ಘಟನೆಯಿಂದ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕು ಬಸ್ಸುಗಳು, ಅಪಘಾತ ಮಾಡಿದ ಟ್ಯಾಂಕರ್ ಸೇರಿದಂತೆ ಅದೇ ಕಂಪೆನಿಯ 3 ಟ್ಯಾಂಕರ್ಗಳು, 10ಕ್ಕೂ ಹೆಚ್ಚು ಕಾರುಗಳು, ಬೈಕುಗಳನ್ನು ಜಖಂಗೊಂಡವು. ಮೃತದೇಹವನ್ನು ಅದೇ ಸ್ಥಳದಲ್ಲಿಟ್ಟು ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಬರುವವರೆಗೂ ಕದಲುವುದಿಲ್ಲ ಎಂದು ಮಾಜಿ ಶಾಸಕ ಎಚ್.ಎಂ.ವಿಶ್ವನಾಥ್ ನೇತೃತ್ವದಲ್ಲಿ ಧರಣಿ ನಡೆಸಿದರು. ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ರಸ್ತೆ ವಿಸ್ತರಣೆಯನ್ನು ಕೂಡಲೆ ಮಾಡುವುದಾಗಿ ಭರವಸೆ ನೀಡಿದ ನಂತರ ಪ್ರತಿಭಟನೆ ಹಿಂಪಡೆಯಲಾಯಿತು.