ಯಲಹಂಕದ ಹೊಯ್ಸಳ ಕ್ರೀಡಾಂಗಣದಲ್ಲಿ ನಡೆದ 74ನೇ ಸ್ವಾತಂತ್ರ್ಯೋತ್ಸವ ಸಮಾರಂಭದಲ್ಲಿ ಮಾತನಾಡಿದ ಅವರು, ‘ದೇಶಕ್ಕೆ ಸ್ವಾತಂತ್ರ್ಯ ತಂದುಕೊಡಲು ಹೋರಾಟನಡೆಸಿ ತ್ಯಾಗ, ಬಲಿದಾನಗಳನ್ನು ಮಾಡಿದ ಮಹಾಪುರುಷರಿಗೆ ಗೌರವ ಸಮರ್ಪಿಸಬೇಕು. ಜೊತೆಗೆ ಇಲ್ಲಿನ ಅನ್ನ, ನೀರು ಸೇರಿದಂತೆ ಸಕಲ ಸೌಕರ್ಯಗಳನ್ನು ಅನುಭವಿಸಿ, ದೇಶದ ವಿರುದ್ಧ ಮಾತನಾಡುವವರ ವಿರುದ್ಧ ಹೋರಾಡಬೇಕು’ ಎಂದರು.