ರಸ್ತೆಯಲ್ಲಿ ಹೋಗುತ್ತಿದ್ದವರು ಶವ ನೇತಾಡುವುದನ್ನು ಗಮನಿಸಿ ಪೊಲೀಸ್ ಠಾಣೆಗೆ ತಿಳಿಸಿದ್ದಾರೆ. ಪೊಲೀಸರು ಸ್ಥಳಕ್ಕೆ ಬಂದು ನೇಣು ಬಿಗಿದುಕೊಂಡಿದ್ದ ವ್ಯಕ್ತಿಯ ಕುಣಿಕೆಯನ್ನು ಕತ್ತರಿಸಿ ಕೆಳಕ್ಕೆ ಇಳಿಸಿದ್ದಾರೆ. ಅಷ್ಟರಲ್ಲಾಗಲೇ ಅವರು ಮೃತಪಟ್ಟಿದ್ದರು. ಮೃತರಿಗೆ ವಿವಾಹ ನಿಶ್ಚಯವಾಗಿದ್ದು ಎರಡು ತಿಂಗಳಲ್ಲಿ ಮದುವೆ ನಡೆಯಬೇಕಿತ್ತು. ವಿವಾಹಕ್ಕೆ ಸಂಬಂಧಿಸಿದಂತೆ ಸಮಸ್ಯೆಯಿತ್ತು. ಆ ಕಾರಣದಿಂದ ಅವರು ಕನಕಪುರದಲ್ಲಿ ಆತ್ಮಹತ್ಯೆ ಮಾಡಿಕೊಳ್ಳುವುದಕ್ಕೂ ಮುನ್ನ ಅಣ್ಣನಿಗೆ ಮಂಗಳವಾರ ಬೆಳಿಗ್ಗೆ ದೂರವಾಣಿ ಕರೆ ಮಾಡಿ ಪೊಲೀಸ್ ಠಾಣೆಯ ಪಕ್ಕದಲ್ಲಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದು ಹೆಣವನ್ನು ತೆಗೆದುಕೊಂಡು ಹೋಗುವಂತೆ ತಿಳಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.