<p><strong>ವಿಜಯಪುರ: </strong>ಶುದ್ಧ ಕುಡಿಯುವ ನೀರಿನ ಘಟಕಗಳು ಎಷ್ಟಿವೆ, ಅವುಗಳಲ್ಲಿ ಎಷ್ಟು ಚಾಲನೆಯಲ್ಲಿವೆ, ಮೇವು ಬ್ಯಾಂಕ್ಗಳ ಸ್ಥಿತಿ ಹೇಗಿದೆ, ಮೇವು ಪೂರೈಕೆ ಆಗುತ್ತಿದೆಯೇ, ಅಂಗನವಾಡಿ ಆಹಾರವನ್ನು ಮಾರಾಟ ಮಾಡುತ್ತಿದ್ದರೂ ಏಕೆ ಕ್ರಮಕೈಗೊಳ್ಳುತ್ತಿಲ್ಲ.</p>.<p>–ಇವು ಜಿಲ್ಲಾ ಪಂಚಾಯಿತಿ ಸದಸ್ಯರು ಅಧಿಕಾರಿಗಳಿಗೆ ಖಾರವಾಗಿ ಕೇಳಿದ ಪ್ರಶ್ನೆಗಳು.</p>.<p>ಸಂದರ್ಭ: ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ನಡೆದ ಸಾಮಾನ್ಯ ಸಭೆ.</p>.<p>ಸಭೆಯ ಆರಂಭದಲ್ಲಿ ಅನುಪಾಲನಾ ವರದಿ ಮೇಲಿನ ಚರ್ಚೆಯನ್ನು ಕೈಗೆತ್ತಿಕೊಳ್ಳಲಾಯಿತು.<br />ಈ ವೇಳೆ ಮಾತನಾಡಿದ ಸದಸ್ಯರೊಬ್ಬರು, ‘ತೋಟಗಾರಿಕೆ ಇಲಾಖೆಯ ವಿವಿಧ ಯೋಜನೆಗಳಿಗೆ ಫಲಾನುಭವಿಗಳನ್ನು ಹೇಗೆ ಆಯ್ಕೆ ಮಾಡಲಾಗುತ್ತದೆ. ಸರ್ಕಾರದ ಮಾರ್ಗಸೂಚಿಯನ್ನು ಅನುಸರಿಸಲಾಗುತ್ತದೆಯೇ’ ಎಂದು ಸಿಇಒ ಅವರನ್ನು ಪ್ರಶ್ನಿಸಿದರು.</p>.<p>ಇದಕ್ಕೆ ಉತ್ತರಿಸಿದ ಸಿಇಒ, ‘ಸರ್ಕಾರದ ಮಾರ್ಗಸೂಚಿ ಅನ್ವಯವೇ ಆಯ್ಕೆ ಮಾಡಲಾಗುತ್ತದೆ. ಫಲಾನುಭವಿಗಳ ಆಯ್ಕೆ ತಪ್ಪಾಗಿದ್ದಲ್ಲಿ, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮಜರುಗಿಸಲಾಗುತ್ತದೆ’ ಎಂದರು.</p>.<p>‘ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಸಂತೋಷ ಇನಾಂದಾರ ಅವರು, ಸರಿಯಾಗಿ ಮಾಹಿತಿ ನೀಡುವುದಿಲ್ಲ. ದೂರವಾಣಿ ಕರೆ ಮಾಡಿದರೆ ಸ್ವೀಕರಿಸುವುದಿಲ್ಲ. ತೋಟಗಾರಿಕೆ ಇಲಾಖೆಯಿಂದ ಬಡ ರೈತರಿಗೆ ಅನ್ಯಾಯವಾಗುತ್ತಿದೆ’ ಎಂದು ಸದಸ್ಯೆಯೊಬ್ಬರು ದೂರಿದರು.</p>.<p>ಕೃಷಿ ಇಲಾಖೆ ಜಂಟಿ ನಿರ್ದೇಶಕ ಶಿವಕುಮಾರ್ ಮಾತನಾಡಿ, ‘ಹೋದ ವರ್ಷ ಕೃಷಿ ಹೊಂಡಕ್ಕಾಗಿ 2,600 ಅರ್ಜಿಗಳು ಬಂದಿದ್ದವು. ಈ ವರ್ಷ 1,500 ಅರ್ಜಿ ಬಂದಿದ್ದು, ಈ ಪೈಕಿ 560 ಕೃಷಿ ಹೊಂಡಕ್ಕೆ ಸರ್ಕಾರ ಅನುದಾನ ಬಿಡುಗಡೆ ಮಾಡಿದೆ. ಜಿಲ್ಲೆಯಲ್ಲಿ 3.62 ಲಕ್ಷ ರೈತರಿದ್ದು, ಕೃಷಿ ಸಮ್ಮಾನ್ ಯೋಜನೆಯಡಿ 3.04 ಲಕ್ಷ ರೈತರು ಹೆಸರು ನೋಂದಾಯಿಸಿಕೊಂಡಿದ್ದಾರೆ. ಈ ಪೈಕಿ 2.45 ಲಕ್ಷ ಅರ್ಜಿಗಳನ್ನು ಆನ್ಲೈನ್ನಲ್ಲಿ ಸೇರಿಸಲಾಗಿದೆ’ ಎಂದು ಮಾಹಿತಿ ನೀಡಿದರು.</p>.<p>‘ಪ್ರಭಾರ’ಕ್ಕೆ ಆಕ್ರೋಶ: ‘ಗ್ರಾಮೀಣ ನೀರು ಸರಬರಾಜು ಇಲಾಖೆಗೆ ಯಾವಾಗಲೂ ಪ್ರಭಾರ ಅಧಿಕಾರಿಗಳನ್ನೇ ನೇಮಕ ಮಾಡಲಾಗುತ್ತದೆ. ಹೀಗೆ ಬಂದವರೂ ಬಹಳ ದಿನ ಇರುವುದಿಲ್ಲ. ಸಮಸ್ಯೆ ಹೇಳಲು ಕರೆ ಮಾಡಿದರೆ ಈ ಹಿಂದೆ ಇದ್ದವರು ಇರುವುದಿಲ್ಲ, ಬೇರೊಬ್ಬರು ಕರೆ ಸ್ವೀಕರಿಸುತ್ತಾರೆ. ಅವರಿಗೆ ಮತ್ತೆ ಹಳೆಯ ಕಥೆ ಹೇಳಬೇಕು. ಹೀಗಾದರೆ ಹೇಗೆ’ ಎಂದು ಸದಸ್ಯೆಯೊಬ್ಬರು ಪ್ರಶ್ನಿಸಿದರು.</p>.<p>‘ಜಿಲ್ಲೆಯಾದ್ಯಂತ ಬಹುತೇಕ ಇಲಾಖೆಗಳಲ್ಲಿ ಪ್ರಭಾರಿಗಳದ್ದೇ ಕಾರುಬಾರು ಇದೆ. ಇವತ್ತು ಬರುತ್ತಾರೆ, ನಾಳೆ ಹೋಗುತ್ತಾರೆ. ವಾರಕ್ಕೊಮ್ಮೆ ಅಧಿಕಾರಿಗಳು ಬದಲಾದರೆ ಹೇಗೆ’ ಎಂದು ಆಕ್ರೋಶಭರಿತರಾಗಿ ನುಡಿದರು.</p>.<p>ಕುಡಿಯುವ ನೀರು, ಮೇವು ಪೂರೈಕೆ, ಅರಣ್ಯ ಇಲಾಖೆಯಿಂದ ಸಸಿ ನೆಡುವುದು, ಬಿಸಿಎಂ ಹಾಸ್ಟೆಲ್ಗಳ ಸ್ಥಿತಿಗತಿ ಸೇರಿದಂತೆ ಅನೇಕ ವಿಷಯಗಳ ಬಗ್ಗೆ ಸಭೆಯಲ್ಲಿ ಕಾವೇರಿದ ಚರ್ಚೆ ನಡೆಯಿತು.</p>.<p>ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಶಿವಯೋಗಪ್ಪ ನೇದಲಗಿ, ಉಪಾಧ್ಯಕ್ಷ ಪ್ರಭುಗೌಡ ದೇಸಾಯಿ, ವಿವಿಧ ಸ್ಥಾಯಿ ಸಮಿತಿಗಳ ಅಧ್ಯಕ್ಷರಾದ ಕಲ್ಲಪ್ಪ ಕೊಡಬಾಗಿ, ಕವಿತಾ ರಾಠೋಡ, ಜಯಸಿಂಗ್ ನಾಯಕ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ: </strong>ಶುದ್ಧ ಕುಡಿಯುವ ನೀರಿನ ಘಟಕಗಳು ಎಷ್ಟಿವೆ, ಅವುಗಳಲ್ಲಿ ಎಷ್ಟು ಚಾಲನೆಯಲ್ಲಿವೆ, ಮೇವು ಬ್ಯಾಂಕ್ಗಳ ಸ್ಥಿತಿ ಹೇಗಿದೆ, ಮೇವು ಪೂರೈಕೆ ಆಗುತ್ತಿದೆಯೇ, ಅಂಗನವಾಡಿ ಆಹಾರವನ್ನು ಮಾರಾಟ ಮಾಡುತ್ತಿದ್ದರೂ ಏಕೆ ಕ್ರಮಕೈಗೊಳ್ಳುತ್ತಿಲ್ಲ.</p>.<p>–ಇವು ಜಿಲ್ಲಾ ಪಂಚಾಯಿತಿ ಸದಸ್ಯರು ಅಧಿಕಾರಿಗಳಿಗೆ ಖಾರವಾಗಿ ಕೇಳಿದ ಪ್ರಶ್ನೆಗಳು.</p>.<p>ಸಂದರ್ಭ: ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ನಡೆದ ಸಾಮಾನ್ಯ ಸಭೆ.</p>.<p>ಸಭೆಯ ಆರಂಭದಲ್ಲಿ ಅನುಪಾಲನಾ ವರದಿ ಮೇಲಿನ ಚರ್ಚೆಯನ್ನು ಕೈಗೆತ್ತಿಕೊಳ್ಳಲಾಯಿತು.<br />ಈ ವೇಳೆ ಮಾತನಾಡಿದ ಸದಸ್ಯರೊಬ್ಬರು, ‘ತೋಟಗಾರಿಕೆ ಇಲಾಖೆಯ ವಿವಿಧ ಯೋಜನೆಗಳಿಗೆ ಫಲಾನುಭವಿಗಳನ್ನು ಹೇಗೆ ಆಯ್ಕೆ ಮಾಡಲಾಗುತ್ತದೆ. ಸರ್ಕಾರದ ಮಾರ್ಗಸೂಚಿಯನ್ನು ಅನುಸರಿಸಲಾಗುತ್ತದೆಯೇ’ ಎಂದು ಸಿಇಒ ಅವರನ್ನು ಪ್ರಶ್ನಿಸಿದರು.</p>.<p>ಇದಕ್ಕೆ ಉತ್ತರಿಸಿದ ಸಿಇಒ, ‘ಸರ್ಕಾರದ ಮಾರ್ಗಸೂಚಿ ಅನ್ವಯವೇ ಆಯ್ಕೆ ಮಾಡಲಾಗುತ್ತದೆ. ಫಲಾನುಭವಿಗಳ ಆಯ್ಕೆ ತಪ್ಪಾಗಿದ್ದಲ್ಲಿ, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮಜರುಗಿಸಲಾಗುತ್ತದೆ’ ಎಂದರು.</p>.<p>‘ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಸಂತೋಷ ಇನಾಂದಾರ ಅವರು, ಸರಿಯಾಗಿ ಮಾಹಿತಿ ನೀಡುವುದಿಲ್ಲ. ದೂರವಾಣಿ ಕರೆ ಮಾಡಿದರೆ ಸ್ವೀಕರಿಸುವುದಿಲ್ಲ. ತೋಟಗಾರಿಕೆ ಇಲಾಖೆಯಿಂದ ಬಡ ರೈತರಿಗೆ ಅನ್ಯಾಯವಾಗುತ್ತಿದೆ’ ಎಂದು ಸದಸ್ಯೆಯೊಬ್ಬರು ದೂರಿದರು.</p>.<p>ಕೃಷಿ ಇಲಾಖೆ ಜಂಟಿ ನಿರ್ದೇಶಕ ಶಿವಕುಮಾರ್ ಮಾತನಾಡಿ, ‘ಹೋದ ವರ್ಷ ಕೃಷಿ ಹೊಂಡಕ್ಕಾಗಿ 2,600 ಅರ್ಜಿಗಳು ಬಂದಿದ್ದವು. ಈ ವರ್ಷ 1,500 ಅರ್ಜಿ ಬಂದಿದ್ದು, ಈ ಪೈಕಿ 560 ಕೃಷಿ ಹೊಂಡಕ್ಕೆ ಸರ್ಕಾರ ಅನುದಾನ ಬಿಡುಗಡೆ ಮಾಡಿದೆ. ಜಿಲ್ಲೆಯಲ್ಲಿ 3.62 ಲಕ್ಷ ರೈತರಿದ್ದು, ಕೃಷಿ ಸಮ್ಮಾನ್ ಯೋಜನೆಯಡಿ 3.04 ಲಕ್ಷ ರೈತರು ಹೆಸರು ನೋಂದಾಯಿಸಿಕೊಂಡಿದ್ದಾರೆ. ಈ ಪೈಕಿ 2.45 ಲಕ್ಷ ಅರ್ಜಿಗಳನ್ನು ಆನ್ಲೈನ್ನಲ್ಲಿ ಸೇರಿಸಲಾಗಿದೆ’ ಎಂದು ಮಾಹಿತಿ ನೀಡಿದರು.</p>.<p>‘ಪ್ರಭಾರ’ಕ್ಕೆ ಆಕ್ರೋಶ: ‘ಗ್ರಾಮೀಣ ನೀರು ಸರಬರಾಜು ಇಲಾಖೆಗೆ ಯಾವಾಗಲೂ ಪ್ರಭಾರ ಅಧಿಕಾರಿಗಳನ್ನೇ ನೇಮಕ ಮಾಡಲಾಗುತ್ತದೆ. ಹೀಗೆ ಬಂದವರೂ ಬಹಳ ದಿನ ಇರುವುದಿಲ್ಲ. ಸಮಸ್ಯೆ ಹೇಳಲು ಕರೆ ಮಾಡಿದರೆ ಈ ಹಿಂದೆ ಇದ್ದವರು ಇರುವುದಿಲ್ಲ, ಬೇರೊಬ್ಬರು ಕರೆ ಸ್ವೀಕರಿಸುತ್ತಾರೆ. ಅವರಿಗೆ ಮತ್ತೆ ಹಳೆಯ ಕಥೆ ಹೇಳಬೇಕು. ಹೀಗಾದರೆ ಹೇಗೆ’ ಎಂದು ಸದಸ್ಯೆಯೊಬ್ಬರು ಪ್ರಶ್ನಿಸಿದರು.</p>.<p>‘ಜಿಲ್ಲೆಯಾದ್ಯಂತ ಬಹುತೇಕ ಇಲಾಖೆಗಳಲ್ಲಿ ಪ್ರಭಾರಿಗಳದ್ದೇ ಕಾರುಬಾರು ಇದೆ. ಇವತ್ತು ಬರುತ್ತಾರೆ, ನಾಳೆ ಹೋಗುತ್ತಾರೆ. ವಾರಕ್ಕೊಮ್ಮೆ ಅಧಿಕಾರಿಗಳು ಬದಲಾದರೆ ಹೇಗೆ’ ಎಂದು ಆಕ್ರೋಶಭರಿತರಾಗಿ ನುಡಿದರು.</p>.<p>ಕುಡಿಯುವ ನೀರು, ಮೇವು ಪೂರೈಕೆ, ಅರಣ್ಯ ಇಲಾಖೆಯಿಂದ ಸಸಿ ನೆಡುವುದು, ಬಿಸಿಎಂ ಹಾಸ್ಟೆಲ್ಗಳ ಸ್ಥಿತಿಗತಿ ಸೇರಿದಂತೆ ಅನೇಕ ವಿಷಯಗಳ ಬಗ್ಗೆ ಸಭೆಯಲ್ಲಿ ಕಾವೇರಿದ ಚರ್ಚೆ ನಡೆಯಿತು.</p>.<p>ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಶಿವಯೋಗಪ್ಪ ನೇದಲಗಿ, ಉಪಾಧ್ಯಕ್ಷ ಪ್ರಭುಗೌಡ ದೇಸಾಯಿ, ವಿವಿಧ ಸ್ಥಾಯಿ ಸಮಿತಿಗಳ ಅಧ್ಯಕ್ಷರಾದ ಕಲ್ಲಪ್ಪ ಕೊಡಬಾಗಿ, ಕವಿತಾ ರಾಠೋಡ, ಜಯಸಿಂಗ್ ನಾಯಕ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>