<p>ಮಂಡ್ಯ: ಜಿಲ್ಲೆಯ ಅಬಲವಾಡಿಯಲ್ಲಿ ನಡೆದಿದೆ ಎನ್ನಲಾದ ಮರ್ಯಾದಾ ಹತ್ಯೆ ಪ್ರಕರಣದ ಸತ್ಯಾ ಸತ್ಯತೆ ಅರಿಯಲು ಇಡೀ ಪ್ರಕರಣದ ತನಿಖೆಯನ್ನು ಸಿಬಿಐಗೆ ಒಪ್ಪಿಸಬೇಕು ಎಂದು ಆಗ್ರಹಪಡಿಸಿ ದಲಿತ ಸಂಘರ್ಷ ಸಮಿತಿ ಸಮನ್ವಯ ವೇದಿಕೆ ಕಾರ್ಯಕರ್ತರು ಬುಧವಾರ ನಗರದಲ್ಲಿ ಮೌನ ಮೆರವಣಿಗೆ ನಡೆಸಿದರು.<br /> <br /> ಸಿಲ್ವರ್ ಜ್ಯೂಬಿಲಿ ಪಾರ್ಕ್ನಿಂದ ಮೈಸೂರು-ಬೆಂಗಳೂರು ಹೆದ್ದಾರಿ ಮೂಲಕ ಮೌನ ಜಾಥಾದಲ್ಲಿ ತೆರಳಿದ ಪ್ರತಿಭಟನಕಾರರು, ಜಿಲ್ಲಾಧಿಕಾರಿಗಳ ಕಚೇರಿ ಸಿಬ್ಬಂದಿಗೆ ಮನವಿ ಸಲ್ಲಿಸಿದರು. ಮೆರವಣಿಗೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಹಾಜರಿದ್ದರು.<br /> <br /> ಸುವರ್ಣಾ ಹತ್ಯೆ ಬಗೆಗಿನ ಒಟ್ಟಾರೆ ಘಟನೆ ಕುರಿತು ಪೊಲೀಸರ ಗಮನಕ್ಕೆ ಬಂದಿದ್ದರೂ ಕ್ರಮ ಕೈಗೊಂಡಿಲ್ಲದೇ ಇರುವುದು ಖಂಡನೀಯ. ಪೊಲೀಸರು ತನಿಖೆ ಚುರುಕುಗೊಳಿಸಿದೆ, ಮೌನವಾಗಿರುವುದು ಶಂಕಾಸ್ಪದವಾಗಿದೆ ಎಂದು ಟೀಕಿಸಿದರು.<br /> <br /> ತನಿಖೆಯ ಪ್ರಗತಿ ಗಮನಿಸಿದರೆ, ಪೊಲೀಸರೂ ರಾಜಕೀಯ ಒತ್ತಡಕ್ಕೆ ಮಣಿದಂತಿದೆ. ಹೀಗಾಗಿ, ಪ್ರಕರಣದ ಸತ್ಯಾಸತ್ಯತೆ ಮುಚ್ಚಿ ಹೋಗುವ ಸಾಧ್ಯತೆಯಿದ್ದು, ನ್ಯಾಯ ಸಿಗುವುದು ಕಷ್ಟವಾಗಲಿದೆ. ಈ ಹಿನ್ನೆಲೆಯಲ್ಲಿ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಒತ್ತಾಯಿಸಿದರು.<br /> <br /> ಪ್ರತಿಭಟನೆಯಲ್ಲಿ ಸಾಹಿತಿ ಪ್ರೊ.ಎಚ್.ಎಲ್.ಕೇಶವಮೂರ್ತಿ, ದಲಿತ ಸಂಘರ್ಷ ಸಮಿತಿ ಸಮನ್ವಯ ವೇದಿಕೆಯ ಗುರುಪ್ರಸಾದ್ ಕೆರೆಗೋಡು, ಎಂ.ಬಿ.ಶ್ರೀನಿವಾಸ್, ವೆಂಕಟಗಿರಿಯಯ್ಯ, ಎಂ.ನಾಗರಾಜಯ್ಯ, ಎಂ.ವಿ.ಕೃಷ್ಣ, ಅನ್ನದಾನಿ ಇತರರು ಇದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಂಡ್ಯ: ಜಿಲ್ಲೆಯ ಅಬಲವಾಡಿಯಲ್ಲಿ ನಡೆದಿದೆ ಎನ್ನಲಾದ ಮರ್ಯಾದಾ ಹತ್ಯೆ ಪ್ರಕರಣದ ಸತ್ಯಾ ಸತ್ಯತೆ ಅರಿಯಲು ಇಡೀ ಪ್ರಕರಣದ ತನಿಖೆಯನ್ನು ಸಿಬಿಐಗೆ ಒಪ್ಪಿಸಬೇಕು ಎಂದು ಆಗ್ರಹಪಡಿಸಿ ದಲಿತ ಸಂಘರ್ಷ ಸಮಿತಿ ಸಮನ್ವಯ ವೇದಿಕೆ ಕಾರ್ಯಕರ್ತರು ಬುಧವಾರ ನಗರದಲ್ಲಿ ಮೌನ ಮೆರವಣಿಗೆ ನಡೆಸಿದರು.<br /> <br /> ಸಿಲ್ವರ್ ಜ್ಯೂಬಿಲಿ ಪಾರ್ಕ್ನಿಂದ ಮೈಸೂರು-ಬೆಂಗಳೂರು ಹೆದ್ದಾರಿ ಮೂಲಕ ಮೌನ ಜಾಥಾದಲ್ಲಿ ತೆರಳಿದ ಪ್ರತಿಭಟನಕಾರರು, ಜಿಲ್ಲಾಧಿಕಾರಿಗಳ ಕಚೇರಿ ಸಿಬ್ಬಂದಿಗೆ ಮನವಿ ಸಲ್ಲಿಸಿದರು. ಮೆರವಣಿಗೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಹಾಜರಿದ್ದರು.<br /> <br /> ಸುವರ್ಣಾ ಹತ್ಯೆ ಬಗೆಗಿನ ಒಟ್ಟಾರೆ ಘಟನೆ ಕುರಿತು ಪೊಲೀಸರ ಗಮನಕ್ಕೆ ಬಂದಿದ್ದರೂ ಕ್ರಮ ಕೈಗೊಂಡಿಲ್ಲದೇ ಇರುವುದು ಖಂಡನೀಯ. ಪೊಲೀಸರು ತನಿಖೆ ಚುರುಕುಗೊಳಿಸಿದೆ, ಮೌನವಾಗಿರುವುದು ಶಂಕಾಸ್ಪದವಾಗಿದೆ ಎಂದು ಟೀಕಿಸಿದರು.<br /> <br /> ತನಿಖೆಯ ಪ್ರಗತಿ ಗಮನಿಸಿದರೆ, ಪೊಲೀಸರೂ ರಾಜಕೀಯ ಒತ್ತಡಕ್ಕೆ ಮಣಿದಂತಿದೆ. ಹೀಗಾಗಿ, ಪ್ರಕರಣದ ಸತ್ಯಾಸತ್ಯತೆ ಮುಚ್ಚಿ ಹೋಗುವ ಸಾಧ್ಯತೆಯಿದ್ದು, ನ್ಯಾಯ ಸಿಗುವುದು ಕಷ್ಟವಾಗಲಿದೆ. ಈ ಹಿನ್ನೆಲೆಯಲ್ಲಿ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಒತ್ತಾಯಿಸಿದರು.<br /> <br /> ಪ್ರತಿಭಟನೆಯಲ್ಲಿ ಸಾಹಿತಿ ಪ್ರೊ.ಎಚ್.ಎಲ್.ಕೇಶವಮೂರ್ತಿ, ದಲಿತ ಸಂಘರ್ಷ ಸಮಿತಿ ಸಮನ್ವಯ ವೇದಿಕೆಯ ಗುರುಪ್ರಸಾದ್ ಕೆರೆಗೋಡು, ಎಂ.ಬಿ.ಶ್ರೀನಿವಾಸ್, ವೆಂಕಟಗಿರಿಯಯ್ಯ, ಎಂ.ನಾಗರಾಜಯ್ಯ, ಎಂ.ವಿ.ಕೃಷ್ಣ, ಅನ್ನದಾನಿ ಇತರರು ಇದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>