ನಗರದ ಎಂ.ಎಚ್. ಸಮೂಹ ಶಿಕ್ಷಣ ಸಂಸ್ಥೆ ಸಭಾಂಗಣದಲ್ಲಿ ಗುರುವಾರ ನಡೆದ ಸ್ಪಂದನಾ ಚಾರಿಟಬಲ್ ಟ್ರಸ್ಟ್ನ ಉದ್ಘಾಟನೆ ಸಮಾರಂಭದಲ್ಲಿ ಅವರು ಮಾತನಾಡಿದರು. ‘ಹಲವು ಅಪಮಾನ, ಕಷ್ಟಗಳನ್ನು ಎದುರಿಸಿ ಏನನ್ನಾದರೂ ಸಾಧಿಸಬೇಕು ಎನ್ನುವ ಛಲದಿಂದ ಮುನ್ನುಗ್ಗಿ ಈ ಸಾಧನೆ ಮಾಡಿದ್ದೇನೆ. ಇದರಿಂದ ಜಾಗತಿಕ ಮಟ್ಟದ ಮನ್ನಣೆ ಸಿಗುತ್ತಿದೆ. ವಿದೇಶಗಳಿಂದ ಅವಕಾಶಗಳು ಬಂದಿವೆ. ಆದರೆ ನನ್ನ ದೇಶಕ್ಕಾಗಿ ದುಡಿಯುವ ನಿರ್ಧಾರ ಮಾಡಿದ್ದೇನೆ’ ಎಂದರು.