ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ನೇಹಿತನನ್ನು ಇರಿದು ಕೊಂದ ಯುವಕ

Last Updated 13 ಡಿಸೆಂಬರ್ 2018, 13:40 IST
ಅಕ್ಷರ ಗಾತ್ರ

ರಾಮನಗರ: ಬೆಂಗಳೂರು ದಕ್ಷಿಣ ತಾಲೂಕಿನ ದೊಡ್ಡಬೆಲೆ ಗ್ರಾಮದಲ್ಲಿ ಬುಧವಾರ ರಾತ್ರಿ ಯುವಕನೊಬ್ಬ ಕುಡಿದ ಮತ್ತಿನಲ್ಲಿ ತನ್ನ ಸ್ನೇಹಿತನನ್ನೇ ಹತ್ಯೆ ಮಾಡಿದ್ದಾನೆ.

ಚಂದ್ರಬಾಬು (22) ಮೃತ ಯುವಕ. ಆತನ ಸ್ನೇಹಿತ ರಂಜಿತ್ (27) ಎಂಬಾತ ಆರೋಪಿ. ರಾತ್ರಿ ಇಬ್ಬರು ಮದ್ಯಪಾನ ಮಾಡಿದ್ದು, ಕ್ಷುಲ್ಲಕ ಕಾರಣಕ್ಕೆ ಜಗಳ ಆರಂಭವಾಗಿದೆ. ಈ ಸಂದರ್ಭ ಆರೋಪಿಯು ಡ್ರ್ಯಾಗರ್‌ನಿಂದ ಎದುರಾಳಿಗೆ ಇರಿದು ಪರಾರಿಯಾಗಿದ್ದಾನೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ಚಂದ್ರು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟ.

ರಾಜರಾಜೇಶ್ವರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಯಿತು. ಕುಂಬಳಗೂಡು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT