಡಿ, ರಾಜಕೀಯದಲ್ಲಿ ವಿಶ್ವಕರ್ಮ ಜನಾಂಗಕ್ಕೆ ಪ್ರಾತಿನಿಧ್ಯ ನೀಡಬೇಕು. ಪಂಚಕಸುಬುಗಳ ರಕ್ಷಣೆಗಾಗಿ ವಿಶ್ವಕರ್ಮ ವಿಶ್ವವಿದ್ಯಾಲಯ ಸ್ಥಾಪಿತವಾಗಬೇಕು. ಕಸುಬುಗಳ ಆಧಾರದಲ್ಲಿ ರಾಜ್ಯಮಟ್ಟದ ಪ್ರಶಸ್ತಿ ನೀಡಬೇಕು. ಕಸುಬುಗಳ ಅಭಿವೃದ್ಧಿ ನಿಗಮಕ್ಕೆ ನೂರು ಕೋಟಿ ರೂಪಾಯಿ ಬಿಡುಗಡೆ ಮಾಡಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದರು.<br /> <br /> ಪುರಸಭೆ ಅಧ್ಯಕ್ಷ ದೇವಿಂದ್ರಪ್ಪ ಕಳ್ಳಿಮನಿ, ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾದ ಪ್ರಧಾನ ಕಾರ್ಯದರ್ಶಿ ಐ.ಸಿ.ಪಂಚಾಳ, ಉತ್ತರ ಕರ್ನಾಟಕ ವಿಭಾಗದ ಸಂಚಾಲಕ ವಿರೇಂದ್ರ ಇನಾಂದಾರ್, ದೇವರಗೋನಾಲದ ಮೌನೇಶ್ವರ ದೇವಸ್ಥಾನ ಅರ್ಚಕ ನಿಂಗಯ್ಯ ಮುತ್ಯಾ, ಬಸವರಾಜ ನಾಯ್ಕಲ್, ಕೆ. ವೀರಪ್ಪ ಇದ್ದರು.<br /> <br /> ದೇವಿಂದ್ರಪ್ಪ ಪತ್ತಾರ ಪ್ರಾಸ್ತಾವಿಕ ಮಾತನಾಡಿದರು. ಕಾಳಪ್ಪ ಶಾಬಾದಿ ಸ್ವಾಗತಿಸಿದರು. ಮಹೇಶ ಕುಂಟೋಜಿ ನಿರೂಪಿಸಿದರು. ಮನೋಹರ ಕುಂಟೋಜಿ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸುರಪುರ: ‘ವಿಶ್ವಕರ್ಮರಿಂದ ಕಲೆ ವಿಶ್ವವ್ಯಾಪ್ತಿಯಾಗಲು ಸಾಧ್ಯವಾಗಿದೆ. ಕಲ್ಲಿನಲ್ಲಿ ಚಿತ್ತಾರ ಬಿಡಿಸುವ ಶಿಲ್ಪಿಗಳ ಬದುಕು ಶೋಚನಿಯ ಸ್ಥಿತಿಯಲ್ಲಿದೆ. ವಿಶ್ವಕರ್ಮರ ಅಭಿವೃದ್ಧಿಗೆ ಸರ್ಕಾರ ಆದ್ಯ ಗಮನ ಹರಿಸಬೇಕು’ ಎಂದು ಆನೆಗುಂದಿ ಸಂಸ್ಥಾನದ ಸರಸ್ವತಿ ಪೀಠಾಧೀಶರಾದ ಗುರುನಾಥೇಂದ್ರ ಮಹಾಸ್ವಾಮಿ ಹೇಳಿದರು.<br /> <br /> ಪಟ್ಟಣದ ಕಾಳಿಕಾದೇವಿ ಮಂದಿರದಲ್ಲಿ ಮಂಗಳವಾರ ವಿಶ್ವಕರ್ಮ ವಿಕಾಸ ಸಂಘ ಹಾಗೂ ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾ ತಾಲ್ಲೂಕು ಘಟಕ ಸಂಯುಕ್ತವಾಗಿ ಏರ್ಪಡಿಸಿದ್ದ ಮೌನೇಶ್ವರರ 7ನೇ ವರ್ಷದ ತೊಟ್ಟಿಲೋತ್ಸವ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಮಾತನಾಡಿದರು.<br /> <br /> ಮಾಜಿ ಸಂಸದ ರಾಜಾ ರಂಗಪ್ಪನಾಯಕ ಉದ್ಘಾಟಿಸಿ ಮಾತನಾಡಿ, ‘ಬಡಿಗೇರ ಬಾವಿ ಹತ್ತಿರದ ವಿಶ್ವಕರ್ಮ ಸಮಾಜಕ್ಕೆ ಸೇರಿದ ನಿವೇಶನದಲ್ಲಿ ವಿಶ್ವಕರ್ಮ ಕಲ್ಯಾಣ ಮಂಟಪ ನಿರ್ಮಾಣಕ್ಕೆ ನನ್ನ ಸಹೋದರ ಶಾಸಕ ರಾಜಾ ವೆಂಕಟಪ್ಪನಾಯಕ ನೆರವಿನ ಭರವಸೆ ನೀಡಿದ್ದಾರೆ’ ಎಂದರು.<br /> <br /> ‘ನಮ್ಮಲ್ಲಿ ಯಾವುದೇ ಜಾತಿ ಧರ್ಮಗಳ ಭೇದಭಾವವಿಲ್ಲ. ನಾವು ಕಾಣುವುದು ಎರಡೇ ಜಾತಿ ನಮ್ಮೊಂದಿಗಿರುವವರು ಒಂದು ಜಾತಿ. ವಿರೋಧಿಗಳದು ಇನ್ನೊಂದು ಜಾತಿ’ ಎಂದು ಹಾಸ್ಯ ಚಟಾಕೆ ಹಾರಿಸಿದರು. ನಮ್ಮ ಅಧಿಕಾರವಧಿಯಲ್ಲಿ ಎಲ್ಲ ಜಾತಿ ಜನಾಂಗದವರಿಗೆ ರಾಜಕೀಯವಾಗಿ ಪ್ರಾತಿನಿಧ್ಯ ನೀಡಿರುವುದಾಗಿ ಹೇಳಿದರು.<br /> <br /> ಎಲ್ಲ ಜಾತಿ ಜನಾಂಗವನ್ನು ಒಂದೇ ದೃಷ್ಟಿಯಿಂದ ಕಾಣುವುದು ನಮ್ಮ ಸಂಸ್ಕೃತಿಯಾಗಿದೆ. ಎಲ್ಲ ಜಾತಿ ಜನಾಂಗದವರಿಗೆ ಆದ್ಯತೆ ಮೇರೆಗೆ ಶಾದಿಮಹಲ್, ಸಮುದಾಯ ಭವನ, ಕಲ್ಯಾಣ ಮಂಟಪ ನಿರ್ಮಿಸಿಕೊಡಲಾಗುವುದು ಎಂದರು.<br /> <br /> ಶಹಪುರದ ಏಕದಂಡಗಿ ಮಠದ ಕಾಳಹಸ್ತೇಂದ್ರ ಸ್ವಾಮೀಜಿ ಮಾತನಾಡಿ, ಚಿನ್ನ, ಬೆಳ್ಳಿ ಆಭರಣ ತಯಾರಕರ ಮೇಲೆ ನಡೆಯುತ್ತಿರುವ ಪೊಲೀಸ್ ದೌರ್ಜನ್ಯ ತಡೆಗಟ್ಟಬೇಕು. ಸೆಪ್ಟೆಂಬರ್ 17ರಂದು ವಿಶ್ವಕರ್ಮ ಜಯಂತಿಗೆ ರಜೆ ಘೋಷಿಸಿ ಸರ್ಕಾರವೇ ಜಯಂತಿಯನ್ನು ಆಚರಿಸಬೇಕು. ಪ್ರಾಧಿಕಾರದ ರಚನೆಯಲ್ಲಿ ವಿಶ್ವಕರ್ಮರನ್ನು ಸೇರಿಸಿಕೊಳ್ಳಬೇಕು ಎಂದು ಆಗ್ರಹಿಸಿದರು.<br /> <br /> ಸೂರ್ಯನಾರಾಯಣ ಸ್ವಾಮೀಜಿ ಮಾತನಾಡಿ, ರಾಜಕೀಯದಲ್ಲಿ ವಿಶ್ವಕರ್ಮ ಜನಾಂಗಕ್ಕೆ ಪ್ರಾತಿನಿಧ್ಯ ನೀಡಬೇಕು. ಪಂಚಕಸುಬುಗಳ ರಕ್ಷಣೆಗಾಗಿ ವಿಶ್ವಕರ್ಮ ವಿಶ್ವವಿದ್ಯಾಲಯ ಸ್ಥಾಪಿತವಾಗಬೇಕು. ಕಸುಬುಗಳ ಆಧಾರದಲ್ಲಿ ರಾಜ್ಯಮಟ್ಟದ ಪ್ರಶಸ್ತಿ ನೀಡಬೇಕು. ಕಸುಬುಗಳ ಅಭಿವೃದ್ಧಿ ನಿಗಮಕ್ಕೆ ನೂರು ಕೋಟಿ ರೂಪಾಯಿ ಬಿಡುಗಡೆ ಮಾಡಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದರು.<br /> <br /> ಪುರಸಭೆ ಅಧ್ಯಕ್ಷ ದೇವಿಂದ್ರಪ್ಪ ಕಳ್ಳಿಮನಿ, ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾದ ಪ್ರಧಾನ ಕಾರ್ಯದರ್ಶಿ ಐ.ಸಿ.ಪಂಚಾಳ, ಉತ್ತರ ಕರ್ನಾಟಕ ವಿಭಾಗದ ಸಂಚಾಲಕ ವಿರೇಂದ್ರ ಇನಾಂದಾರ್, ದೇವರಗೋನಾಲದ ಮೌನೇಶ್ವರ ದೇವಸ್ಥಾನ ಅರ್ಚಕ ನಿಂಗಯ್ಯ ಮುತ್ಯಾ, ಬಸವರಾಜ ನಾಯ್ಕಲ್, ಕೆ. ವೀರಪ್ಪ ಇದ್ದರು.<br /> <br /> ದೇವಿಂದ್ರಪ್ಪ ಪತ್ತಾರ ಪ್ರಾಸ್ತಾವಿಕ ಮಾತನಾಡಿದರು. ಕಾಳಪ್ಪ ಶಾಬಾದಿ ಸ್ವಾಗತಿಸಿದರು. ಮಹೇಶ ಕುಂಟೋಜಿ ನಿರೂಪಿಸಿದರು. ಮನೋಹರ ಕುಂಟೋಜಿ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>